ಉಡುಪಿ | ಗಾಂಧಿಯ ಚಿಂತನೆಗಳನ್ನು ಇಂದಿನ ಕಾಲಕ್ಕೆ ಅನ್ವಯಿಸಿಕೊಳ್ಳಬೇಕಾಗಿದೆ – ಡಾ. ಸುಧಾಕರ ದೇವಾಡಿಗ

Date:

ಗಾಂಧಿಯ ಚಿಂತನೆಗಳನ್ನು ಇಂದಿನ ಕಾಲಕ್ಕೆ ಅನ್ವಯಿಸಿಕೊಳ್ಳಬೇಕು ಅವರನ್ನು ಕಸಿಗೊಳಿಸುವ ಪ್ರಯತ್ನವನ್ನು ಮಾಡಬೇಕು. ಹರಿಯುವ ನದಿಯಂತೆ ಗಾಂಧಿಯ ವ್ಯಕ್ತಿತ್ವ, ಬದುಕನ್ನು ಇಡಿಯಾಗಿ ನೋಡಿದರೆ ಮಾತ್ರ ಗಾಂಧಿ ಸರಿಯಾಗಿ ಅರ್ಥವಾಗಲು ಸಾಧ್ಯ ಎಂದು ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ.ಸುಧಾಕರ ದೇವಾಡಿಗ ಹೇಳಿದ್ದಾರೆ.

ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ-ಸಾಹಿತ್ಯ ವಿಚಾರ ವೇದಿಕೆ ಉಡುಪಿ ಮತ್ತು ಕಾರ್ಕಳದ ಶ್ರೀಭುವನೇಂದ್ರ ಕಾಲೇಜಿನ ಸಾಹಿತ್ಯ ಸಂಘದ ಸಹಯೋಗದೊಂದಿಗೆ ಶನಿವಾರ ಕಾಲೇಜಿನ ಸಭಾಂಗಣದಲ್ಲಿ `ಕನ್ನಡ ಕಂಡ ಮನಸು- ಗಾಂಧಿ’ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ರೈತ ಸಮುದಾಯದ ಪರವಾದ ಹೋರಾಟದಿಂದ ಪ್ರಾರಂಭಗೊಂಡು, ಕರ ನಿರಾಕರಣೆಯ ಚಳುವಳಿ ಮುಂತಾದ ಸಂದರ್ಭಗಳಲ್ಲಿ ಯಾವುದನ್ನೂ ಲೆಕ್ಕಿಸದೆ ಅವರು ಸಾಗಿದರು. ಹೀಗೆ ಗಾಂಧಿ ಇಂತಹ ಚಳುವಳಿಗಳ ನೇತಾರನಾಗಿ ಮೊದಲ್ಗೊಂಡು ಅನೇಕಾನೇಕ ಬದಲಾವಣೆಗಳಿಗೆ ಕಾರಣರಾಗಿ ಅವರ ಅಸ್ತಿತ್ವ ಇನ್ನೂ ಅಚ್ಛಳಿಯದೆ ನಿಂತಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 18 at 9.57.53 AM

ಅಹಿಂಸೆ ಮತ್ತು ಸತ್ಯಾಗ್ರಹವನ್ನು ಒಂದು ವೃತದಂತೆ ಪಾಲಿಸಿದವರು ಗಾಂಧಿ. ಹಿಂಸೆ ಮತ್ತು ಯುದ್ಧಗಳಿಂದ ಮುಕ್ತತೆಯನ್ನು ಪಡೆಯಬೇಕೆಂಬ ಇಚ್ಛೆಗಾಗಿ ಹಂಬಲಿಸಿದವರು. ಅವೆರಡೂ ಇವತ್ತಿಗೂ ಪತ್ರ ಬಲ ಅಸ್ತ್ರಗಳಾಗಿ ನಮ್ಮ ಮುಂದೆ ನಿಂತಿದೆ. ಇದೇ ದಾರಿಯಲ್ಲಿ ನಾವೂ ನಡೆಯಬೇಕು. ಇಲ್ಲದೆ ಹೋದರೆ ನಾವು ಮನುಷ್ಯರಾಗಿ ಉಳಿಯುವುದಿಲ್ಲ. ಮನುಷ್ಯನನ್ನು ಯಂತ್ರಗಳು ದಾಸ್ಯಕ್ಕೆ ಗುರಿಪಡಿಸುತ್ತವೆ. ಅವನ ಜೀವ ಚೈತನ್ಯವನ್ನು ಅವು ಕಸಿಯುವಂತೆ ಮಾಡುತ್ತವೆ ಅನ್ನುವುದಕ್ಕೆ ಗಾಂಧಿ ಯಂತ್ರ ವಿರೋಧಿ ಯಾಗಿದ್ದರೇ ಹೊರತು ಬೇರೇನೂ ಅಲ್ಲ. ಇವತ್ತಿನ ಕಾಲಮಾನಕ್ಕೆ ಅವರ ಚಂತನೆಗಳು ನಿಜಕ್ಕೂ ದಾರ್ಶನಿಕ ಸತ್ಯವಾಗಿದೆ ಎಂದರು.

ಅಕಾಡೆಮಿ ಸದಸ್ಯ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿ, ಗಾಂಧಿಯ ಮನುಷತ್ವವನ್ನು ಸಮಾಜ ಇಂದಿಗೂ ಇಟ್ಟುಕೊಳ್ಳ ಬೇಕಾದ ಅಗತ್ಯವಿದೆ. ಗಾಂಧಿಯಂತಹ ವ್ಯಕ್ತಿತ್ವದ ಮನುಷ್ಯ ಯಾವ ದೇಶದಲ್ಲಿಯೂ ಇರಲಾದರು. ಮಹಾತ್ಮ ಗಾಂಧಿಗೆ ಸತ್ಯವೆಂಬುದು ಸಿಕ್ಕಿರುವ ಸಂಗತಿಯಾಗಿರಲಿಲ್ಲ. ಅದು ಹುಡುಕುವ ಬಗೆಯಾಗಿತ್ತು. ಅವರೊಬ್ಬ ಮಾಂತ್ರಿಕ ಶಕ್ತಿಯ ಸಂಕೇತ. ತಾಯ್ತನದ ಪ್ರತಿನಿಧಿ. ಅವರ ಸ್ವದೇಶಿ ಕಲ್ಪನೆಯನ್ನು ನಾವು ಅರಿತುಕೊಳ್ಳಬೇಕು. ಅನ್ಯರನ್ನು ಅವಲಂಬಿಸದ ಸ್ವಾತಂತ್ರö್ಯವನ್ನು ಚರಕದಿಂದ ಕಂಡುಕೊಡವರು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ ಎ.ಕೋಟ್ಯಾನ್ ಮಾತನಾಡಿ, ಕಾಲೋಚಿತ ಮತ್ತು ಕಾಲಾತೀತ ಚಿಂತನೆಗಳು ಗಾಂಧಿಯವರದ್ದು. ಈ ಕಾಲದವರೆಗೂ ಕೂಡಾ ಗಾಂಧೀಜಿಯವರ ಎಲ್ಲ ಆದರ್ಶಗಳು ಜೀವಂತವಾಗಿವೆ ಎನ್ನುವುದನ್ನು ನಾವು ಒಪ್ಪಿಕೊಳ್ಳಬೇಕಿದೆ. ದಾರ್ಶನಿಕರ ಬದುಕಿನ ಕಾಲ ಮತ್ತು ಅವರ ಮರಣದ ಬಳಿಕ ಅವರ ಚಿಂತನೆಗಳು ದ್ವಿಗುಣಗೊಳ್ಳುತ್ತದೆ ಎನ್ನುವುದಕ್ಕೆ ಅವರು ಸ್ಪಷ್ಟ ಉದಾಹರಣೆಯಾಗಿದೆ ಎಂದರು.

ಗಾಂಧಿ ಸತ್ಯ ಮತ್ತು ಅಹಿಂಸೆಯನ್ನು ಬಿಡದೆ ಅದನ್ನೇ ಪಾಲಿಸಿದವರು. ಕೇವಲ ವಸ್ತ್ರ ಸಂಸ್ಕೃತಿಯಿಂದ ಮಾತ್ರವೇ ಗಾಂಧಿ ತತ್ವವನ್ನು ಅರಿಯ ಬೇಕಾಗಿಲ್ಲ. ಒಳ್ಳೆಯ ವಸ್ತ್ರಸಂಹಿತೆಯನ್ನು ಹೊಂದಿದವರೂ ಗಾಂಧಿಯ ಚಿಂತನೆಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿರುತ್ತಾರೆ. ಮೌಢ್ಯಗಳು ಮತ್ತು ಚಿಂತನಾ ಕ್ರಮಗಳು ನಮ್ಮಲ್ಲಿ ಬದಲಾಗದೆ ಇದ್ದರೆ ಸಮಾಜ ಮುಂದು ವರಿಯುಲು ಅಸಾಧ್ಯ. ಎಲ್ಲ ದಾರ್ಶನಿಕರ ದಾರಿಗಳು, ಆದ್ಯತೆಗಳು ಬೇರೆ ಇದ್ದರೂ ಅವರೆಲ್ಲರ ಆಶಯ ಮತ್ತು ಗುರಿ ಸಮಾಜಮುಖಿಯಾಗಿತ್ತು ಅನ್ನುವುದನ್ನು ನಾವು ನೆನಪಿಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದರು.

ಶ್ರೀಭುವನೇಂದ್ರ ರೆಸಿಡೆನ್ಷಿಯಲ್ ಸ್ಕೂಲ್‌ನ ಸಂಚಾಲಕ ವೆಂಕಟೇಶ ಪ್ರಭು, ಗಾಂಧಿಯ ಅಸ್ತಿತ್ವದ ಸಂಕೇತವಾದ ಚರಕವನ್ನು ಸುತ್ತಿ ನೂಲನ್ನು ತೆಗೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಕೋರಿದರು. ವೇದಿಕೆಯಲ್ಲಿ ಭುವನೇಂದ್ರ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯ ಎರ್ಮಾಳ್ ಮೋಹನ ಶೆಣೈ, ಸಾಹಿತ್ಯ ಸಂಘದ ಪ್ರತಿನಿಧಿಗಳಾದ ಹಿತ ಹಾಗೂ ಶ್ರೀನಿಧಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕಿ ಹಾಗೂ ವಿಭಾಗ ಮುಖ್ಯಸ್ಥೆ ಪ್ರೊ. ವನಿತಾ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿ ವಿಖ್ಯಾತ್ ಕುಲಾಲ್ ಗಾಂಧಿ ಪ್ರಿಯ ಮಂತ್ರ ಪಠಿಸಿದರು. ರಕ್ಷಿತಾ ಮತ್ತು ಬಳಗ ಪ್ರಾರ್ಥಿಸಿದರು. ಚಕೋರ ಉಡುಪಿ ಜಿಲ್ಲಾ ಸಂಚಾಲಕ, ಕನ್ನಡ ಉಪನ್ಯಾಸಕ ರಾಮಾಂಜಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಸುಲೋಚನಾ ಪಚ್ಚಿನಡ್ಕ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...