ಉಡುಪಿ | ಮರಾಠಿ ಸಮುದಾಯದ ಕುಟುಂಬಕ್ಕೆ ಜಾತಿನಿಂದನೆ; ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ – ಆರೋಪ

Date:

ಮರಾಠಿ ಸಮುದಾಯದ ಕುಟುಂಬಕ್ಕೆ ಅವಾಚ್ಯವಾಗಿ ಜಾತಿ ನಿಂದನೆಗೈದು ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದಿಂದ ಎಸ್‌ಪಿಗೆ ಮನವಿ ಸಲ್ಲಿಸಿದರು.

“ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ, ಹೊಸೂರು ಗ್ರಾಮದ ಕರ್ಜೆ ಎಂಬಲ್ಲಿ ಮಾರ್ಚ್‌ 6ರಂದು  ಪರಿಶಿಷ್ಟ ಪಂಗಡದ ಮರಾಠಿ ಸಮುದಾಯದ ರಾಘವೇಂದ್ರ ನಾಯ್ಕ ಬಿನ್ ಸೋಮನಾಯ್ಕ ಅವರ ಮನೆಗೆ ಬಂದು ಮೃತ ತಾಯಿಯವರ 12ನೇ ದಿವಸದ ಕಾರ್ಯದಂದು, ಊರಿನ ಒಬ್ಬ ಪುರೋಹಿತರ ಮನೆಯ ಬ್ರಾಹ್ಮಣನಾಗಿ ದುಃಖತಪ್ತ ಕುಟುಂಬವನ್ನು ಸಂತೈಸುವುದನ್ನು ಬಿಟ್ಟು ಪೌರೋಹಿತ್ಯಕ್ಕೆ ತನ್ನನ್ನು ಕರೆಯಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ರಾಮಕೃಷ್ಣ ಅಡಿಗರು ಅವಾಚ್ಯ ಶಬ್ದಗಳಿಂದ ಹಿಯಾಳಿಸಿ ದೌರ್ಜನ್ಯ ಎಸಗಿರುವ ಬಗ್ಗೆ ದೂರು ನೀಡಿದರೂ ಕೂಡ ಈವರೆಗೆ ನ್ಯಾಯ ದೊರೆತಿಲ್ಲ” ಎಂದು ಮರಾಠಿ ಸಮಾಜ ಸೇವಾ ಸಂಘ ಆರೋಪಿಸಿದೆ.

“ಪ್ರಕರಣಕ್ಕೆ ಸಂಬಂಧಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯನ್ವಯ ದೂರು ದಾಖಲಿಸಿದರೂ ಇಂದಿಗೂ ನ್ಯಾಯ ದೊರಕದೇ ಇರುವುದು ಈ ಆಧುನಿಕ ಸಮಾಜದಲ್ಲಿ ಒಂದು ದುರಂತವೇ ಸರಿ. ಮರಾಠಿ ಸಮುದಾಯವು ಸಾತ್ವಿಕ ಹಾಗೂ ಸೌಮ್ಯ ಸ್ವಭಾವದ ಜನರನ್ನೊಳಗೊಂಡ ಸಮುದಾಯವಾದುದರಿಂದ ಇಲ್ಲಿಯ ತನಕ ತಾಳ್ಮೆ ಕಳೆದುಕೊಳ್ಳದೆ ನ್ಯಾಯ ಸಿಗಬಹುದೆಂಬ ನಿರೀಕ್ಷೆಯಲ್ಲಿ ದಿನ ಕಳೆದೆವು. ಮುಂದಿನ ದಿನಗಳಲ್ಲಿ ಜಿಲ್ಲಾ ಸಂಘಟನೆಯು ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮರಾಠಿ ಸಮುದಾಯದವರು ರೊಚ್ಚಿಗೇಳುವ ಮುನ್ನ ಶ್ರೀಘ್ರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯ ದೊರಕಿಸಿಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗರೆ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು; ಬಿಜೆಪಿ ಪ್ರಶ್ನೆ

“ವಿಡಿಯೋ ಕ್ಲಿಪ್ ಸಾಕ್ಷಾಧಾರವಿದ್ದು, ಅದನ್ನು ಆಲಿಸಿದ ಮೇಲೂ ಸಂಬಂಧಿತ ಅಧಿಕಾರಿಗಳು ಕಾರ್ಯೋನ್ಮುಖರಾಗದೇ ಇರುವುದು ನಮಗೆ ಸಂಶಯಕ್ಕೊಳಪಡಿಸಿದೆ. ಇಂತಹ ಘಟನೆ ಇಡೀ ಸಮಾಜಕ್ಕೆ ಕಳಂಕ. ಪರಿಶಿಷ್ಟ ಪಂಗಡದ ನಮ್ಮ ಸಮುದಾಯ ಮಾತ್ರವಲ್ಲದೇ ಇತರ ದುರ್ಬಲರೊಂದಿಗೆ ಯಾವ ರೀತಿ ನಡೆದುಕೊಂಡರೂ ನಡೆಯುತ್ತದೆಂಬ ಸಂದೇಶವು ಅನಾಗರಿಕ, ದುರಂಹಾಕಾರಿಗಳಿಗೆ ಪ್ರಚೋದನೆ ನೀಡಿದಂತಾಗುತ್ತದೆ. ಆದುದರಿಂದ ಶೀಘ್ರವೇ ಆರೋಪಿಯನ್ನು ಬಂಧಿಸಿ ನ್ಯಾಯ ದೊರಕಿಸಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...