ಉಡುಪಿ | ಅಂಗನವಾಡಿ ನೌಕರರಿಗೆ ಸಾಮಾಜಿಕ ಸಮೀಕ್ಷೆಗೆ ರಿಯಾಯಿತಿ ನೀಡಲು ಆಗ್ರಹಿಸಿ ಧರಣಿ

Date:

ಸಾಮಾಜಿಕ ಸಮೀಕ್ಷೆ ಮಾಡದ ಅನಾರೋಗ್ಯ ಪೀಡಿತ ಮಹಿಳೆಯರಿಗೆ ಸಮೀಕ್ಷೆಯಿಂದ ರಿಯಾಯಿತಿ ನೀಡಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

ಧರಣಿಯನ್ನುದ್ದೇಶಿಸಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲ ನಾಡ ಮಾತನಾಡಿ, ಕೆಲವು ಅಂಗನವಾಡಿ ನೌಕರರು ಕೆಲವು ಸಮಸ್ಯೆಗಳಿಗಾಗಿ ಸಮೀಕ್ಷೆಯಿಂದ ರಿಯಾಯಿತಿ ಕೇಳಿದರೂ ಜನಪ್ರತಿನಿಧಿ ಕಾಯ್ದೆಯಡಿ ವಜಾ ಮಾಡಲಾಗುವುದು ಎಂದು ಅಧಿಕಾರಿಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

ಚುನಾವಣಾ ಆಯೋಗದ ಸುತ್ತೋಲೆಯಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಸಾಮಾಜಿಕ ಸಮೀಕ್ಷೆಗೆ ಸಿ ದರ್ಜೆ ನೌಕರರನ್ನು ನೇಮಿಸಿಕೊಳ್ಳಬೇಕು ಎಂದಿದ್ದರೂ ಸುತ್ತೋಲೆಯನ್ನು ಕೆಳ ಅಧಿಕಾರಿಗಳು ಕಡೆಗಣಿಸಿ ಅಧಿಕಾರಿಗಳು ನೌಕರರನ್ನು ಜೈಲಿಗೆ ಕಳುಹಿಸುವ ಬೆದರಿಕೆ ಮಹಿಳೆಯರಿಗೆ ಮಾನಸಿಕ ಹಿಂಸೆಯಾಗಿದೆ ಅಲ್ಲದೇ ಸಮೀಕ್ಷೆಯನ್ನು ಸ್ಥಳೀಯವಾಗಿ ನೀಡದೇ ಬೇರೆ ಬೇರೆ ದೂರದ ಗ್ರಾಮಗಳಿಗೆ ನಿಯೋಜಿಸಿರುವುದು ಅಂಗನವಾಡಿ ನೌಕರರಿಗೆ ಸಮಸ್ಯೆಯಾಗಿದೆ. ಈ ಕೆಲಸಗಳ ಜೊತೆ ಜೊತೆಗೆ ಎಫ್ ಎಸ್ ಆರ್ ಬಿಎಲ್ಓ ಕೆಲಸಗಳನ್ನು ಮಾಡಬೇಕು ಎಂದು ನೋಟಿಸ್ ನೀಡುತ್ತಿರುವುದು ನೌಕರರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೂಡ ಈ ಮಹಿಳೆಯರನ್ನು ಮಾನವೀಯತೆ ಇಲ್ಲದೆ ಗುಲಾಮರಂತೆ ದುಡಿಸುತ್ತಿದೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 30 at 12.27.37 AM 1

ಧರಣಿಗೆ ಅಪರ ಜಿಲ್ಲಾಧಿಕಾರಿ ಭೇಟಿ
ಧರಣಿ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿ ಸಿ ದರ್ಜೆಯ ನೌಕರರು ಜಿಲ್ಲೆಯಲ್ಲಿ ಕಡಿಮೆ ಇರುವುದರಿಂದ ಅಂಗನವಾಡಿ ನೌಕರರು ಸಮೀಕ್ಷಗೆ ಕೈಜೋಡಿಸಬೇಕು ಇಲ್ಲವಾದಲ್ಲಿ ನೌಕರರ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಧರಣಿಯಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಭಾರತಿ, ಯಶೋಧ ಕೆ, ಆಶಾಲತಾ, ಶಾಂತ, ಪ್ರೇಮ, ಪ್ರಮೀಳಾ ಉಡುಪಿ, ಜಯಲಕ್ಷ್ಮಿ, ಸರೋಜ, ಸರೋಜಿನಿ ಬ್ರಹ್ಮಾವರ ಇದ್ದರು. ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಅಧ್ಯಕ್ಷ ಶಶಿಧರ ಗೊಲ್ಲ, ಜಿಲ್ಲಾ ಕೋಶಾಧಿಕಾರಿ ಕವಿರಾಜ್ ಎಸ್ ಕಾಂಚನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...