ಬೆಂಗಳೂರು | ಕನ್ನಡದ ಮೊದಲ ಖಾಸಗಿ ಉಪಗ್ರಹ ವಾಹಿನಿ ‘ಉದಯ ಟಿವಿ’ ಅಧ್ಯಕ್ಷ ಸೆಲ್ವಂ ನಿಧನ

Date:

ಕನ್ನಡದ ಮೊದಲ ಖಾಸಗಿ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷ, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದ ಷಣ್ಮುಗ ಸುಂದರಂ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 84 ವರ್ಷವಾಗಿತ್ತು.

ಸೆಲ್ವಂ ಇಂದು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯಿತು. ಆದರೇ ಚಿಕಿತ್ಸೆ ಫಲಿಸದೇ ಸೆಲ್ವಂ ನಿಧನರಾಗಿರುವುದಾಗಿ ತಿಳಿದು ಬಂದಿದೆ.

1994ರ ಜೂನ್‌ನಲ್ಲಿ ಉದಯ ಟಿವಿ ಸ್ಥಾಪನೆಯಾಗಿತ್ತು. ತಮಿಳುನಾಡಿನ ಚೆನ್ನೈನಲ್ಲಿ ಇದು ಪ್ರಸಾರ ಆರಂಭಿಸಿತ್ತು. ಇದನ್ನು ಸನ್ ಟಿವಿಯ ಅಧ್ಯಕ್ಷರಾದ ಕಲಾನಿಧಿ ಮಾರನ್ ಪ್ರಾರಂಭಿಸಿದರು. ಇದು ಕನ್ನಡದಲ್ಲಿ ಪ್ರಸಾರ ಆರಂಭಿಸಿದ ಮೊದಲ ಉಪಗ್ರಹ ವಾಹಿನಿ ಎಂಬ ಹೆಗ್ಗಳಿಕೆ ಹೊಂದಿದೆ. ವೇಗವಾಗಿ ಬೆಳೆದ ಉದಯ ಚಾನೆಲ್, 2000ರಲ್ಲಿ ಕರ್ನಾಟಕದ ಟಿವಿ ವಲಯದ 70% ಆದಾಯ ಹೊಂದಿತ್ತು. 2001ರಲ್ಲಿ ಅತ್ಯುತ್ತಮ ಕನ್ನಡ ಟಿವಿ ಚಾನೆಲ್‌ ಎಂದು ಇಂಡಿಯನ್ ಟೆಲಿವಿಷನ್ ಅಕಾಡೆಮಿಯ ಪ್ರಶಸ್ತಿ ಕೂಡ ಗೆದ್ದುಕೊಂಡಿತ್ತು. 2004ರವರೆಗೆ ಇದು ಉಚಿತ ಪ್ರಸಾರದ ಚಾನಲ್ ಆಗಿತ್ತು. ನಂತರ ಪಾವತಿ ಚಾನೆಲ್ ಆಗಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಲ್ವಂ ಅವರ ನಿಧನಕ್ಕೆ ಸನ್ ನೆಟ್ವರ್ಕ್ ಸಮೂಹ, ಉದಯ ಟಿವಿಯ ಉದ್ಯೋಗಿಗಳು ಕಂಬನಿ ಮಿಡಿದ್ದಾರೆ. ಅವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಕನ್ನಡದ ಜನಪ್ರಿಯ ʼಉದಯ ಟಿವಿʼ ವಾಹಿನಿಯ ಮುಖ್ಯಸ್ಥರಾಗಿದ್ದ ಎಸ್ ಸೆಲ್ವಂ ಅವರ ನಿಧನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಂತಾಪ ಸಲ್ಲಿಸಿದ್ದಾರೆ.

ಉದಯ ಟಿವಿಯನ್ನು ಅತ್ಯಂತ ಅಚ್ಚುಕಟ್ಟಾಗಿ ಕಟ್ಟಿದ ಖ್ಯಾತಿ ಎಸ್. ಸೆಲ್ವಂ ಅವರಿಗೆ ಸಲ್ಲಬೇಕು. ಇವರ ನಿಧನದಿಂದ ಮಾಧ್ಯಮ ಲೋಕದ ಪ್ರಬಲ ಹಾಗೂ ಪ್ರಭಾವಿ ವ್ಯಕ್ತಿತ್ವವೊಂದು ಕಣ್ಮರೆಯಾಗಿದೆ ಎಂದು ಡಿಸಿಎಂ ಅವರು ತಿಳಿಸಿದ್ದಾರೆ.

“ಉದಯ ಟಿವಿಯ ಬೆಂಗಳೂರು ಬ್ಯೂರೋದ ನಿರ್ದೇಶಕರಾಗಿ ಕರ್ನಾಟಕದ ಪ್ರತಿ ಹಳ್ಳಿ, ಹಳ್ಳಿಗೂ ಸುದ್ದಿ, ಮನರಂಜನೆ ಜತೆಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ತಲುಪಿಸಿದ ಖ್ಯಾತಿ ಇವರಿಗೆ ಸಲ್ಲುತ್ತದೆ. ಕನ್ನಡದ ಮೊಟ್ಟ ಮೊದಲ ಖಾಸಗಿ ಉಪಗ್ರಹ ವಾಹಿನಿ ಉದಯ ಟಿವಿ ಅಧ್ಯಕ್ಷರಾಗಿದ್ದವರು ಸೆಲ್ವಂ. ಉದಯ ನ್ಯೂಸ್ ಮೂಲಕ ಮಾಧ್ಯಮದ ಘನತೆಯನ್ನು ಕಾಪಾಡಿದವರು. ತಳಮಟ್ಟದಿಂದ ಜನಪ್ರಿಯ ಮಾಧ್ಯಮ ಕಟ್ಟುವುದು ಸುಲಭದ ಮಾತಲ್ಲ. ಅದನ್ನು ಮಾಡಿ ತೋರಿಸಿದವರು ಸೆಲ್ವಂ ಎಂದು ಶ್ಲಾಘಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಶ್ವ ಮಾನಸಿಕ ಆರೋಗ್ಯ ದಿನ | ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ

ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಸನ್ ನೆಟ್ ವರ್ಕ್ ಸಮೂಹದವರಿಗೆ ಆ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...