ಉಡುಪಿ | ಹಳೆ ಪಿಂಚಣಿ ಯೋಜನೆಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ತೀವ್ರ ಹೋರಾಟ: ಭೋಜೇಗೌಡ ಎಚ್ಚರಿಕೆ

Date:

ಸಮಾನ ಕೆಲಸ ಸಮಾನ ವೇತನ ಎನ್ನುವ ಸಂವಿಧಾನಬದ್ಧ ಹಕ್ಕು ಸದ್ಯ ರಾಜ್ಯದಲ್ಲಿ ಪುಸ್ತಕಕ್ಕೆ ಮಾತ್ರ ಸೀಮಿತವಾಗಿದ್ದು, ಅತ್ಯಂತ ದೊಡ್ಡ ಸಮಸ್ಯೆ ಆಗಿರುವ ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್)ಯನ್ನು ಕೂಡಲೇ ಹಳೆ ಪಿಂಚಣಿ ಯೋಜನೆ(ಒಪಿಎಸ್)ಗೆ ವರ್ಗಾಯಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಮಾತನಾಡಿದ ಅವರು, “ಶಿಕ್ಷಣ ಇಲಾಖೆಯಲ್ಲಿ ಬಡ್ತಿ ಹಾಗೂ ಪಿಂಚಣಿ ವ್ಯವಸ್ಥೆ ಮಾತ್ರವಲ್ಲದೆ ಸಂಬಳದಲ್ಲೂ ಕೂಡ ತಾರತಮ್ಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ 40 ವರ್ಷಗಳಿಂದ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ನೌಕರರು ಪಿಂಚಣಿಯಿಂದ ವಂಚಿತರಾಗಿದ್ದಾರೆ. ಪಿಂಚಣಿ ಸಂವಿಧಾನಬದ್ಧ ಹಕ್ಕು ಎನ್ನುವುದನ್ನು ಸುಪ್ರೀಂ ಕೋರ್ಟ್ ಈಗಾಗಲೇ ಅನೇಕ ಆದೇಶಗಳ ಮೂಲಕ ವ್ಯಾಖ್ಯಾನಿಸಿದೆ” ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ “ವೋಟ್ ಫಾರ್ ಎನ್‌ಪಿಎಸ್ ಎನ್ನುವ ಪ್ರಣಾಳಿಕೆಯ ಮೂಲಕ ಮತ ಪಡೆದು ಅಭೂತಪೂರ್ವ 135 ಸ್ಥಾನಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಒಪಿಎಸ್ ಪದ್ದತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ದೇಶದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹೈಕೋರ್ಟ್ ನ್ಯಾಯಾಧೀಶರು ಶಾಸಕರು ಸೇರಿದಂತೆ ಎಲ್ಲರೂ ಪಿಂಚಣಿಗೆ ಅರ್ಹರಾಗಿದ್ದಾರೆ. ಆದರೆ ಶಿಕ್ಷಣ ಇಲಾಖೆಯಲ್ಲಿ ಮಾತ್ರ ತಾರತಮ್ಯ ನಡೆಯುತ್ತಿದ್ದು, ಶಿಕ್ಷಕರ ಭರ್ತಿ, ವೇತನ ತಾರತಮ್ಯ, ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಮಾನ್ಯತೆ ನವೀಕರಣ, ಪಾಲಿಟೆಕ್ನಿಕ್ ಐಟಿಐ ಮತ್ತು ಅತಿಥಿ ಉಪನ್ಯಾಸಕರ ಸಮಸ್ಯೆಗಳು, ವಸತಿ ಶಾಲೆಗಳಲ್ಲಿ ಶಿಕ್ಷಕರ ಸಮಸ್ಯೆ ಬಗ್ಗೆ ಕೂಡಲೇ ಶಿಕ್ಷಣ ಇಲಾಖೆಯ ಸಚಿವರುಗಳು ತಮ್ಮ ಅಧಿಕಾರಿಗಳೊಂದಿಗೆ ಶಿಕ್ಷಣ ಮತ್ತು ಪದವೀಧರ ಕ್ಷೇತ್ರದ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ಅಧಿವೇಶನದಲ್ಲಿ ಸರ್ಕಾರಕ್ಕೆ ಶಿಕ್ಷಕರ ಮೇಲಿನ ತಾರತಮ್ಯ ನೀತಿ ತಿರುಗುಬಾಣವಾಗಿ ಪರಿಣಮಿಸಲಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಬಹುತ್ವ ಗಟ್ಟಿಗೊಳಿಸುವುದೇ ಮೇ ಸಾಹಿತ್ಯ ಮೇಳದ ಮುಖ್ಯ ಉದ್ದೇಶ: ಬಸವರಾಜ ಸೂಳಿಬಾವಿ

ಈ ಸಂದರ್ಭದಲ್ಲಿ ಜೆಡಿಎಸ್‌ನ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಾಧ್ಯಕ್ಷ ಮುಖಂಡ ಹುಸೇನ್ ಹೈಕಾಡಿ, ಪಕ್ಷದ ಮುಖಂಡರುಗಳು, ವಿವಿಧ ಶಿಕ್ಷಕರ ಸಂಘಗಳ ಪ್ರಮುಖರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...