ಉಡುಪಿ | ಅನಂತ ಕುಮಾರ್ ಹೆಗಡೆ ತನ್ನ ಕೀಳು ಸಂಸ್ಕೃತಿಯನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದ್ದಾರೆ: ರಮೇಶ್ ಕಾಂಚನ್

Date:

ಬಿಜೆಪಿ ಪಕ್ಷದ ಸಂಸದ ಅನಂತ ಕುಮಾರ್ ಹೆಗಡೆಯವರು ಪದೇ ಪದೆ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತಿದ್ದು ಅವರ ವಿರುದ್ಧ ಬಿಜೆಪಿ ನಾಯಕರಿಗೆ ನಿಜವಾದ ದಮ್ಮು-ತಾಕತ್ತು ಇದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಸವಾಲೆಸಿದಿದ್ದಾರೆ.

ಎಲ್ಲಾ ಸಮುದಾಯದ ಜನರ ಮತವನ್ನು ಪಡೆದು ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸಿದ ಅನಂತ ಕುಮಾರ್ ಹೆಗಡೆ ತನ್ನ ಕೀಳು ಸಂಸ್ಕೃತಿಯನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೇ ಬದಲಾವಣೆ ಮಾಡುವುದಾಗಿ ದರ್ಪದ ಮಾತು ನಿಜಕ್ಕೂ ಖಂಡನೀಯ. ಪದೇ ಪದೆ ಒಬ್ಬ ಸಂಸದರಾಗಿ ಇಂತಹ ಹೇಳಿಕೆ ನೀಡುವುದು ಸಮಾಜದಲ್ಲಿ ಅಶಾಂತಿ ಮೂಡಿಸಲು ಕಾರಣವಾಗುತ್ತದೆ ಎಂದು ಕಿಡಿಕಾರಿದರು.

ಅನಂತಕುಮಾರ್ ಹೆಗಡೆ ಅವರ ಹೇಳಿಕೆಯಿಂದ ದೂರ ಇರುವುದಾಗಿ ಹೇಳಿಕೊಂಡು ಬಿಜೆಪಿ ನಾಯಕರು ಕೈತೊಳೆದುಕೊಂಡರೆ ಸಾಲುವುದಿಲ್ಲ ಬದಲಾಗಿ ಅವರನ್ನು ಪಕ್ಷದಿಂದ ಹೊರಹಾಕುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಯಿ ಮಾತಿಗೆ ಅಂತರ ಕಾಯ್ದುಕೊಂಡಿದ್ದೇವೆ ಎನ್ನುವ ಮೂಲಕ ಮತ್ತಷ್ಟು ಮಾತನಾಡಲು ಬಿಜೆಪಿ ಪಕ್ಷ ಅವರಿಗೆ ಅವಕಾಶ ಮಾಡಿಕೊಟ್ಟು ಪರೋಕ್ಷವಾಗಿ ಅವರ ಬೆಂಬಲಕ್ಕೆ ನಿಂತಿದೆ ಎನ್ನುವ ಅನುಮಾನ ಕಾಡುತ್ತದೆ. ಸಂಸದ ಅನಂತ ಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಬಿಜೆಪಿ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕವಾಗಿದ್ದು ಇವರಿಗೆ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವನ್ನು ತೋರಿಸುತ್ತದೆ ಎಂದರು.

ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೀಡಿದ್ದಲ್ಲ. ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ. ಇವರಿಗೆ  ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು ತಾಕತ್ ಇಲ್ಲ ಅಷ್ಟೇ ಎಂದು ಗುಡುಗಿದರು.

ಸಂಸದನಾಗಿ ತಮ್ಮ ಸ್ವಂತ ಕ್ಷೇತ್ರಕ್ಕೆ ನಯಾಪೈಸೆಯಷ್ಟು ಕೆಲಸವನ್ನು ಮಾಡದ ಮತ್ತು ಲೋಕಸಭೆಯಲ್ಲಿ ಬಾಯಿ ಮುಚ್ಚಿಕೊಂಡೇ ಐದು ವರ್ಷಗಳನ್ನು ಪೂರ್ಣಗೊಳಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡದಾದ್ಯಂತ ಜನರಲ್ಲಿ ಆಕ್ರೋಶವಿದೆ. ಇದಕ್ಕಾಗಿ ಹಿಂದುತ್ವ ಅಪಾಯದಲ್ಲಿದೆ ಎಂಬ ಹುಸಿಭೀತಿಯನ್ನು ಜನರಲ್ಲಿ ಹುಟ್ಟಿಸಿ ಕೋಮುಭಾವನೆಯನ್ನು ಕೆರಳಿಸಿ ಮತಗಳ ಧ್ರುವೀಕರಣಗೊಳಿಸುವುದು ಅವರ ಉದ್ದೇಶವಾಗಿದೆ ಎಂದರು.

ಇದೇ ರೀತಿಯ ವರ್ತನೆ ಮುಂದುವರೆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಗಡೆಯವರಿಗೆ ಟಿಕೇಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು ಒಂದುವೇಳೆ ಟಿಕೇಟ್ ಸಿಕ್ಕಿದರೂ ಕೂಡ ಕ್ಷೇತ್ರದ ಜನ ನಿಷ್ಪ್ರಯೋಜಕ ಸಂಸದ ಅನಂತ ಕುಮಾರ್ ಹೆಗಡೆಯವರನ್ನು ಮನೆಗೆ ಕಳುಹಿಸುವ ಕೆಲಸ ಮಾಡಿಯೇ ಮಾಡುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...