ಯುಎಪಿಎ ಪ್ರಕರಣದಲ್ಲಿ ಮಾಜಿ ನಕ್ಸಲರ ಖುಲಾಸೆ; ಲತಾ, ರವೀಂದ್ರ, ವನಜಾಕ್ಷಿಗೆ ನಿರಾಳ

Date:

ಸರ್ಕಾರಕ್ಕೆ ಇತ್ತೀಚೆಗೆ ಶರಣಾಗಿದ್ದ ನಕ್ಸಲ್‌ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿಯವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಪ್ರಕರಣಗಳಲ್ಲಿ, ಅವರನ್ನು ಖುಲಾಸೆ ಮಾಡಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಗುರುವಾರ ತೀರ್ಪು ನೀಡಿದೆ.

ಶೃಂಗೇರಿಯ ಬುಕ್ಕಡಿಬೈಲು ಬಸ್‌ ನಿಲ್ದಾಣದ ಅಂಗಡಿಯೊಂದರ ಗೋಡೆ ಮೇಲೆ ಲತಾ, ರವೀಂದ್ರ ಮತ್ತು ಸಾವಿತ್ರಿಯವರು ಕರಪತ್ರಗಳನ್ನು ಅಂಟಿಸಿ, ಸರ್ಕಾರಿ ವಿರೋಧಿ ಘೋಷಣೆ ಕೂಗಿದ್ದರೆಂಬ ವಿಷಯವಾಗಿ 2009ರಂದು ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ಯುಎಪಿಎ ಪ್ರಕರಣ ದಾಖಲಿಸಲಾಗಿತ್ತು.

ಲತಾ, ರವೀಂದ್ರ ಮತ್ತು ವನಜಾಕ್ಷಿ ಅವರು ಶೃಂಗೇರಿ ತಾಲೂಕಿನ ನೆಮ್ಮಾರಿನಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ಗಂಗಾಧರ ಶೆಟ್ಟಿ ಎಂಬುವವರ ಬೈಕ್‌ ಸುಟ್ಟಿದ್ದರು ಮತ್ತು ಮಾವೋವಾದಿ ಪರ ಘೋಷಣೆ ಕೂಗಿದ್ದರು ಎಂಬ ಆರೋಪದಲ್ಲಿ 2005ರರಂದು ಪ್ರಕರಣ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಡಗಾರು ಲತಾ ಮತ್ತು ಇತರರು 2018ರಲ್ಲಿ ಥಣಿಕೋಡು ಅರಣ್ಯ ಚೆಕ್‌ಪೋಸ್ಟ್‌ನಲ್ಲಿ ಸ್ಪೋಟಕ ಎಸೆದು ದಾಖಲೆಗಳನ್ನು ಸುಟ್ಟಿದ್ದರು. ₹34,000 ನಷ್ಟ ಉಂಟುಮಾಡಿದ್ದರು ಎಂದು ಮತ್ತೊಂದು ಯುಎಪಿಎ ಪ್ರಕರಣ ದಾಖಲಿಸಲಾಗಿತ್ತು.

ಬೆಂಗಳೂರಿನ ಯುಎಪಿಎ ಪ್ರಕರಣ ವಿಶೇಷ ನ್ಯಾಯಾಲಯವು ಈ ಪ್ರಕರಣಗಳ ವಿಚಾರಣೆ ನಡೆಸಿದ್ದು, “ಈ ಎಲ್ಲ ಪ್ರಕರಣಗಳಲ್ಲಿ, ಈ ನಾಲ್ವರೇ ಕೃತ್ಯ ಎಸಗಿದ್ದಾರೆ ಎಂಬುದನ್ನು ಸಾಬೀತು ಮಾಡುವಲ್ಲಿ ತನಿಖಾಧಿಕಾರಿಗಳು ವಿಫಲರಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಿರುವ ಪ್ರಕರಣಗಳನ್ನು ವಜಾ ಮಾಡಬಹುದಾಗಿದೆ” ಎಂದು ನ್ಯಾಯಾಧೀಶ ಸಿ ಎಂ ಗಂಗಾಧರ ಅವರು ತೀರ್ಪು ನೀಡಿದ್ದಾರೆ.

ನಕ್ಸಲ್ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಲತಾ, ಕೋಟೆಹೊಂಡ ರವೀಂದ್ರ ಮತ್ತು ವನಜಾಕ್ಷಿ ಸೇರಿದಂತೆ ಆರು ಮಂದಿ ಇತ್ತೀಚೆಗೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗಿದ್ದನ್ನು ಸ್ಮರಿಸಬಹುದಾಗಿದೆ.

ಇದನ್ನೂ ಓದಿದ್ದೀರಾ? ಬಳ್ಳಾರಿ | ಚೀಲದಲ್ಲೇ ಮೊಳಕೆಯೊಡೆದ ಜೋಳ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಆರೋಪಿಗಳ ಪರವಾಗಿ ವಕೀಲ ಶಿವಮಣಿಧನ್ ವಾದ ಮಂಡಿಸಿದ್ದರು.

“ಆರೋಪ ಪಟ್ಟಿಯಲ್ಲಿ ಆರೋಪಿಗಳು ಅಪರಾಧ ಎಸಗಿದ್ದಾರೆಂದು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಯಾವುದೇ ಪುರಾವೆಗಳನ್ನು ಒದಗಿಸಲು ವಿಫಲವಾಗಿದೆ. ಯಾವುದೇ ಸ್ವತಂತ್ರ ಸಾಕ್ಷಿಗಳೂ ಪ್ರಾಸಿಕ್ಯೂಷನನ್‌ಗೆ ಬೆಂಬಲ ನೀಡಲಿಲ್ಲ. ಯುಎಪಿಎ ಅಡಿಯಲ್ಲಿ ಅಪರಾಧಕ್ಕೆ ಕಾನೂನು ಕ್ರಮ ಜರುಗಿಸಲು ಕಾನೂನಿನಡಿಯಲ್ಲಿ ನಿಗದಿಪಡಿಸಿದ 14 ದಿನಗಳಲ್ಲಿ ಅನುಮತಿ ಪಡೆಯಲಾಗಿಲ್ಲ. ವಿಶೇಷ ನ್ಯಾಯಾಲಯವು ಈ ಮೂರು ಪ್ರಕರಣಗಳಲ್ಲಿನ ಎಲ್ಲ ಅಪರಾಧಗಳಿಂದ ಆರೋಪಿಗಳನ್ನು ಖುಲಾಸೆಗೊಳಿಸಿದೆ, ನ್ಯಾಯವಾದಿಯಾಗಿ ನ್ಯಾಯ ಒದಗಿಸಲು ನನ್ನ ಪ್ರಯತ್ನ ಮಾಡಿದ್ದೇನೆ” ಎಂದು ವಕೀಲ ಶಿವಮಣಿಧನ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...