ಉಡುಪಿ | ದಲಿತ ಎಂಬ ಕಾರಣಕ್ಕೆ ಬ್ಯಾಂಕ್‌ ಅಧಿಕಾರಿಯಿಂದ ದೌರ್ಜನ್ಯ

Date:

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಬಾಂಕ್‌ ಅಧಿಕಾರಿಗಳು ದೌರ್ಜನ್ಯ ವೆಸದಿದ್ದಾರೆ ಎಂದು ಆರೋಪಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ನಿವಾಸಿ ದಿನೇಶ್‌ ಎಂಬುವವರು ಮೇಲೆ ಅಲ್ಲಿನ ಕೆನರಾ ಬ್ಯಾಂಕ್‌ ಅಧಿಕಾರಿ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಮೀನು ವ್ಯಾಪಾರಿಯಾಗಿರುವ ದಿನೇಶ್ ಅವರು 2006ರಲ್ಲಿ ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ದಾಖಲೆಗಳನ್ನು ಅಡವಿಟ್ಟು 11 ಲಕ್ಷ ಸಾಲವನ್ನು ಪಡೆದುಕೊಂಡಿದ್ದರು. 2006ರಿಂದ ನಿರಂತರವಾಗಿ ಸಮಯಕ್ಕೆ ಸರಿಯಾಗಿ ಸಾಲದ ಕಂತು ಮತ್ತು ಬಡ್ಡಿಯನ್ನು ಕಟ್ಟುತ್ತಿದ್ದರು. 2020ರಲ್ಲಿ ಕೊರೊನಾ ಆಕ್ರಮಣದಿಂದಾಗಿ ಆರ್ಥಿಕ ಹೊರೆಯಿಂದ ಸಾಲದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಸಾಲ ನವೀಕರಣ ಮಾಡುವಂತೆ ಬ್ಯಾಂಕ್‌ಗೆ ಮನವಿ ಮಾಡಿದ್ದರು. ಆದರೂ, ಯಾವುದೇ ಪ್ರಯೋಜನವಾಗಲಿಲ್ಲ. ಇದೀಗ, ಯಾವುದೇ ಮುನ್ಸೂಚನೆ ನೀಡದೆ, ಬ್ಯಾಂಕ್‌ ಆಧಿಕಾರಿಗಳು ದಿನೇಶ್‌ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಈದಿನ.ಕಾಮ್‌ ಜೊತೆ ಮಾತನಾಡಿದ ಸಂತ್ರಸ್ತ ದಿನೇಶ್, “2006ರಿಂದ ನಿರಂತವಾಗಿ ಕ್ರಮಬದ್ಧವಾಗಿ ಸಾಲದ ಕಂತು ಕಟ್ಟಿದ್ಧೇನೆ. ಆದರೆ, ಕೊರೊನಾ ಸಮಯದಲ್ಲಿ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಉಳಿದಿದ್ದ ಸಾಲವನ್ನು ನವೀಕರಣ ಮಾಡಿಕೊಡುವಂತೆ ಬ್ಯಾಂಕ್‌ಗೆ ಮನವಿ ಸಲ್ಲಿಸಿದ್ದೆ ಅದರೆ, ಅವರು ಮಾಡಿಕೊಡಲಿಲ್ಲ. ಈಗ ನೋಡಿದರೆ, ಕಾನೂನು ಪ್ರಕಾರ ನಮ್ಮ ಮನೆಗೆ ನೋಟೀಸ್‌ ಹಚ್ಚಲು ಬಂದಿದ್ದಾರೆ. ಆದರೆ ನಾವು ಅವರಿಗೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ. ವಿಚಾರಣೆಗೆ ಕೋರ್ಟ್‌ಗೆ ಹೋದಾಗ, ಅಧಿಕಾರಿಗಳು ನಮ್ಮ ವಿರುದ್ಧವೇ ಜಾತಿ ನಿಂದನೆ ಆರೋಪ ಮಾಡಿದ್ದಾರೆ” ಎಂದು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಂತ್ರಸ್ತ ದಿನೇಶ್
ಸಂತ್ರಸ್ತ ದಿನೇಶ್

ದಿನೇಶ್ ಮೇಲಿನ ದೌರ್ಜನ್ಯದ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಅಮೃತ್‌ ಶೆಣೈ, “ದೇಶದ ಕಾನೂನಿನಲ್ಲಿ ‘ಸರ್ಫೇಸಿ ಅಕ್ಟ್‌’ ಇದೆ. ಅದರ ಮೂಲಕ ಸಾಲವು ಮರುಪಾವತಿ ಆಗಬೇಕು ಮತ್ತು ಸಾಲಗಾರರಿಗೂ ತೊಂದರೆ ಆಗಬಾರದು. ಆತನಿಗೂ ಬೇಕಾದಷ್ಟು ಅವಕಾಶಗಳು ಸಿಗಬೇಕು. ಆದರೆ, ದಿನೇಶ್ ಅವರು ದಲಿತ ಅನ್ನೊ ಕಾರಣಕ್ಕೆ ಕೆನರಾ ಬ್ಯಾಂಕ್‌ ಅಧಿಕಾರಿಗಳು ದೌರ್ಜನ್ಯ ಮಾಡುತ್ತಿದ್ದಾರೆ. ದಲಿತ ಎನ್ನುವ ಕಾರಣಕ್ಕೆ ಯಾವುದೇ ನೋಟೀಸ್‌ ಕೊಡದೆ, ನೇರವಾಗಿ ಕೋರ್ಟ್‌ಗೆ ಕರೆದಿದ್ದಾರೆ. ಕೋರ್ಟ್‌ನಲ್ಲಿ ನ್ಯಾಯಾಧೀಶರು ಕೇಳಿದಾಗ, ಅಧಿಕಾರಿಗಳು ಉಲ್ಟಾ ಹೊಡೆದಿದ್ದಾರೆ. ‘ದಿನೇಶ್‌ ಅವರೇ ಅಟ್ರಾಸಿಟಿ ಕೇಸು ದಾಖಲಿಸುತ್ತೇನೆಂದು ನಮಗೆ ಬೆದರಿಸಿದರು. ಹಾಗಾಗಿ, ಮನೆಗೆ ಹೋಗಿಲ್ಲ’ವೆಂದು ಕತೆ ಕಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಜಾತಿಯ ಕಾರಣಕ್ಕಾಗಿ ಹೀಗೆ ನಡೆದುಕೊಳ್ಳಲಾಗಿದೆ. ಇದು ದಲಿತ ದೌರ್ಜನ್ಯವಾಗಿದೆ. ದಿನೇಶ್‌ಗೆ ನ್ಯಾಯ ದೊರೆಯಬೇಕು” ಎಂದು ಆಗ್ರಹಿಸಿದರು.

ಈದಿನ.ಕಾಮ್‌ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ನರೇಂದ್ರ ಬಾಬು, “ದಿನೇಶ್‌ ಮೇಲಿನ ದೌರ್ಜನ್ಯದ ಬಗ್ಗೆ ಗೃಹ ಸಚಿವರು ಮತ್ತು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಮನಕ್ಕೆ ತಂದಿದ್ದು, ದೂರು ನೀಡಿದ್ದೇವೆ. ದಿನೇಶ್‌ ಅವರಿಗೆ ಆದ ಅನ್ಯಾಯವು ‘ಸರ್ಫೇಸಿ ಆಕ್ಟ್‌’ ಅಡಿಯಲ್ಲಿ ಬರುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ದೊರಕಿಸಿ ಕೊಡಬೇಕು” ಎಂದರು.

ಪ್ರಕರಣ ಸಂಬಂಧ ಈದಿನ.ಕಾಮ್‌ ಜೊತೆ ಮಾತನಾಡಿದ ಉಡುಪಿ ಎಸ್‌ಪಿ ಡಾ. ಅರುಣ್‌ ಕುಮಾರ್‌, “ದಲಿತ ಎಂಬ ಕಾರಣಕ್ಕಾಗಿ ಕೆನರಾ ಬ್ಯಾಂಕ್‌ ಅಧಿಕಾರಿಗಳು ಸರಿಯಾದ ನಿಯಮಾವಳಿಗಳನ್ನು ಅನುಸರಿಸದೆ, ಅನ್ಯಾಯ ಮಾಡಿದ್ದಾರೆ ಎಂಬ ದೂರು ಬಂದಿದೆ. ಇದರ ಬಗ್ಗೆ ನಾವು ಕಾನೂನಾತ್ಮಕವಾಗಿ ಮಾಹಿತಿ ಪಡೆಯುತ್ತೇವೆ. ಬ್ಯಾಂಕ್‌ ನಿಯಮಗಳನ್ನು ಮತ್ತು ನ್ಯಾಯಾಲಯ ಯಾವ ತೀರ್ಪು ನೀಡಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...