ಉಡುಪಿ | ಹೊಂಡ ಗುಂಡಿಗಳಿರುವ ರಸ್ತೆಯ ದುರಸ್ತಿಗೆ ಆಗ್ರಹ

Date:

ಉಡುಪಿ ನಗರದ ಬಡಗುಪೇಟೆ ವಾರ್ಡಿನ ವಾಸುಕಿ ಅನಂತ ಪದ್ಮನಾಭ ದೇವಸ್ಥಾನ ರಸ್ತೆಯು ಶ್ರೀ ಕೃಷ್ಣ ಮಠ, ಮುಕುಂದಕೃಪ ಶಾಲೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದ್ದು, ಈವಾಗ ಈ ರಸ್ತೆ‌ ಹೊಂಡ ಗುಂಡಿಗಳಿಂದಾಗಿ ಸಂಚಾರ ಕಷ್ಟಕರವಾಗಿ ಸಾರ್ವಜನಿಕರು ಪ್ರಯಾಸಪಡುವ ಪರಿಸ್ಥಿತಿ ಎದುರಾಗಿದೆ.

ಈ ರಸ್ತೆಯ ನಡುವಿನ ತಳದಲ್ಲಿದ್ದ ಡ್ರೈನೇಜ್ ಕೊಳವೆಗಳನ್ನು ಬದಲಿಸುವ ಕಾಮಗಾರಿ ನಡೆದಿತ್ತು. ಗುಂಡಿ ಅಗೆದಿರುವ ಸ್ಥಳದಲ್ಲಿ ಜಲ್ಲಿಕಲ್ಲು, ಜಲ್ಲಿಹುಡಿ ಹಾಕಿ ಮುಚ್ಚಿಡಲಾಗಿತ್ತು. ಈವಾಗ ಗುಂಡಿ ತೋಡಿರುವ ಸ್ಥಳವು ಕುಸಿತಗೊಂಡಿದ್ದು, ರಸ್ತೆಯ ಉದ್ದಕ್ಕೂ ಗುಂಡಿಗಳು ಬಿದ್ದಿವೆ. ಕಿರುದಾಗಿರುವ ಈ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಪ್ರಯಾಸ ಪಡಬೇಕಾಗಿದೆ. ರಸ್ತೆಯು ಹದಗೆಟ್ಟ ಕಾರಣದಿಂದ ಅಪಘಾತಗಳು ಸಂಭವಿಸುವುದು ಕಂಡುಬರುತ್ತಿವೆ. ಶಾಲಾ ವಿದ್ಯಾರ್ಥಿಗಳು, ಶ್ರೀಕೃಷ್ಣ ಮಠಕ್ಕೆ ಬರುವ ಯಾತ್ರಿಕರು ಧೂಳುಣ್ಣಬೇಕಾದ ಪರಿಸ್ಥಿತಿ‌ ಇಲ್ಲಿ ಉದ್ಭವಿಸಿದೆ.

ಧೂಳೇಳುವ ರಸ್ತೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಶ್ವಾಸಕೋಶ, ಕಣ್ಣಿನ ತೊಂದರೆಗಳಿಗೆ ತುತ್ತಾಗಬೇಕಾದ ಅಪಾಯಕರ ಸ್ಥಿತಿಯು ಎದುರಾಗಿದೆ. ಜಿಲ್ಲಾಡಳಿತ, ನಗರಾಡಳಿತ ತಕ್ಷಣವಾಗಿ ದುಸ್ಥಿತಿಯಲ್ಲಿರುವ ವಾಸುಕಿ ಅನಂತ ಪದ್ಮನಾಭ ರಸ್ತೆಯನ್ನು ಡಾಮರೀಕರಣ ಮಾಡಿಸುವಂತೆ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...