ಉಡುಪಿ | 108 ಆರೋಗ್ಯ ಕವಚ ಸಿಬ್ಬಂದಿಗೆ ಬಂದಿಲ್ಲ ತಿಂಗಳ ವೇತನ

Date:

108 ಆರೋಗ್ಯ ಕವಚ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 3ತಿಂಗಳಿಂದ ವೇತನ ಪಾವತಿಯಾಗದೇ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೊಟ್ರಪ್ಪ ಜಿ ಹೇಳಿದರು.

ಉಡುಪಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇದೇ ರೀತಿ ಸುಮಾರು 4-5 ವರ್ಷದಿಂದಲೂ ಸಹ ವೇತನ ವಿಚಾರವಾಗಿ 108 ಸಿಬ್ಬಂದಿ ತೊಂದರೆ ಅನುಭವಿಸುತ್ತಾ ಬಂದಿದ್ದೇವೆ. ಸರ್ಕಾರ ಮತ್ತು ಜಿ.ವಿ.ಕೆ ಸಂಸ್ಥೆಯ ಒಡಂಬಡಿಕೆಯ ಪ್ರಕಾರ ವಾರ್ಷಿಕ ವೇತನ ಹೆಚ್ಚಳ ಆಗಬೇಕಾಗಿದ್ದು, 2023ರ ಶೇ.15 ರಷ್ಟು ವೇತನ ಪರಿಷ್ಕರಣೆಯೂ ಸಹ ಆಗಿಲ್ಲ ಎಂದು ಅವರು ಆರೋಪಿಸಿದರು.

ಹಾಗೇ ಇತ್ತಿಚಿನ ದಿನಗಳಲ್ಲಿ ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಕನಿಷ್ಠ ವೇತನ ಸಹ ಜಾರಿ ಮಾಡಿದ್ದು, 108 ಸಿಬ್ಬಂದಿಗೆ ವೇತನವನ್ನು 36,008 ರೂ.ಗಳಿಗೆ ವೇತನ ನಿಗಧಿಮಾಡಿದ್ದು, ಈ ವೇತನವನ್ನು ಸುಮಾರು 6 ತಿಂಗಳುಗಳ ಕಾಲ ನೀಡಿ, ತದ ನಂತರ ಏಕಾಏಕಿ 6000 ರೂ.ಗಳನ್ನು ಕಡಿತ ಮಾಡಿ 30,000 ರೂ.ಗಳನ್ನು ನೀಡಿರುತ್ತಾರೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಮ್ಮೆ ಪ್ರಸ್ತುತ ವೇತನದಲ್ಲಿ ಕಡಿಮೆಯಾಗುವಂತ ಮಾಹಿತಿಯು ಸರ್ಕಾರದ ಅಧಿಕಾರಿಗಳ ಮಟ್ಟದಲ್ಲಿ ಕೇಳಿಬರುತ್ತಿದ್ದು, 108 ಆಂಬ್ಯುಲೆನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವಾಟ್ಸ್ಆಪ್ ಗ್ರೂಪ್‌ನಲ್ಲಿ ವದಂತಿಯ ಸಂದೇಶಗಳು ಹರಿದಾಡುತ್ತಿವೆ. ಹಾಗಾಗಿ, ಆರೋಗ್ಯ ಸಚಿವರು ಈ ಮೇಲಿನ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಬಾಕಿ ಇರುವ 4 ತಿಂಗಳ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಿಸಿ ಎಂದು ಒತ್ತಾಯಿಸಿದರು.

108 ಸಿಬ್ಬಂದಿ ದಿನನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸಭಾ ನಡವಳಿಯನ್ನು ಮಾಡಿಕೊಟ್ಟು ಮುಂದಿನ ದಿನಗಳಲ್ಲಿ ಇದೇ ರೀತಿಯ ಸಮಸ್ಯೆಗಳು ಬಾರದ ರೀತಿಯಲ್ಲಿ ಕ್ರಮ ಕೈಗೊಂಡು, ನಮ್ಮ ಸಿಬ್ಬಂದಿಗೆ ಇನ್ನೂ ಉತ್ತಮ ರೀತಿಯಲ್ಲಿ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಎಲ್ಲಾ ಜಿಲ್ಲಾ ಸಿಬ್ಬಂದಿಗಳ ಪರವಾಗಿ ಕೇಳಿಕೊಳ್ಳುತ್ತೇವೆ ಎಂದರು.

ಈ ಮೇಲಿನ ಎಲ್ಲಾ ಅಂಶಗಳನ್ನು ಮುಂದಿನ 10 ದಿನಗಳೊಳಗಾಗಿ ಸರಿಪಡಿಸಿ ಕೊಡದ ಪಕ್ಷದಲ್ಲಿ ನಾವು ಯಾವುದೇ ರೀತಿಯ ಬೇರೆ ದಾರಿ ಕಾಣದೇ ಅಸಹಾಯಕರಾಗಿ ಮುಷ್ಕರ ಕೈಗೊಳ್ಳುತ್ತೇವೆ. ಈ ಸಂದರ್ಭದಲ್ಲಿ ಸಾರ್ವಜನಿಕ ಸೇವೆಗೆ ಅನಾನುಕೂಲತೆಗಳು ಉಂಟಾದಲ್ಲಿ ನೇರವಾಗಿ ಸಂಬಂಧಿಸಿದ ಸಂಸ್ಥೆಯೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಕಿಶೋರ್ ಕುಮಾರ್, ಶಾಂತ ಗೌಡ, ವಿಶ್ವನಾಥ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...