ಉಡುಪಿ‌ | ಸಮಾಜದ ತೊಡಕು ತೊಡೆಯುವ ವೇದಿಕೆ ರಂಗಭೂಮಿ: ದಿನೇಶ್ ಎಂ ಕೊಡವೂರು

Date:

ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ ಎಂದು ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರು ಹೇಳಿದರು.

ಉಡುಪಿಯ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ವತಿಯಿಂದ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ರಂಗಹಬ್ಬದ 2ನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಾಗ ಬದುಕು ಸಂಭ್ರಮದಿಂದ ಕೂಡಿರುತ್ತದೆ. ವೃತ್ತಿ, ಪ್ರವೃತ್ತಿ ಬೇರೆ ಬೇರೆಯಾಗಿರುತ್ತದೆ. ವೃತ್ತಿಗೆ ಹೆಚ್ಚು ಗಮನಕೊಡಬೇಕಾಗುತ್ತದೆ. ಆಗ ಪ್ರವೃತ್ತಿ ಹಿಂದಕ್ಕೆ ಸರಿಯುತ್ತದೆ. ಮಕ್ಕಳಲ್ಲಿ ಉತ್ತಮ ಅಭಿರುಚಿ ಬೆಳೆಸಲು ಪ್ರವೃತ್ತಿ ಅಗತ್ಯ ಎಂದು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲ ಬದಲಾಗಿದೆ, ಮಕ್ಕಳು ಬದಲಾಗಿದ್ದಾರೆ. ಹಿಂದಿನಂತೆ ಇಲ್ಲ ಎಂಬ ಮಾತುಗಳಿವೆ. ಆದರೆ, ಬದಲಾಗಿದ್ದು, ಕಾಲ ಅಥವಾ ಮಕ್ಕಳು ಅಲ್ಲ. ಬದಲಾಗಿದ್ದು, ಹೆತ್ತವರ ಮನಸ್ಸು. ಇರುವ ಒಂದು ಅಥವಾ ಎರಡು ಮಕ್ಕಳೇ ಸಂಗೀತ, ಕರಾಟೆ, ಕ್ರೀಡೆ, ಕಲಿಕೆ ಎಲ್ಲದರಲ್ಲಿಯೂ ಮೊದಲ ಸ್ಥಾನದಲ್ಲಿರಬೇಕು ಎಂದು ಹೆತ್ತವರು ಬಯಸುತ್ತಿರುವುದೇ ಮಕ್ಕಳು ಹಿಂದಿನ ಕಾಲದಲ್ಲಿ ಇರುವಂತೆ ಈಗ ಇರಲು ಸಾಧ್ಯವಾಗದಂತೆ ಮಾಡಿದೆ, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಕರು ಸಿಗಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ, ತಮ್ಮ ಮಕ್ಕಳನ್ನು ಶಿಕ್ಷಕರನ್ನಾಗಿ ಮಾಡುತ್ತಿಲ್ಲ. ಡೆಡ್ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುವ ಕೆಲಸ ಬಯಸುತ್ತಿದ್ದಾರೆ ಎಂದು ಹೇಳಿದರು.

ರಂಗ ಕಲಾವಿದ ಸುಜಿತ್ ಎಸ್ ಶೆಟ್ಟಿ ಕಾಪು ಅವರಿಗೆ ರಂಗ ಸಾಧಕ ಸನ್ಮಾನ ನೀಡಿ ಗೌರವಿಸಲಾಯಿತು. ಉಡುಪಿ ನಗರಸಭೆ ಪರಿಸರ ಎಂಜಿನಿಯರ್ ಸ್ನೇಹಾ ಕೆ.ಎಸ್, ಉದ್ಯಮಿಗಳಾದ ಆನಂದ ಪಿ. ಸುವರ್ಣ, ವಿಠಲ್ ಮೈಂದನ್, ಪ್ರಭಾಕರ್ ಕುಂದರ್, ನಾಗರಾಜ್ ಸುವರ್ಣ, ಸುಮನಸಾ ಕೊಡವೂರು ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷ ವಿನಯ್ ಕಲ್ಮಾಡಿ, ಕಾರ್ಯದರ್ಶಿ ಚಂದ್ರಕಾಂತ್ ಕುಂದರ್ ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಎಂ.ಎಸ್. ಭಟ್ ಸ್ವಾಗತಿಸಿದರು. ಸದಸ್ಯ ಪ್ರಥಮ್ ವಂದಿಸಿದರು. ಉಪಾಧ್ಯಕ್ಷ ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು. ಸವದತ್ತಿ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯಿಂದ ‘ದೇವಸೂರ’ ನಾಟಕ ಪ್ರದರ್ಶನಗೊಂಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...