ಉಡುಪಿ | ಉದ್ಘಾಟನೆ ಭಾಗ್ಯವಿಲ್ಲದೆ ಅನಾಥ ಸ್ಥಿತಿಯಲ್ಲಿದೆ ಬೀಡಿನಗುಡ್ಡೆಯ ಅನಿಲ ಚಿತಾಗಾರ!

Date:

ಉಡುಪಿ ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದಿದ್ದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ ಭಾಗ್ಯ ಪಡೆಯದೆ ಅನಾಥ ಸ್ಥಿತಿಯಲ್ಲಿದೆ. ಶೀಘ್ರವಾಗಿ ಲೋಕಾರ್ಪಣೆಗೊಳಿಸುವಂತೆ ಸಾರ್ವಜನಿಕ ವಲಯದಿಂದ ಆಗ್ರಹಗಳು ಸಹ ವ್ಯಕ್ತವಾಗುತ್ತಿವೆ.

ತಂತ್ರಜ್ಞಾನ ಮುಂದುವರಿದರೂ ಇನ್ನೂ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಕಟ್ಟಿಗೆಗಳನ್ನು ಬಳಸಿಕೊಂಡು ಸಾಂಪ್ರದಾಯಿಕ ಪದ್ಧತಿಯಂತೆ ಅಂತ್ಯಸಂಸ್ಕಾರಗಳು ನಡೆಯುತ್ತಿವೆ. ಈ ಪದ್ಧತಿಯಿಂದ ಮರಗಳ ವಿನಾಶ ಹಾಗೂ ಶವ ದಹನದಿಂದಾಗುವ ಧೂಮ, ಹಾರುವ ಬೂದಿಯಿಂದ ಸುತ್ತಮುತ್ತಲಿನ ಪರಿಸರದಲ್ಲಿ ‘ವಾಯುಮಾಲಿನ್ಯ’ ಆಗುತ್ತಿದೆ.

ಬೀಡಿನ ಗುಡ್ಡೆ

ಪರಿಸರ ರಕ್ಷಿಸುವ ದೃಷ್ಟಿಕೋನದಿಂದ ನಗರಸಭೆ ಶವಸಂಸ್ಕಾರಕ್ಕೆ ಆಧುನಿಕ ತಂತ್ರಜ್ಞಾನದ ಅನಿಲ ಚಿತಾಗಾರವನ್ನು ಸಾಂಪ್ರದಾಯಿಕ ಚಿತಾಗಾರದ ಸಮೀಪವೇ ಸ್ಥಾಪಿಸಿದೆ. ಈ ಪರಿಸರಸ್ನೇಹಿ ಯೋಜನೆಗೆ ಸಾರ್ವಜನಿಕ ವಲಯದಲ್ಲಿ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತಾದರೂ, ಇಲ್ಲಿಯವರೆಗೆ ಉದ್ಘಾಟನೆ ಆಗದಿದ್ದಕ್ಕೆ ಬೇಸರ ಕೂಡ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಈ ದಿನ.ಕಾಮ್ ಜೊತೆಗೆ ಮಾತನಾಡಿದ್ದು, “ಕಟ್ಟಿಗೆಯಿಂದ ಶವ ದಹಿಸಲು ಸುಮಾರು 2 ರಿಂದ 3 ಗಂಟೆಗಳು ಬೇಕಾಗುತ್ತದೆ. ಅನಿಲ ಚಿತಾಗಾರದಲ್ಲಿ ಬಹಳ ಕಡಿಮೆ ಸಮಯದಲ್ಲಿ ಕಳೇಬರವನ್ನು ಭಸ್ಮಗೊಳಿಸಬಹುದು” ಎಂದು ತಿಳಿಸಿದರು.

“ಅನಿಲ ಚಿತಾಗಾರದಲ್ಲಿ ಶವವನ್ನು ದಹಿಸುವಾಗ ಉತ್ಪತ್ತಿಯಾಗುವ ಧೂಮವು ನೇರವಾಗಿ ಪರಿಸರದಲ್ಲಿ ಪಸರಿಸುವುದಿಲ್ಲ. ಈ ಚಿತಾಗಾರವು ಧೂಮದಲ್ಲಿನ ರಾಸಾಯನಿಕ ಹಾಗೂ ಧೂಮವನ್ನು ನಿಯಂತ್ರಿಸಿಕೊಂಡು, ಶುದ್ದೀಕರಿಸಿದ ಧೂಮವನ್ನು ಚಿಮಿಣಿಯ ಮೂಲಕ ಹೊರಹಾಕಿಸುವ ನೂತನ ವ್ಯವಸ್ಥೆ ಹೊಂದಿರುತ್ತದೆ. ಪರಿಸರಸ್ನೇಹಿಯಾಗಿ ಅನಿಲ ಚಿತಾಗಾರವು ಕೆಲಸ ನಿರ್ವಹಿಸುತ್ತದೆ. ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಂಡಿರುವ ಅನಿಲ ಚಿತಾಗಾರವನ್ನು ನಗರಾಡಳಿತ, ಜಿಲ್ಲಾಡಳಿತ, ಜನಪ್ರತಿನಿಧಿಗಳು ಶೀಘ್ರವೇ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...