ಉಡುಪಿ | ತುರ್ತು ಸೇವೆಗೆ ಲಭ್ಯವಿಲ್ಲದ “108” ಅಂಬುಲೆನ್ಸ್ !

Date:

ಉಡುಪಿ ಜಿಲ್ಲೆಯಾದ್ಯಂತ ಕಾರ್ಯ ನಿರ್ವಹಿಸುತ್ತಿರುವ 108 ಆಂಬುಲೆನ್ಸ್ ಸೇವೆ ಹಳಿ ತಪ್ಪಿದ್ದು, ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಆಂಬುಲೆನ್ಸ್ ಸಿಗದೆ ಮೃತ ಪಡುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ, ಇಲಾಖೆಗಳು, ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸಮಾಜ ಸೇವಕ ವಿಶು ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಸೋಮವಾರ ರಾತ್ರಿ 10 ಗಂಟೆಗೆ ಪೆರ್ಡೂರಿನಲ್ಲಿ ಮಹಿಳೆಯೋರ್ವರು ಹೃದಯಾಘಾತಕ್ಕೆ ಒಳಗಾಗಿದ್ದು, ಕ್ಲಪ್ತ ಕಾಲಕ್ಕೆ 108 ಆಂಬುಲೆನ್ಸ್ ಸಿಗದೆ ಕೊನೆಗೆ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಬರುವಾಗ ದಾರಿಯಲ್ಲಿಯೇ ಮೃತ ಪಟ್ಟ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಹದಿನೆಂಟು 108 ಆಂಬುಲೆನ್ಸ್ಗಳು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 33 ಮಂದಿ ಸಿಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸಂಖ್ಯೆ 108 ಇರಬೇಕಿತ್ತು. ಈ ನಡುವೆ 108 ಆಂಬುಲೆನ್ಸ್ಗಳು ದಿನದ 24 ಗಂಟೆಗಳ ಬದಲಿಗೆ ಕೇವಲ 16 ಗಂಟೆಗಳಷ್ಟೇ ಸೇವೆ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಇದರಿಂದ ರೋಗಿಗಳು ತುರ್ತು ಸೇವೆ ಸಿಗದೆ ಪರದಾಡುವಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇಂದು ಬೆಳಗ್ಗೆ 8 ಗಂಟೆಗೆ 108 ಗೆ ಕರೆ ಮಾಡಿದಾಗ ಆಂಬುಲೆನ್ಸ್ ಉಡುಪಿಯಲ್ಲಿಲ್ಲ, ಕಾಪು, ಮಲ್ಪೆ, ಬ್ರಹ್ಮಾವರ, ಶಿರ್ವ, ಮಂಚಕಲ್‌ನಲ್ಲೂ ಇಲ್ಲ. ಉಡುಪಿ ಜಿಲ್ಲೆಯ 5 ಮಂದಿ ಶಾಸಕರು, ಉಡುಪಿ ಸಂಸದರ ಗಮನಕ್ಕೆ ತರುತ್ತಿದ್ದೇನೆ. 108 ಸಮಯಕ್ಕೆ ಸರಿಯಾಗಿ ಸಿಗದೆ ಹಲವಾರು ಜೀವಗಳು ಬಲಿಯಾಗಿವೆ. ಈ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ವಿಶು ಶೆಟ್ಟಿ ಬೇಸರ ವ್ಯಕ್ತ ಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಬಂಧಪಟ್ಟವರು ನಿರ್ಲಕ್ಷ ಮಾಡುತ್ತಿದ್ದಾರೆ. ಮಾಧ್ಯಮಗಳಾದರೂ ಈ ಬಗ್ಗೆ ವರದಿ ಮಾಡಿ ಸರಕಾರದ ಗಮನ ಸೆಳೆಯಬೇಕು. 108 ದಿನದ 24 ಗಂಟೆ ಸೇವೆ ನೀಡುವ ಉದ್ದೇಶ ಹೊಂದಿದ್ದರೂ ಅದರ ಪಾಲನೆ ಆಗುತ್ತಿಲ್ಲ. ತುರ್ತು ಸಂದರ್ಭದಲ್ಲಿ ಐದಾರು ಗಂಟೆಗಳು ಕಳೆದರೂ ಆಂಬುಲೆನ್ಸ್ ಬರುತ್ತಿಲ್ಲ. ಇತ್ತೀಚಿಗೆ ಉಡುಪಿ ಹೊರವಲಯದಲ್ಲಿ ರೋಗಿ ಒಬ್ಬರಿಗೆ ಆಸ್ಪತ್ರೆಗೆ ದಾಖಲಿಸಲು ಬೆಳಗ್ಗೆ 10ಗಂಟೆಗೆ ಪೋನ್ ಮಾಡಿದರೂ ಮಧ್ಯಾಹ್ನ 3 ಗಂಟೆಯಾದರೂ ಅಂಬುಲೆನ್ಸ್ ಬಂದಿರಲಿಲ್ಲ. ಹೀಗಾದರೆ ಬಡ ರೋಗಿಗಳ ಪ್ರಾಣ ಉಳಿಯುವುದು ಹೇಗೆ ಎಂಬುದನ್ನು ಸಂಬಂಧ ಪಟ್ಟವರು ಸ್ಪಷ್ಟ ಪಡಿಸಬೇಕು ಎಂದು ವಿಶುಶೆಟ್ಟಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಷ್ಟೋ ಸಂದರ್ಭದಲ್ಲಿ ಬಡ ರೋಗಿಗಳನ್ನು ಜಿಲ್ಲಾಸ್ಪತ್ರೆಯಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವ ಅಗತ್ಯ ಇರುತ್ತದೆ.ಅಂತಹ ಪರಿಸ್ಥಿತಿಯಲ್ಲಿ 108 ಸೇವೆಗೆ ಸಿಗದಿದ್ದಾರೆ ದುಬಾರಿ ಖಾಸಗಿ ಆಂಬುಲೆನ್ಸ್ ಮಾಡಿ ಅವರನ್ನು ಕೊಂಡೊಯ್ಯಲು ಸಾಧ್ಯವೇ? ಹೀಗಾಗಿ ಅದೆಷ್ಟೋ ರೋಗಿಗಳು ದಾರಿಯಲ್ಲಿಯೇ ಪ್ರಾಣ ಬಿಟ್ಟ ಉದಾಹರಣೆಗಳಿವೆ.


ಪ್ರಸ್ತುತ 108 ಸೇವೆಯನ್ನು ಆವಲೋಕಿಸಿದಾಗ 3 ಪಾಳಿಯಲ್ಲಿ 8ಗಂಟೆಯಂತೆ 24ಗಂಟೆ ಕರ್ತವ್ಯ ನಿರ್ವಹಿಸ ಬೇಕಾದ ಈ ಆಂಬುಲೆನ್ಸ್ ಗಳು ಯಾವುದಾದರೊಂದು ಪಾಳಿಯನ್ನು ನಿರ್ವಹಿಸುತ್ತಿಲ್ಲ. ಈ ಸಂದರ್ಭದಲ್ಲಿ ಫೋನ್ ಮಾಡಿದರೆ ಆಂಬುಲೆನ್ಸ್ ಖಾಲಿ ಇಲ್ಲ ಎಂದೋ ಅಥವಾ ತಾಂತ್ರಿಕ ದೋಷ ಎಂದೋ ಸಬೂಬು ನೀಡಲಾಗುತ್ತಿದೆ ಎಂದು ವಿಶು ಶೆಟ್ಟಿ ಆರೋಪಿಸಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ನಡೆಯುತ್ತಿದೆ. ಈ ಬಗ್ಗೆ ಹಲವಾರು ಬಾರಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಡ ರೋಗಿಗಳು ಪ್ರಾಣ ಬಿಡುವಂತಾಗಿದೆ ಎಂದು ಅವರು ದೂರಿದ್ದಾರೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಜಾತಿ ಧರ್ಮಕ್ಕೆ ಕೋಟಿ ಕೋಟಿ ಖರ್ಚು ಮಾಡಿ ಆ ಜಾತಿ, ಈ ಜಾತಿ ಎಂಬುದನ್ನು ಹೇಳುವ ಬದಲು ಎಲ್ಲಾ ಜಾತಿ, ಧರ್ಮಗಳಿಗೆ ಅನುಕೂಲವಾಗುವ 108 ಆಂಬುಲೆನ್ಸ್ ಸೇವೆಯನ್ನು ಮೊದಲು ಸರಿಪಡಿಸಿ. 108 ಆಂಬುಲೆನ್ಸ್ ಸೇವೆಯ ಸಮಸ್ಯೆ ಬಗ್ಗೆ ತುರ್ತು ಸಂದರ್ಭದಲ್ಲಿ 6-7 ಅಂಬುಲೆನ್ಸ್ ಗಳು ಮಾತ್ರ ಲಭ್ಯವಿರುತ್ತವೆ. ಇವುಗಳಲ್ಲಿ ತಾಂತ್ರಿಕ ದೋಷ ಅಥವಾ ಇನ್ನಿತರ ಕಾರಣ ಗಳಿಂದ ನಿಂತರೆ ದೇವರೇ ಗತಿ. ಹೀಗಾಗಿ ಶಿಫ್ಟ್ ವ್ಯವಸ್ತೆಯನ್ನು ಕೈ ಬಿಡಬೇಕು. ಎಲ್ಲಾ 18 ಆಂಬುಲೆನ್ಸ್ ಗಳು 24*7 ಲಭ್ಯವಾಗಬೇಕು. ಆದರೆ ಇದೀಗ ಇವರ ಸೇವಾ ನ್ಯೂನತೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳು ತುರ್ತಾಗಿ ಇತ್ತ ಗಮನ ಹರಿಸಬೇಕು. ಜನರ ಪ್ರಾಣ ಉಳಿಸುವ ಈ 108 ಸೇವೆ 24*7ಕಾರ್ಯ ನಿರ್ವಹಿಸುವಂತಾಗಬೇಕು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...