ಉಡುಪಿ | ದಿವ್ಯಾಂಗರ ಪ್ರತಿಭೆಗಳಿಗೆ ಪ್ರೋತ್ಸಾಹವಿದ್ದಲ್ಲಿ ಉತ್ತಮ ಸಾಧನೆ ಸಾಧ್ಯ – ಬಿಷಪ್ ಜೆರಾಲ್ಡ್ ಲೋಬೊ

Date:

ದಿವ್ಯಾಂಗ ವ್ಯಕ್ತಿಗಳು ಎಂದೂ ಕೂಡ ಸಮಾಜಕ್ಕೆ ಹೊರೆಯಲ್ಲಿ ಬದಲಾಗಿ ಅವರಲ್ಲಿ ಕೂಡ ಉತ್ತಮವಾದ ಪ್ರತಿಭೆಗಳಿದ್ದು ಅದಕ್ಕೆ ಸೂಕ್ತ ಪ್ರೋತ್ಸಹ ಲಭಿಸಿದಾಗ ಅಂತಹ ವ್ಯಕ್ತಿಗಳು ಅತ್ಯುತ್ತಮವಾದ ಸಾಧನೆ ತೋರಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೂಡ ದಿವ್ಯಾಂಗರಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ | ಡಾ| ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಧರ್ಮಪ್ರಾಂತ್ಯದ ಕುಟುಂಬ ಆಯೋಗದ ವತಿಯಿಂದ ಆಯೋಜಿಸಿದ್ದ ದಿವ್ಯಾಂಗರ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ದೈಹಿಕ ನ್ಯೂನ್ಯತೆಯಿಂದ ಬಳಲುತ್ತಿರುವ ದಿವ್ಯಾಂಗರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುವಂತೆ ಈಗಾಗಲೇ ಕ್ರೈಸ್ತ ಜಗದ್ಗುರು ಪೋಪ್ ಫ್ರಾನ್ಸಿಸ್ ಜಗತ್ತಿಗೆ ಕರೆ ನೀಡಿದ್ದಾರೆ. ಧರ್ಮಪ್ರಾಂತ್ಯ ಮಟ್ಟದಲ್ಲಿ ದಿವ್ಯಾಂಗ ಮಕ್ಕಳಿಗೆ ಕೂಡ ಉತ್ತಮ ಶಿಕ್ಷಣ ಪಡೆಯಲು ಹಾಗೂ ದಿವ್ಯಾಂಗರಿಗೆ ಸರಕಾರದಿಂದ ಲಭಿಸುವ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪಡೆಯನ್ನು ರಚಿಸಿದ್ದು ಈ ಮೂಲಕ ದಿವ್ಯಾಂಗರು ಸಮಾಜದ ಮುಖ್ಯವಾಹಿನಿಯಲ್ಲಿ ಸ್ವಾಭಿಮಾನದಿಂದ ಬದಕುವಂತಹ ವ್ಯವಸ್ಥೆ ಆಗಬೇಕಾಗಿದೆ ಎಂದರು.

1004651460

ಎಮ್ ಸಿ ಸಿ ಬ್ಯಾಂಕ್ ಇದರ ಅಧ್ಯಕ್ಷರಾದ ಅನಿಲ್ ಲೋಬೊ ವಿಶೇಷ ಚೇತನರಿಗೆ ಅನುಕಂಪ ತೋರಿಸುವ ಬದಲು ಅವಕಾಶ ಕಲ್ಪಿಸಿಕೊಟ್ಟರೆ ನಮ್ಮ ಸಾಮರ್ಥ್ಯ ಏನೆಂಬುದನ್ನು ಸಾಬೀತುಪಡಿಸುತ್ತಾರೆ. ಆದರೆ ಪ್ರೋತ್ಸಾಹ ಹಾಗೂ ಆರ್ಥಿಕ ಸಮಸ್ಯೆಯಿಂದಾಗಿ ಅವರಲ್ಲಿರುವ ಪ್ರತಿಭೆ ನಾಶ ಹೊಂದುತ್ತಿದೆ. ವಿಶೇಷ ಅಗತ್ಯತೆಯುಳ್ಳವರು ನಮ್ಮೊಳಗೆ ಒಬ್ಬರು ಎಂಬ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಸಂವೇದನಾಶೀಲತೆ ಗುಣದಿಂದ ಮಾತ್ರ ಇಂತವರ ಏಳಿಗೆ ಸಾಧ್ಯ. ದಿವ್ಯಾಂಗರ ಏಳಿಗೆಗೆ ತಮ್ಮ ಸಂಸ್ಥೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿವ್ಯಾಂಗರಿಂದ ಧರ್ಮಾಧ್ಯಕ್ಷರಿಗೆ ಸನ್ಮಾನ 75 ವರ್ಷಗಳ ಹುಟ್ಟು ಹಬ್ಬ ಹಾಗೂ ಧರ್ಮಾಧ್ಯಕ್ಷರಾಗಿ 25 ವರ್ಷಗಳನ್ನು ಪೊರೈಸಿ ಧರ್ಮಾಧ್ಯಕ್ಷ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರನ್ನು ದಿವ್ಯಾಂಗರು ಜೊತೆಯಾಗಿ ಸೇರಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲಾ ದಿವ್ಯಾಂಗರಿಗೆ ಧರ್ಮಾಧ್ಯಕ್ಷರು ಹಾಗೂ ಇತರ ಧರ್ಮಗುರುಗಳು ಶಾಲು ಹೊದಿಸಿ , ಗೌರವ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಮಾನಸ ವಿಶೇಷ ಶಾಲೆಯ ಮಕ್ಕಳು ಹಾಗೂ ತೊಟ್ಟಂ ಚರ್ಚಿನ ಯುವಜನರು ತಮ್ಮ ನೃತ್ಯಗಳ ಮೂಲಕ, ವಂ| ಡೆನಿಸ್ ಡೆಸಾ ಅವರ ಗಾಯನದ ಮೂಲಕ ದಿವ್ಯಾಂಗರಿಗೆ ಹುರುಪನ್ನು ತುಂಬಿದರು.

ಕರ್ನಾಟಕ ಪ್ರಾಂತೀಯ ದಿವ್ಯಾಂಗರ ಆಯೋಗದ ಕಾರ್ಯದರ್ಶಿ ಎಸ್ತೆರ್ ಡಿಸೋಜಾ, ಅನುಗ್ರಹ ಪಾಲನಾ ಕೆಂದ್ರದ ನಿರ್ದೇಶಕ ಹಾಗೂ ಕಥೊಲಿಕ ಶಿಕ್ಷಣ ಸೊಸೈಟಿ ಉಡುಪಿ ಧರ್ಮಪ್ರಾಂತ್ಯದ ಕಾರ್ಯದರ್ಶಿ ವಂ|ವಿನ್ಸೆಂಟ್ ಕ್ರಾಸ್ತಾ, ಕುಟುಂಬ ಆಯೋಗದ ನಿರ್ದೇಶಕ ವಂ|ಡಾ|ರೋಶನ್ ಡಿಸೋಜಾ, ಸಂಯೋಜಕಿ ಸಿಸ್ಟರ್ ವಿನ್ನಿ, ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ಡೆನಿಸ್ ಡೆಸಾ, ಆರೋಗ್ಯ ಆಯೋಗದ ನಿರ್ದೇಶಕ ಡಾ|ಎಡ್ವರ್ಡ್ ಲೋಬೊ, ಬೈಬಲ್ ಆಯೋಗದ ನಿರ್ದೇಶಕರಾದ ವಂ|ಸಿರಿಲ್ ಲೋಬೊ, ಉಜ್ವಾಡ್ ಪತ್ರಿಕೆಯ ಸಂಪಾದಕರಾದ ವಂ| ಆಲ್ವಿನ್ ಉಪಸ್ಥಿತರಿದ್ದರು.

ಕುಟುಂಬ ಆಯೋಗದ ನಿರ್ದೇಶಕರಾದ ಲೆಸ್ಲಿ ಆರೋಜಾ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತ ಹಾಗೂ ಧನ್ಯವಾದವನ್ನು ನೆರವೇರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...