ಉಡುಪಿ | ಪ್ರತಿ ಮಳೆಗಾಲದಲ್ಲೂ ಕೃತಕ ನೆರೆ;‌ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಕೃಷಿಕರು

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರು-ಗಿಳಿಯಾರು-ಚಿತ್ರಪಾಡಿ-ಬನ್ನಾಡಿ ಕಾರ್ಕಡ ಗ್ರಾಮದಲ್ಲಿ ಪ್ರತಿ ಮಳೆಗಾಲದಲ್ಲೂ ಕೃತಕ ನೆರೆ ಸೃಷ್ಟಿಯಾಗುತ್ತಿದ್ದು, ಕೃಷಿಕರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಪ್ರತಿ ಬಾರಿ ಸರ್ಕಾರಕ್ಕೆ ಮನವಿ ನೀಡಿದ ಹೊರತಾಗಿಯೂ ಸಮಸ್ಯೆಗೆ ಪರಿಹಾರ ದೊರಕುತ್ತಿಲ್ಲ. ಕೃತಕ ನೆರೆ ಬಂದು ನೂರಾರು ಎಕರೆ ಕೃಷಿಭೂಮಿ ನಾಶವಾಗುತ್ತಿದೆ.

ಈ ಭಾಗದಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ವ್ಯಾಸದ ತೂಬು ಸೇತುವೆಗಳನ್ನು ತೆರವುಗೊಳಿಸಿ ನಾಲ್ಕು ಪಿಲ್ಲರ್ ಸೇತುವೆ ನಿರ್ಮಾಣ ಆಗಬೇಕಾಗಿದೆ. ತಕ್ಷಣದ ಪರಿಹಾರವೆಂಬಂತೆ ಹೊಳೆಯ ಹೂಳು ತೆರವುಗೊಳಿಸಬೇಕಾಗಿದೆ. ಈ ಹಿಂದೆ ಹಲವು ಬಾರಿ ಮನವಿ ನೀಡಿ ಪರಿಹಾರಕ್ಕಾಗಿ ಒತ್ತಾಯಿಸಿದರು ಕೂಡ ಯಾವುದೇ ಪರಿಹಾರ ದೊರತಿಲ್ಲವೆಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದು, ಊರಿನ ರೈತರು ಒಗ್ಗೂಡಿ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ.

ಕೃತಕ ನೆರೆ 1

ಸಾಮಾಜಿಕ ಹೋರಾಟಗಾರ, ಅಡ್ವಕೇಟ್ ಮಂಜುನಾಥ್ ಗಿಳಿಯಾರ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಾವು ನಡೆಸುತ್ತಿರುವ ಹೊರಾಟ ರೈತರ ಉಳಿವಿಗಾಗಿಯೇ ಹೊರತು, ಯಾವುದೇ ರಾಜಕೀಯಕ್ಕಾಗಿ ಅಲ್ಲ. ಪ್ರಸ್ತುತ ಕೃಷಿ ಮಾಡುವುದೇ ಕಷ್ಟಕರ, ಕೂಲಿಯಾಳು ಸಮಸ್ಯೆ ಇದೆ. ಗಿಳಿಯಾರು ಭಾಗದಲ್ಲಿ ಕೃಷಿ ಭೂಮಿಯಿದೆ. ಈಗ ಈ ಕೃತಕ ನೆರೆಯ ಕಾರಣಕ್ಕೆ ಭತ್ತ ಬೆಳೆ ನಾಟಿ ಮಾಡಿರುವುದು ಕೊಳೆತು ಹೋಗುತ್ತದೆ” ಎಂದ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ನೆರೆ ಸಂತ್ರಸ್ತ ರೈತ

ರೈತ ಜಯರಾಮ್ ಶೆಟ್ಟಿ ಮಾತನಾಡಿ, “ಪ್ರತಿವರ್ಷ ಅಧಿಕಾರಿಗಳು ಬಂದು ನೋಡಿ ಹೋಗುತ್ತಾರೆ. ಮನವಿಗೆ ಯಾವುದೇ ಸ್ಪಂದನೆ ಇಲ್ಲ. ಇದು ಯಾರ ವಿರುದ್ಧದ ಪ್ರತಿಭಟನೆಯಲ್ಲ. ಇದು ನಮ್ಮ ನೋವಿನ ಪರಿಹಾರಕ್ಕಾಗಿ ಗ್ರಾಮಸ್ಥರು ನಡೆಸುವ ಹೋರಾಟವಾಗಿದೆ. ಪರಿಹಾರ ಸಮಸ್ಯೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ನೆರೆ ಸಂತ್ರಸ್ತ ರೈತ 1

“ತೆಕ್ಕಟ್ಟೆ ಗ್ರಾಮದ ಮಲ್ಯಾಡಿಯಿಂದ ಹೊಸಾಳ ಗ್ರಾಮದ ನಾಗರಮಠ ಚೆಕ್ ಡ್ಯಾಂವರೆಗೆ, ಸೂಲಡ್ಡು-ಮಡಿವಾಳಸಾಲು ಹೊಳೆಯ ನದಿಪಾತ್ರ ಗುರುತಿಸಿ ಅದರ ಹೂಳು ತೆಗೆಯಬೇಕು. ಮಣೂರು ಗ್ರಾಮದ ಕೈಕೂರು, ಗಿಳಿಯಾರು ಗ್ರಾಮದ ಸೂಲಡ್ಡು, ಚಿತ್ರಪಾಡಿ ಗ್ರಾಮದ ಕೋಟ-ಸ್ವಾಬ್ರಕಟ್ಟೆ ರಸ್ತೆ ಮತ್ತು ಬೈಕೂರು ಬೈಲು ಎಂಬಲ್ಲಿ ಈಗಿರುವ ಅತಿ ಕಡಿಮೆ ವ್ಯಾಸದ ತೂಬು ಸೇತುವೆಗಳನ್ನು ತೆಗೆದು, ಪಿಲ್ಲ‌ರ್ ಸೇತುವೆಗಳನ್ನು ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಮಕೃಷ್ಣ ಆಶ್ರಮದಲ್ಲಿ ಮತ್ತೊಬ್ಬ ಬಾಲಕನ ಮೇಲೆ ಹಲ್ಲೆ; ವೇಣುಗೋಪಾಲ ಎಂಬಾತನ ವಿಚಾರಣೆ

“ಕಾರ್ಕಡ ಗ್ರಾಮದ ಕುದ್ರುಮನೆ ಡ್ಯಾಂ ಮತ್ತು ಹೊಸಾಳ ಗ್ರಾಮದ ನಾಗರಮಠ ಚೆಕ್ ಡ್ಯಾಂಗಳಿಗೆ ಅಳವಡಿಸಿರುವ ಹಲಗೆಗಳನ್ನು ಸಂಪೂರ್ಣವಾಗಿ ಮಳೆಗಾಲದಲ್ಲಿ ತೆರವು ಮಾಡಬೇಕು. ಈ ಭಾಗದಲ್ಲಿ ಉಂಟಾಗುತ್ತಿರುವ ಕೃತಕ ನೆರೆ ಪರಿಹಾರಕ್ಕೆ ಪರಿಣಿತ ತಂತ್ರಜ್ಞರ ತಂಡದಿಂದ ಸರ್ವೆ ನಡೆಸಿ, ಕಾಲಮಿತಿಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಕೃತಕ ನೆರೆಯಿಂದ ಕೃಷಿನಷ್ಟ ಹೊಂದಿದ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು” ಎಂದು ಆಗ್ರಹಿಸಿದರು.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...