ಉಡುಪಿ | ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ವೈದ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಪಿಸಿಆರ್‌ನಿಂದ ದೂರು

Date:

ಸಾಮಾಜಿಕ ಜಾಲತಾಣ ‘ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪ ಹೊತ್ತಿರುವ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಬಂಧಿಸುವಂತೆ ಆಗ್ರಹಿಸಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್(ಎಪಿಸಿಆರ್) ಸಂಘಟನೆಯು ಪೊಲೀಸರಿಗೆ ದೂರು ಸಲ್ಲಿಸಿದೆ.

ಬ್ರಹ್ಮಾವರ ಮಹೇಶ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾಕ್ಟರ್ ಕೀರ್ತನ್ ಉಪಾಧ್ಯ ಎನ್ನುವ ವೈದ್ಯರು ತಮ್ಮ ವೃತ್ತಿ ಮಾನದಂಡಕ್ಕೆ ವಿರುದ್ದವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ತೀರಾ ಕೀಳಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಸಾರ್ವಜನಿಕವಾಗಿ ಕೋಮು ಸೌಹಾರ್ದತೆಗೆ ದಕ್ಕೆ ಬರುವಂತೆ ಉದ್ದೇಶಪೂರ್ವಕವಾಗಿ ಕೃತ್ಯ ನಡೆಸಿದ್ದಾರೆ. ಹಾಗಾಗಿ, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದೆ.

ತಮ್ಮ ‘ಎಕ್ಸ್’ ಖಾತೆಯಲ್ಲಿ ನಮ್ಮ ದೇಶದಲ್ಲಿ ಮುಸ್ಲಿಂ ನರಹತ್ಯೆಗೆ ಪ್ರೇರೇಪಿಸುವಂತಹ ಮತ್ತು ಸಾರ್ವಜನಿಕವಾಗಿ ಒಂದು ಸಮುದಾಯಕ್ಕೆ ಅಭದ್ರತೆ ಮೂಡಿಸುವಂತಹ ಹೇಳಿಕೆಯನ್ನು ತಾವೇ ಬರೆದು ತಮ್ಮ ಖಾತೆಯಿಂದ ಹಂಚಿಕೊಂಡಿರುವುದು ಮಾತ್ರವಲ್ಲ, ಇದನ್ನು ಸುಮಾರು 1600 ಜನ ಮೆಚ್ಚುವಂತೆಯೂ ಮಾಡಿರುವುದು, ಪ್ರಜಾ ಪ್ರಭುತ್ವ ದೇಶದಲ್ಲಿ ಅವರ ಮುಸ್ಲಿಂ ದ್ವೇಶದ ಮನಸ್ಥಿಗೆ ಹಿಡಿದ ಕೈಗನ್ನಡಿ ಆಗಿದೆ ಎಂದು ದೂರಿನಲ್ಲಿ ಎಪಿಸಿಆರ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನದ ಚೌಕಟ್ಟಿನಲ್ಲಿ ಸರ್ವಜನಾಂಗದ ಶಾಂತಿಯ ತೋಟ ಎಂದು ಜಾತಿ ನೋಡದೆ ತನ್ನ ರೋಗಿಗಳ ರೋಗ ನೋಡಿ ಚಿಕಿತ್ಸೆ ನೀಡಬೇಕಾದ ವೈದ್ಯರೊಬ್ಬರು ಸಾರ್ವಜನಿಕವಾಗಿಯೇ ಇಷ್ಟೊಂದು ಕೆಳಮಟ್ಟದಲ್ಲಿ ಒಂದು ಸಮುದಾಯದ ಅವನತಿಯ ಯೋಚನೆಗಳನ್ನು ಹರಿಯಬಿಟ್ಟಿರುವದು ಮುಸ್ಲಿಂ ಸಮುದಾಯವನ್ನು ಮುಗಿಸುವ ಅವರ ಉದ್ದೇಶಿತ ಪ್ರಯತ್ನವಾಗಿದೆ. ಈಗಾಗಲೇ ಹಲವಾರು ಮುಸ್ಲಿಂ ರೋಗಿಗಳಿಗೆ ಇದೇ ಉದ್ದೇಶದಿಂದ ಚಿಕಿತ್ಸೆ ನೀಡಿರುವ ಸಾಧ್ಯತೆಯೂ ಅವರ ಸಾಮಾಜಿಕ ಜಾಲತಾಣದಲ್ಲಿ ಸ್ವಷ್ಟವಾಗುತ್ತಿದೆ. ಈ ಹಿಂದೆಯೂ ಇಂತಹದ್ದೇ ಪೋಸ್ಟರ್‌ಗಳನ್ನು ಹರಿಬಿಟ್ಟಿರುವ ಉದಾಹರಣೆ ಕಂಡುಬರುತ್ತಿದೆ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಉಡುಪಿ | ವೈದ್ಯ ಡಾ. ಕೀರ್ತನ್ ಉಪಾಧ್ಯರಿಂದ ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ಎಫ್‌ಐಆರ್ ದಾಖಲು

ವೈದ್ಯರೊಬ್ಬರ ಇಂತಹ ನಡವಳಿಕೆಯಿಂದ ಮುಸ್ಲಿಂ ಸಮುದಾಯವೇ ಭಯಕ್ಕೆ ಒಳಗಾಗಿದೆ. ಬ್ರಹ್ಮಾವರ ಪರಿಸರದಲ್ಲಿ ಅತೀ ಹತ್ತಿರಕ್ಕೆ ಸಿಗುವ ಮಹೇಶ್ ಆಸ್ಪತ್ರೆಯ ಮೇಲೆಯೂ ನಂಬಿಕೆ ಕದಡುತ್ತಿದೆ. ದೇವರ ನಂತರ ವೈದ್ಯರನ್ನೇ ನಂಬುವ ಮನುಕುಲಕ್ಕೆ ಇಂತಹ ವೈದ್ಯರಿಂದ ಕೋಮು ಭಾವನೆಗೆ ಧಕ್ಕೆ ಏರ್ಪಟ್ಟಿದೆ. ಆದ ಕಾರಣ, ಡಾಕ್ಟರ್ ಕೀರ್ತನ್ ಉಪಾಧ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರ ವೈದ್ಯಕೀಯ ವೃತ್ತಿ ಪರವಾನಿಗೆಯನ್ನು ರದ್ದುಗೊಳಿಸಿ ವೈದ್ಯ ವೃತ್ತಿಯ ಮೇಲಿನ ಗೌರವ ಉಳಿಯುವಂತೆ ಮಾಡಬೇಕು ಎಂದು ಎಪಿಸಿಆರ್ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...