ಉಡುಪಿ | ಕ್ರೇನ್ ತೊಟ್ಟಿಲಿನಿಂದ ಉರುಳಿಬಿದ್ದು ಓರ್ವನ ಸಾವು, ಕೆಲಸದವಳು ಗಂಭೀರ

Date:

ಕ್ರೇನ್ ಬಳಸಿಕೊಂಡು, ಅದರ ತೊಟ್ಟಿಲಿನಲ್ಲಿ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸಲು ಹೋಗಿದ್ದ ಇರ್ವರು‌ ತೊಟ್ಟಿಲು ವಾಲಿಕೊಂಡಿದರಿಂದ ಇರ್ವರು ನೆಲಕ್ಕುರುಳಿ ಬಿದ್ದಿರುವ‌ ದುರ್ಘಟನೆ ಕೋರ್ಟ್ ಹಿಂಬಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಛೇರಿ ಸನಿಹ‌ ಶನಿವಾರ ನಡೆದಿದೆ.

ಘಟನೆ ತಿಳಿದು ಧಾವಿಸಿ ಬಂದು ಗಂಭೀರ ಸ್ಥಿತಿಯಲ್ಲಿದ್ದ ಇರ್ವರ ಗಾಯಾಳುಗಳನ್ನು ಒಮ್ಮೆಗೆ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಅದಾಗಲೇ ಪರೀಕ್ಷಿಸಿದ ವೈದ್ಯರಿಂದ ಪ್ರಾನ್ಸಿಸ್ ಪಟೊರ್ಡೋ (65 ವ) ಮೃತಪಟ್ಟಿರುವುದು ದೃಢಪಟ್ಟಿತು. ಮೃತರು ಮನೆ ಮಾಲಕರ ಸಹೋದರ ಎಂದು ತಿಳಿದುಬಂದಿದೆ. ಇವರೊಂದಿಗೆ ಕ್ರೇನ್‌ನಲ್ಲಿ ತೆರಳಿದ್ದ ಮನೆ ಕೆಲಸದಾಕೆ ಶಾರದ (35ವ) ಇವರಿಗೆ ಗಂಭೀರ ಗಾಯಗಳಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮಲ್ಪೆ ಕಲ್ಮಾಡಿಯವರೆಂದು ಹೇಳಲಾಗಿದೆ. ಬಿದ್ದು ಇರ್ವರು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ಗಾಯಾಳುಗಳ ರಕ್ಷಣೆಗೆ ಮುಂದೆ ಬಾರದೆ, ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿರುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.‌ ದುರಂತದ ಸ್ವಷ್ಟ ವಿವರಗಳು ಇನ್ನಷ್ಟೇ ತಿಳಿದುಬರಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...