ಉಡುಪಿ | ಎರಡು ವರ್ಷಗಳ ನಂತರ ಕುಟುಂಬ ಸೇರಿದ ಬಿಹಾರ ಮೂಲದ ಮಹಿಳೆ

Date:

ಕಳೆದ 2 ವರ್ಷಗಳ ಹಿಂದೆ ಮಾನಸಿಕ ಅಸ್ವಸ್ಥ ಬಿಹಾರದ ಮಹಿಳೆ ತನ್ನ ಕುಟುಂಬ ತೊರೆದಿದ್ದು ಬೀದಿಪಾಲಾಗಿ ಇದೀಗ ಮರಳಿ ಕುಟುಂಬಕ್ಕೆ ಸೇರಿದಾಗ ಕುಟುಂಬದ ಸಂತೋಷದ ಆಕ್ರಂದನ ಮುಗಿಲು ಮುಟಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಕಳೆದ ವರ್ಷ ಉಡುಪಿ ನಗರದ ಬೀದಿಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರದ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸಿ ತನ್ನ ಊರಾದ ಬಿಹಾರದ ಮಾಹಿತಿ ನೀಡಿ ಕುಟುಂಬ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಿಳೆ ರಮಾದೇವಿ ಆಶ್ರಮದ ಚಿಕಿತ್ಸೆಯ ಜೊತೆಗೆ ದೈನಂದಿನ ಚಟುವಟಿಕೆಗಳಾದ ಯೋಗ ಧ್ಯಾನ ಕೃಷಿ ಚಟುವಟಿಕೆ, ಸಾಂಸ್ಕೃತಿಕ ಚಟುವಟಿಕೆ, ಆಪ್ತ ಸಮಾಲೋಚನೆಗೆ ಸ್ಪಂದಿಸಿ ಸಹಜ ಸ್ಥಿತಿಗೆ ಬಂದು ತನ್ನ ಕುಟುಂಬದ ವಿಳಾಸ ಹಿನ್ನೆಲೆಯ ವಿವರಗಳನ್ನು ನೀಡಿದ್ದರು. ಈ ಮಾಹಿತಿಯ ಮೇರೆಗೆ ಮುಂಬೈನ ಶ್ರದ್ಧಾ ಪುನರ್ವಸತಿ ಕೇಂದ್ರ ಕುಟುಂಬಕ್ಕೆ ಹಸ್ತಾಂತರಿಸುವಲ್ಲಿ ಯಶಸ್ವಿಯಾದರು. ರಮಾದೇವಿಯನ್ನು ಕುಟುಂಬ ಸೇರಿಸುವ ಸಮಯ ಮಕ್ಕಳು ಹಾಗೂ ಕುಟುಂಬಸ್ಥರು ಭಾವೊದ್ವೇಗದಿಂದ ವಿಸ್ಮಿತರಾಗಿ ಸಂತೋಷದಿಂದ ಕೂಗಿ ಪ್ರೀತಿಯಿಂದ ಆಲಂಗಿಸಿದ ದೃಶ್ಯ ನಿಜವಾಗಿಯೂ ಬಹಳ ಭಾವುಕತೆಯಿಂದ ಕೂಡಿತ್ತು. ಆರೈಕೆ ಹಾಗೂ ಸಲಹಿದ ಆಶ್ರಮದ ಮುಖ್ಯಸ್ಥರಾದ ಡಾ. ಉದಯ್ ಕುಮಾರ್ ದಂಪತಿಗಳು ಹಾಗೂ ಆಶ್ರಮದ ಸಿಬ್ಬಂದಿಗಳಿಗೆ ವಿಶು ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪ್ರತಿಕ್ರಿಯಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಬೀದಿಯಲ್ಲಿ ತಿರುಗಾಡುವ ಮನೋರೋಗಿಗಳನ್ನು ನಿರ್ಲಕ್ಷ ಮಾಡದೇ ಸ್ಪಂದಿಸಿದಲ್ಲಿ ಅಂತಹ ಅಸಹಾಯಕರು ಪುನರ್ಜನ್ಮ ಪಡೆದು ಕುಟುಂಬ ಸೇರುತ್ತಾರೆ. ನಾನು ಉಡುಪಿಯಲ್ಲಿ ರಕ್ಷಿಸಲ್ಪಟ್ಟ ನೂರಾರು ಮನೋರೋಗಿಗಳಿಗೆ ಮಂಜೇಶ್ವರದ ಶ್ರೀ ಸಾಯಿ ಸೇವಾಶ್ರಮ ಹಾಗೂ ಸ್ನೇಹಾಲಯ ಪುನರ್ಜನ್ಮ ನೀಡಿ ಕುಟುಂಬ ಸೇರಿದ ಘಟನೆ ಹಿಂದೆ ಬಹಳಷ್ಟು ನಡೆದಿದೆ. ಹಿರಿಯ ಅಧಿಕಾರಿಗಳು ಇಂತಹ ಮನನೊಂದವರ ರಕ್ಷಣೆಗೆ ಸ್ಪಂದಿಸಬೇಕು. ಕೆಲವು ಬಾರಿ 5 ನಿಮಿಷದ ಕಾನೂನು ಪ್ರಕ್ರಿಯೆಗೆ 5 ದಿನ ಕಾಯಬೇಕಾದ ಸಂದರ್ಭ ಬಂದಿದೆ. ಜಿಲ್ಲಾಡಳಿತದ ವರ್ತನೆ ಹಲವು ಬಾರಿ ನೋವು ತಂದಿದೆ. ಇಂತಹ ಮಾನವೀಯ ಕೆಲಸಗಳಿಗೆ ಸರಕಾರಿ ಅಧಿಕಾರಿಗಳು ಸ್ಪಂದಿಸಿದಲ್ಲಿ ಸಮಾಜವೂ ಕೈ ಜೋಡಿಸುತ್ತದೆ ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...