ಉಡುಪಿ | ಸಾರಿಗೆ ಸೌಕರ್ಯಕ್ಕಾಗಿ ಹೋರಾಟ, ಬೈಂದೂರು, ಕುಂದಾಪುರ ಭಾಗದ ಸಾರ್ವಜನಿಕರ ಧರಣಿ

Date:

ಬೈಂದೂರು ಕುಂದಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಬಸ್ ಇಲ್ಲದ ಮಾರ್ಗಗಳಲ್ಲಿ ಓಡಿಸಬೇಕು ಎಂದು ಹೋರಾಟ ನಡೆದು ಕೆಲವು ಮಾರ್ಗಗಳಿಗೆ ಪರವಾನಿಗೆ ನೀಡಿದರೂ ಖಾಸಗಿ ಬಸ್ ಮಾಲಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ ಸಾರಿಗೆ ಪ್ರಾಧಿಕಾರ ಈ ಬಗ್ಗೆ ತೆರವುಗೊಳಿಸಲು ಕ್ರಮವಹಿಸಿಲ್ಲ ಎಂದು ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ರಾಜೀವ ಪಡುಕೋಣೆ ಹೇಳಿದರು.

ನ್ಯೂ ಕಂಪ್ರೆನ್ಸಿವ್ ಏರಿಯಾ ಸ್ಕ್ರೀಮ್ 07.03.2019 ರಂತೆ ರಾಜ್ಯ ರಸ್ತೆ ಸಾರಿಗೆಯವರು ರಾಷ್ಟ್ರೀಕೃತ ಯೋಜನೆ ಪರ್ಮಿಟಿಗಾಗಿ ಅರ್ಜಿ ಸಲ್ಲಿಸಿದಾಗ ಸಂಬಂಧಿತ ಪ್ರಾಧಿಕಾರಿಗಳು ಪರವಾನಿಗೆಯನ್ನು ಕಡ್ಡಾಯವಾಗಿ ವಿತರಿಸಬೇಕು ಎಂದು ನ್ಯೂ ಕಂಪ್ರೇಸಿವ್ ಏರಿಯಾ ಸ್ಕ್ರೀಮ್ ನಲ್ಲಿ ದ್ರಡೀಕರಿಸಲಾಗಿದೆ ಆದುದರಿಂದ ಕುಂದಾಪುರ ಬೈಂದೂರು ಗ್ರಾಮೀಣ ಪ್ರದೇಶಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು ಕಳೆದ ಒಂದು ವರ್ಷದಿಂದ ಅಧಿಕೃತವಾಗಿ ಸಾರಿಗೆ ಪ್ರಾಧಿಕಾರ ಸಭೆ ನಡೆಸಿಲ್ಲ ಆದುದರಿಂದ ಸಾರಿಗೆ ಪ್ರಾಧಿಕಾರ ನಮ್ಮ ಸಂಘಟನೆ ಜೊತೆ ಜಂಟಿ ಸಭೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

1007513856

ಧರಣಿಯನ್ನುದ್ದೇಶಿಸಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಕಳೆದ ವರ್ಷದಿಂದ ಗ್ರಾಮೀಣ ಭಾಗಗಳಲ್ಲಿ ಸ್ಥಳೀಯವಾಗಿ ಹೋರಾಟಗಳನ್ನು ನಡೆಸಿದರೂ ಪ್ರಾಧೀಕಾರ ಕಡೆಗಣಿಸಿದೆ.
ಜನಪ್ರತಿನಿಧಿಗಳು, ಅಧಿಕಾರಿಗಳು,ಖಾಸಗಿ ಬಸ್ ಮಾಲಕರು ಒಂದಾಗಿ ಅಪವಿತ್ರ ಮೈತ್ರಿಯಿಂದ ಸರಕಾರಿ ಬಸ್ ಓಡಿಸದೇ ಮಹಿಳೆಯರಿಗೆ,ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆಯಿಂದ ವಂಚಿಸಿದ್ದಾರೆ ಎಂದು ಹೇಳಿದರು. ಖಾಸಗೀ ಬಸ್ ಗಳಲ್ಲಿ ವಿದ್ಯಾರ್ಥಿನಿಯರನ್ನು ಕೊನೆಯಲ್ಲಿ ಬಸ್ ಹತ್ತುವಂತೆ, ಸೀಟುಗಳನ್ನು ಕೊಡದೇ ಸತಾಯಿಸಿಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರಣಿಯನ್ನುದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ಕಾರ್ಯದರ್ಶಿ ಎಚ್ ನರಸಿಂಹ, ಕ್ರಷಿಕೂಲಿಕಾರ ಸಂಘಟನೆ ನಾಗರತ್ನ ನಾಡ, ಜನವಾದಿ ಮಹಿಳಾ ಸಂಘಟನೆಯ ಶೀಲಾವತಿ, ಡಿವೈಎಫ್ಐ ಕಾರ್ಯದರ್ಶಿ ನಿಸರ್ಗ, ರಾಜೇಶ್ ಪಡುಕೋಣೆ,ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಸಂಜೀವ ಬಳ್ಕೂರು, ಬಳ್ಕೂರು ಶೋಭ, ನಾಗರತ್ನ ಆರ್, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಉಮೇಶ್ ಕುಂದರ್, ನಳಿನಿ ಮೊದಲಾದವರಿದ್ದರು.

1007513859

ಸ್ಥಳಕ್ಕೆ ಮಾನ್ಯ ಅಪಾರ ಜಿಲ್ಲಾಧಿಕಾರಿ, ಸಾರಿಗೆ ಇಲಾಖೆಯ (RTO) ಅಧಿಕಾರಿಗಳು, KSRTC ಪ್ರಾಧಿಕಾರದ ಅಧಿಕಾರಿಗಳು, ಮನವಿ ಸ್ವೀಕರಿಸಿ ಮಾತಾನಾಡಿ ಅಕ್ಟೋಬರ್ 15 ರಂದು ಸಾರಿಗೆ ಪ್ರಾಧಿಕಾರದ ಜಂಟಿ ಸಭೆಯನ್ನು ನಿಗದಿ ಮಾಡಿ ಹೋರಾಟಗಾರರ ಮುಖಂಡರಿಗೆ ಅಹ್ವಾನ ನೀಡಿದರು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹಾಗೂ ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷ ರಾದ ಅಶೋಕ್ ಕೊಡವೂರು ಮತ್ತು ಉಪಾಧ್ಯಕ್ಷ ರಾದ ಪ್ರಶಾಂತ್ ಜತ್ತನ್ನ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಮಾತನಾಡಿದರು.

ಬೈಂದೂರು, ಪಡುಕೋಣೆ, ಆಲೂರು, ಗುಲ್ವಾಡಿ, ಮೊವಾಡಿ, ಹಕ್ಲಾಡಿ, ಕುಂದಬಾರಂದಾಡಿ ಗ್ರಾಮದ ಜನರು, ವಿದ್ಯಾರ್ಥಿಗಳು, ಕಟ್ಟಡ ಕಾರ್ಮಿಕರು, ಹಂಚು ಕಾರ್ಮಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...