ಉಡುಪಿ | ಗಂಡನನ್ನೇ ಕೊಂದ ಪ್ರಕರಣ; ಹಣದ ಪ್ರಭಾವದಿಂದ ಕೇಸ್‌ ಮುಚ್ಚಿಹಾಕುವ ಹುನ್ನಾರ

Date:

ಕಾರ್ಕಳದ ಅಜೆಕಾರಿನಲ್ಲಿ ಪ್ರಿಯತಮನ ಜೊತೆ ಸೇರಿ ಗಂಡನನ್ನೇ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸಾಕ್ಷಿಗಳು ಸಿಕ್ಕಿದರೂ ಕೂಡಾ ಕೊಲೆಗಡುಕರನ್ನು ಪೊಲೀಸರು ರಕ್ಷಿಸುವ ಕೆಲಸ ನಡೆಸುತ್ತಿದ್ದಾರೆ ಎಂದು ಕೊಲೆಯಾದ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್ ಆರೋಪಿಸಿದ್ದಾರೆ.

ಉಡುಪಿಯಲ್ಲಿ ಸೋಮವಾರ ಬೆಳಿಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮಗೆ ಪೊಲೀಸ್ ಇಲಾಖೆ ಮೇಲೆ ಅನುಮಾನ ಬರುತ್ತಿದ್ದು, ಈ ತನಿಖೆ ನಮಗೆ ಬೇಜಾರು ತರುವ ರೀತಿಯಲ್ಲಿ ಹೋಗುತ್ತಿದೆ. ಇಷ್ಟೆಲ್ಲಾ ಸಾಕ್ಷ್ಯಾಧಾರಗಳು ಸಿಕ್ಕಿದರೂ ಕೂಡಾ ಇಲಾಖೆಯವರು ಈ ಪ್ರಕರಣವನ್ನು ವೇಗವಾಗಿ ಮುಗಿಸುತ್ತಿಲ್ಲ. ಹಣದ ಪ್ರಭಾವದಿಂದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ. ಆರೋಪಿಯ ತಂದೆ ಸೂಟ್‌ಕೇಸ್ ಹಿಡಿದುಕೊಂಡು ಕಾರ್ಕಳ ಡಿವೈಎಸ್‌ಪಿ ಹಿಂದೆ ಸುತ್ತುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.‌

ಗಂಡನನ್ನೇ ಕೊಂದ ಪ್ರಕರಣ

“ಸರಿಯಾದ ತನಿಖೆ ಮಾಡದೆ ಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಕರಣವನ್ನು ಮುಚ್ಚಲು ಪ್ರಯತ್ನಿಸಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದು ಖಚಿತ” ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ದುಷ್ಕರ್ಮಿಗಳ ತಂಡದಿಂದ ಯುವಕನ ಹತ್ಯೆ

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ ಅರುಣ್ ಕುಮಾರ್ ಅವರನ್ನು ಕುಟುಂಬದ ಸದಸ್ಯರು ಭೇಟಿಯಾಗಿ ಆರೋಪಗಳಿಗೆ ಕಾನೂನಿನಡಿಯಲ್ಲಿ ಸರಿಯಾದ ಶಿಕ್ಷೆಯಾಗುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಕೊಲೆಯಾದ ಬಾಲಕೃಷ್ಣ ಪೂಜಾರಿಯ ತಂದೆ ಸಂಜೀವ ಪೂಜಾರಿ, ಸಹೋದರಿ ಶಶಿರೇಖಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...