ಉಡುಪಿ | ಭಾರತೀಯ ಸೇನೆ ಹೆಸರಿನಲ್ಲಿ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ

Date:

ಭಾರತೀಯ ಕಥೊಲಿಕ ಧರ್ಮಾಧ್ಯಕ್ಷರ ಮಂಡಳಿಯ ಸೂಚನೆಯ ಮೇರೆಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಭಾನುವಾರ ಭಾರತೀಯ ಸೇನೆಗೆ ಹಾಗೂ ಯೋಧರಿಗೆ ಒಳಿತಾಗುವಂತೆ ಆಶಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಪ್ರತಿಯೊಂದು ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆಯನ್ನು ಸಲ್ಲಿಸಿದರು.

ತಮ್ಮ ಅಧಿಕೃತ ವಾರ್ಷಿಕ ಭೇಟಿಯಲ್ಲಿರುವ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಕಾರ್ಕಳ ತಾಲೂಕಿನ ಬೆಳ್ಮಣ್ ಸಂತ ಜೋಸೆಫರ ಚರ್ಚಿನಲ್ಲಿ ವಿಶೇಷ ಪ್ರಾರ್ಥನಾ ವಿಧಿಯನ್ನು ನೆರವೇರಿಸಿ ದೇಶ ಕಾಯುವ ಸೈನಿಕರಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು. ಇದೇ ವೇಳೆ ಕ್ರೈಸ್ತ ಧರ್ಮಸಭೆಗೆ ನೂತನ ಜಗದ್ಗುರುವಾಗಿ ಆಯ್ಕೆಯಾಗಿರುವ ಪೋಪ್ 14 ನೇ ಲಿಯೋ ಅವರಿಗೆ ಶುಭಕೋರಿ ವಿಶೇಷ ಆರಾಧನೆಯನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಧರ್ಮಾಧ್ಯಕ್ಷರು ಇಂದು ಜಗತ್ತಿನಾದ್ಯಂತ ಕ್ರೈಸ್ತ ಸಮುದಾಯ ಯೇಸು ಒಳ್ಳೆಯ ಕುರುಬರ ಹಬ್ಬದ ಆಚರಣೆಯನ್ನು ಮಾಡುತ್ತಿದ್ದು ಇದೇ ಸಂದರ್ಭದಲ್ಲಿ ಜಗತ್ತಿಗೆ ಮುಗ್ದ ಮನಸ್ಸಿನ ಶಾಂತಿ ದೂತರಾಗಿ ಜಗದ್ಗುರು ಪೋಪ್ 14 ನೇ ಲಿಯೋ ಆಯ್ಕೆಯಾಗಿದ್ದಾರೆ. ದೇಶದ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದ ಭೀತಿ ಆವರಿಸಿದ್ದು ನಮ್ಮ ಸೈನಿಕರು ತಮ್ಮ ಜೀವದ ಹಂಗು ತೊರೆದು ತಮ್ಮ ದೇಶದ ಪ್ರಜೆಗಳ ರಕ್ಷಣೆಗೆ ಕಟಿಬದ್ದರಾಗಿ ನಿಂತಿದ್ದಾರೆ. ಅವರಿಗಾಗಿ ನಮ್ಮ ಪ್ರಾರ್ಥನೆ ಅನುದಿನವೂ ಇರಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಪೋಪ್ ಅವರು ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಎಲ್ಲರೂ ಕೈಜೋಡಿಸುವಂತೆ ಕರೆನೀಡಿದ್ದು, ಸಂವಾದ ಮಾತುಕತೆಗಳ ಮೂಲಕ ಸೇತುವೆ ನಿರ್ಮಿಸಿ ಎಲ್ಲರೂ ಪರಸ್ಪರ ಸಹೋದರರಂತೆ ಬಾಳಲು ಕರೆ ನೀಡಿರುತ್ತಾರೆ. ಜಗತ್ತಿನಲ್ಲಿ ಸದಾ ಶಾಂತಿ ನೆಲೆಸಬೇಕು ಎನ್ನುವುದು ಅವರ ಬಯಕೆಯಾಗಿದ್ದು ನಮ್ಮ ದೇಶದಲ್ಲಿಯೂ ಕೂಡ ಯುದ್ದದ ಕಾರ್ಮೋಡ ತಿಳಿಗೊಂಡು ಶಾಂತಿಯು ನೆಲೆಸಲಿ. ಈ ನಿಟ್ಟಿನಲ್ಲಿ ಹಿಂಸೆಯ ಮಾರ್ಗವನ್ನು ಕೈಬಿಟ್ಟು ಶಾಂತಿ ಸ್ಥಾಪನೆಯತ್ತ ಎರಡೂ ದೇಶಗಳೂ ಮುಂದೆ ಬರಲಿ ಮತ್ತು ದೇಶದ ಸೈನಿಕರ ಕರ್ತವ್ಯಕ್ಕೆ ಸದಾ ಪ್ರತಿಯೊಬ್ಬರು ಬೆಂಬಲವಾಗಿ ನಿಲ್ಲುವುದರ ಮೂಲಕ ಅವರಲ್ಲಿ ಆತ್ಮ ಸ್ಥೈರ್ಯವನ್ನು ತುಂಬುವ ಕೆಲಸವನ್ನು ಮಾಡೋಣ ಎಂದರು.

ಈ ವೇಳೆ ಚರ್ಚಿನ ಧರ್ಮಗುರು ವಂ|ಫ್ರೆಡ್ ಮಸ್ಕರೇನ್ಹಸ್, ಸಹಾಯಕ ಧರ್ಮಗುರು ವಂ|ಅರ್ನಾಲ್ಡ್ ಮತಾಯಸ್, ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚಿನ ಧರ್ಮಗುರು ವಂ|ಕ್ಲೇಮಂಟ್ ಮಸ್ಕರೇನ್ಹಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...