ಉಡುಪಿ | ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಸರ್ಕಾರದ ಪಾಲುದಾರರು: ಗೀತಾ ಶಿವರಾಜಕುಮಾರ್

Date:

ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯುವ ಪ್ರತಿಯೊಬ್ಬರೂ ಕೂಡ ಸರ್ಕಾರದ ಪಾಲುದಾರು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿಯ ಅಣ್ಣಪ್ಪಯ್ಯ ಸಭಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

“ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಪೂರೈಸಲು ಮಾಸಿಕ ₹50 ಲಕ್ಷ ಹಣ ಖರ್ಚಾಗುತ್ತಿದೆ. ಇಲ್ಲಿ ವಾರ್ಷಿಕ ₹6 ಕೋಟಿ ಹಣ ವ್ಯಯಿಸಬೇಕು. ಆದ್ದರಿಂದ ದೇಶದಲ್ಲಿ ಇಂತಹ ಯೋಜನೆ ಎಲ್ಲಿಯೂ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ₹58 ಸಾವಿರ ಕೋಟಿ ಹಣದ ಹೊರೆ ಸರ್ಕಾರಕ್ಕೆ ಆಗುತ್ತಿದೆ. ಆದರೂ, ಈ ಬಗ್ಗೆ ಯಾವುದೇ, ಒಳ ಒಪ್ಪಂದಕ್ಕೆ ಸರ್ಕಾರ ಸಿದ್ದವಿಲ್ಲ. ಜನಸಾಮಾನ್ಯರ ತೆರಿಗೆ ಹಣವನ್ನು ಪುನಃ ಜನರಿಗೆ ತಲುಪಿಸಲಾಗುತ್ತಿದೆ ಎನ್ನುವ ಸಂತಸ ಸರ್ಕಾರಕ್ಕಿದೆ” ಎಂದು ಸಂತಸ ವ್ಯಕ್ತಪಡಿಸಿದರು.

“ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ತಮ್ಮ ಬದುಕಿನುದ್ದಕ್ಕೂ ಬಡವರು, ದಲಿತರು, ಶೋಷಿತ ವರ್ಗದವರ ಪರವಾಗಿಯೇ ಚಿಂತಿಸುತ್ತಿದ್ದರು. ಅಂದು, ಬಂಗಾರಪ್ಪ ಅವರು ಜನಸಾಮಾನ್ಯರಿಗೆ ನೀಡಿದ ಸೇವೆ, ಇಂದಿಗೂ ಜೀವಂತವಾಗಿದೆ” ಎಂದರು.

“ಬಂಗಾರಪ್ಪ ಅವರ, ಆರಾಧನ, ಗ್ರಾಮೀಣ ಕೃಪಾಂಕ, ಆಶ್ರಯ ಮತ್ತು ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳು ಬಡವರಿಗೆ ಬದುಕಲು ನೆಲೆ ಕಲ್ಪಿಸಿಕೊಟ್ಟಿವೆ” ಎಂದರು.

ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, “ದೇಶದಲ್ಲಿ ಬಿಜೆಪಿ ಆಡಳಿತದಿಂದ ಜನಸಾಮಾನ್ಯರು ಬದುಕು ನಡೆಸುವುದೇ ಶೋಚನೀಯ ಸ್ಥಿತಿ ತಲುಪಿದೆ” ಎಂದರು.

ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಮಾತನಾಡಿ, “ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಂಸದ ಬಿ ವೈ ರಾಘವೇಂದ್ರ ಅವರು ಧೋರಣೆ ತೋರಿದ್ದಾರೆ. ಅಧಿಕಾರದ ಗದ್ದಿಗೆ ಏರಿ 15 ವರ್ಷ ಕಳೆದವು. ಆದರೆ, ಕ್ಷೇತ್ರ ಮಾತ್ರ ಕತ್ತಲಲ್ಲಿ ಮುಳುಗಿದೆ” ಎಂದು ದೂರಿದರು.

ನಟ ಶಿವರಾಜಕುಮಾರ್ ಮಾತನಾಡಿ, “ಚಿಕ್ಕ ವಯಸ್ಸಿನಿಂದ ಪತ್ನಿ ಗೀತಾ ಅವರು ಬಂಗಾರಪ್ಪ ಅವರ ರಾಜಕೀಯ ಚಟುವಟಿಕೆಗಳನ್ನು ಹತ್ತಿರದಿಂದ ನೋಡಿ ಬೆಳೆದಿದ್ದಾರೆ. ಬಂಗಾರಪ್ಪ ಅವರು, ಎಲ್ಲ ಧರ್ಮ, ಸಮುದಾಯಗಳನ್ನು ಪ್ರೀತಿಯಿಂದ ಕಾಣುತ್ತಿದ್ದರು. ಅದೇ ಗುಣ ಗೀತಾ ಅವರಿಗೆ ಬಂದಿದೆ. ಜಿಲ್ಲೆಯಲ್ಲಿ ಬಂಗಾರಪ್ಪ ಅವರ ಋಣ ತೀರಿಸಲು ಒಂದು ಅವಕಾಶ ಕಲ್ಪಿಸಿಕೊಡಿ” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬಸವರಾಜ ಪಾಟೀಲ್ ಇಟಗಿ ನೇಮಕ

ಪ್ರಮುಖರಾದ ರಾಜು ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ, ಅರವಿಂದ ಪೂಜಾರಿ, ಹರೀಶ್ ಕೊಡಪಾಡಿ, ಚಂದ್ರ ಶೇಖರ ಪೂಜಾರಿ, ಮಂಜುಳ ದೇವಾಡಿಗ ಸೇರಿದಂತೆ ಇತರೆ ಗಣ್ಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...