ಉಡುಪಿ | ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್‌ ಪ್ರವೀಣ್ ಗೆ ಸನ್ಮಾನ

Date:

ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸತತದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ರೆನೋಲ್ಡ್ ಪ್ರವೀಣ್ ಕುಮಾರ್‌ಗೆ ಬ್ರಹ್ಮಗಿರಿ ಆದರ್ಶ ಗ್ರಾಹಕರ ವಿ. ಸಹಕಾರ ಸಂಘದವತಿಯಿಂದ ಸೋಮವಾರ ಸನ್ಮಾನಿಸಲಾಯಿತು.

ಅಧ್ಯಕ್ಷರಾದ ಆನಂದ ಪ್ರಜಾರಿ ಮಾತನಾಡಿ ಉಡುಪಿಯ ಬಾರ್ ಎಸೋಶಿಯೇಶನ್‌ನನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಿರುವ ರೆನೋಲ್ಡ್ ಪ್ರವೀಣ್ ತಮ್ಮ ಅಭಿವೃದ್ಧಿ ಕಾರ್ಯದ ಜೊತೆಗೆ ಗುರು ಹಿರಿಯರಿಗೆ ಗೌರವ ಕೊಟ್ಟು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡವರು ರಾಜಕೀಯವಾಗಿ, ಸಾಮಾಜಿಕವಾಗಿ ಬಹಳಷ್ಟು ತೊಡಗಿಸಿಕೊಂಡಿದ್ದಾರೆ ಎಂದರು.

ಉಪಾಧ್ಯಕ್ಷರಾದ ದಲಿತ ಚಿಂತಕ ಜಯನ್ ಮಲ್ಪೆ ಮಾತನಾಡಿ ಗುರಿ ಮತ್ತು ದಾರಿಯೊಂದಿಗೆ ಸ್ಪಷ್ಟ ಹೆಜ್ಜೆಯಿಡುವ ರೆನೋಲ್ಡ್,ಉಡುಪಿಯ ವಕೀಲರ ಸಂಘವನ್ನು ಸಾಂಸ್ಕೃತಿಕವಾಗಿ ಬೆಳಗಿಸಿದವರು. ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ನಿಷ್ಠೆ, ಪಾರದರ್ಶಕ ಕಾರ್ಯನಿರ್ವಹಣೆಯಿಂದ ಸಮಾಜದಲ್ಲಿ ನಕ್ಷತ್ರದಂತೆ ಬೆಳಗಿದ ಇವರು ರಾಜಕೀಯವಾಗಿಯೂ ಒಂದು ಮೈಲುಗಳನ್ನು ರೂಪಿಸಿ ಇತಿಹಾಸ ಬರೆದವರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ದೇಶಕರಾದ ಸಮಾಜಸೇವಕ ಕೃಷ್ಣಮೂರ್ತಿ, ಬಿ.ಎಲ್. ನರಸಿಂಹ ಸ್ವಾಮಿ, ಸುಲೋಚನ ದಾಮೋದರ್, ಶೇಖರ್ ಶೆಟ್ಟಿ,ಹರಿದಾಸ್ ಭಟ್, ಜೀತೇಂಶ್ ಕುಮಾರ್, ಶ್ಯಾಮ್ ಶೆಟ್ಟಿ,ಮಹಮ್ಮದ್ ಖಾನ್, ಅನಂತ ನಾಯ್ಕ, ವಿನಯ ಪ್ರಕಾಶ್ ಭಾಗವಹಿಸಿದ್ದರು. ಕಾರ್ಯದರ್ಶಿ ಜಲೇಂದ್ರ ಕೋಟ್ಯಾನ್ ಸ್ವಾಗತಿಸಿ, ಶ್ರೀಮತಿ ಕೆ.ಆಶಾಲತ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...