ಉಡುಪಿ | ‘ನಮ್ಮ ಕರ್ನಾಟಕ (ನಡೆದ 50 ಹೆಜ್ಜೆ…ಮುಂದಿನ ದಿಕ್ಕು)’ ವಿಶೇಷ ಸಂಚಿಕೆ, ಈ ದಿನ ನ್ಯೂಸ್‌ ಆ್ಯಪ್‌ ಬಿಡುಗಡೆ

Date:

ಸಮಗ್ರ ಕರ್ನಾಟಕದ ಐವತ್ತು ವರ್ಷಗಳ ಇತಿಹಾಸವನ್ನು ತಿಳಿಸುವಂತಹ ಮತ್ತು ಸಮಸ್ತ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡುವಂತಹ ಸಂಗ್ರಹ ಯೋಗ್ಯ ಪುಸ್ತಕವನ್ನು ಈ ದಿನ ಡಾಟ್ ಕಾಮ್ ತಂಡ ಹೊರತಂದಿದೆ ಎಂದು ಕರ್ನಾಟಕ ಸರ್ಕಾರದ ನಿವೃತ್ತ ಜಂಟಿಕಾರ್ಯದರ್ಶಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

ಉಡುಪಿ ನಗರದ ಅವೇ ಮರಿಯಾ ಹಾಲ್‌ನಲ್ಲಿ ಈ ದಿನ ಡಾಟ್ ಕಾಮ್‌ನಿಂದ ಹಮ್ಮಿಕೊಂಡಿದ್ದ ‘ನಮ್ಮ ಕರ್ನಾಟಕ (ನಡೆದ 50 ಹೆಜ್ಜೆ…ಮುಂದಿನ ದಿಕ್ಕು)’ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

“ಕರ್ನಾಟಕದ ಇತಿಹಾಸಕ್ಕೆ ಸಂಬಂಧಿಸಿದ ಕೆಲವೊಂದು ಲೇಖನಗಳು ಪ್ರಕಟವಾಗಿರಬಹುದು. ಆದರೆ ಸಮಗ್ರ ಕರ್ನಾಟಕದ ಆಗುಹೋಗುಗಳ ಬಗ್ಗೆ ಈ ಪುಸ್ತಕದಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ. ಕರ್ನಾಟಕ ಕಳೆದ ಐವತ್ತು ವರ್ಷಗಳ ಆರ್ಥಿಕ ಕ್ಷೇತ್ರ, ರಾಜಕೀಯ, ಸಾಮಾಜಿಕ, ಚಳವಳಿಗಳು ಸೇರಿದಂತೆ ಎಲ್ಲ ರಂಗದ ಲೇಖನಗಳು ಇದರಲ್ಲಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ದಿನ ನ್ಯೂಸ್ ಓದುಗರಲ್ಲಿ ನಾನೂ ಒಬ್ಬ. ಅದರಲ್ಲಿ ಬರುವ ವಿಮರ್ಶಾತ್ಮಕ ಲೇಖನಗಳು, ವರದಿಗಳು, ವೀಡಿಯೋಗಳು ಬಹಳಷ್ಟು ಅರ್ಥಗರ್ಭಿತವಾಗಿ ಬರುತ್ತಿವೆ. ಎರಡು ವರ್ಷ ಪೂರೈಸಿದ ಈ ದಿನ.ಕಾಮ್ ಇನ್ನೂ ಎತ್ತರಕ್ಕೆ ಬೆಳೆಯಲಿ” ಎಂದು ಶುಭ ಹಾರೈಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಈ ದಿನ.ಕಾಮ್ ಹೊರತಂದ ನ್ಯೂಸ್ ಆ್ಯಪ್‌ ಮತ್ತು ಸಹಾಯ ವಾಣಿಯನ್ನು ಬಿಡುಗಡೆಗೊಳಿಸಿ ಮಾತನಾಡಿ, “ಪತ್ರಕರ್ತರು ಸಮಾಜನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ಸಮಾಜದ ಶೋಷಿತರ, ಮರ್ದಿತರ ಪರ ಧ್ವನಿ ಎತ್ತಿ ಅವರಿಗೆ ನ್ಯಾಯವನ್ನು ಒದಗಿಸುವ ಕೆಲಸಗಳನ್ನು ಪತ್ರಿಕೆಗಳು ಮಾಡುತ್ತಿವೆ. ಕೆಲವೊಂದು ಪತ್ರಕರ್ತರಿಗೆ ಅವರದೇ ಆದ ಚೌಕಟ್ಟಿರುತ್ತದೆ. ಅದನ್ನು ಮೀರಲು ಸಾಧ್ಯವಾಗುವುದಿಲ್ಲ. ಸ್ವತಂತ್ರ ಪತ್ರಿಕೋದ್ಯಮ ಈ ದಿನ.ಕಾಮ್‌ ಈ ನಿಟ್ಟಿನಲ್ಲಿ ಉತ್ತಮ ಕಾರ್ಯ ನಿರ್ವಹಿಸಲಿ” ಎಂದು ಶುಭಹಾರೈಸಿದರು.

ಸಹಬಾಳ್ವೆ ಉಡುಪಿ ಸಂಚಾಲಕ ಪ್ರೊ ಪಣಿರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಈ ದಿನ ಮಾಧ್ಯಮ ಇದೊಂದು ಆಂದೋಲನವಾಗಿ ಕಳೆದ ಎರಡು ವರ್ಷಗಳಿಂದ ಸ್ವತಂತ್ರವಾಗಿ ನೈಜ ಪತ್ರಿಕಾ ಧರ್ಮವನ್ನು ಪಾಲಿಸುತ್ತ ಬಂದಿದೆ. ಇನ್ನೂ ಸಾವಿರಾರು ಹೆಜ್ಜೆಗಳು ಬಾಕಿಯಿವೆ. ಎಲ್ಲ ಸಮಸ್ಯೆಗಳಿಗೆ ಕೈಲಾದಷ್ಟು ಪರಿಹಾರ ನೀಡುವ ಜತೆಗೆ ಪತ್ರಿಕೋದ್ಯಮ ಮಾಡದೆ ನೈಜ ಪತ್ರಿಕಾ ಧರ್ಮವನ್ನು ಪಾಲಿಸುತ್ತಿದೆ. ಇದು ಜನಸಾಮಾನ್ಯರ ಮಾಧ್ಯಮ, ಇಲ್ಲಿ ಓದುಗರೇ ನಮ್ಮ ಬೆಂಬಲಿಗರು” ಎಂದು ಹೇಳಿದರು ‌

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ʼಈ ದಿನ ವಿಶೇಷ ಸಂಚಿಕೆʼ ಬಿಡುಗಡೆ

ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮ ಪಾರಂಭ ಮಾಡಲಾಯಿತು. ‌
ಈ ದಿನ‌‌.ಕಾಮ್ ಉಡುಪಿ ಜಿಲ್ಲಾ ಸಂಯೋಜಕ ಶಾರೂಕ್ ತೀರ್ಥಹಳ್ಳಿ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಯೋಜಕರಾದ ಸುಂದರ್ ಮಾಸ್ಟರ್, ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಹುಮೈರಾ ಕಾರ್ಕಳ, ಈ ದಿನ‌.ಕಾಮ್ ಸೆಂಟರ್ ಕೋ-ಆರ್ಡಿನೇಟರ್ ಸಂತೋಷ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾಜ ಸೇವಕ ನಾಗೇಶ್ ಉದ್ಯಾವರ್, ಪೀರು ಸಾಹೇಬ್, ರಾಬರ್ಟ್ ಮೆನೇಜಸ್ ಅವರಿಗೆ ಗೌರವ ಸಂಚಿಕೆಯನ್ನು ನೀಡಲಾಯಿತು.
ಡಾ ಜಿ ಶಂಕರ್ ಮಹಿಳಾ ಕಾಲೇಜಿನ ಪಾಂಶುಪಾಲರಾದ ಡಾ ನಿಕೇತನ, ಪ್ರೊ ಶಾರದ, ವಕೀಲರಾದ ಅಸದ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...