ಉಡುಪಿ | ಸಿಎನ್‌ಜಿ ಇಂಧನ ಕೇಂದ್ರಗಳ ಕೊರತೆ; ಶಾಶ್ವತ ಪರಿಹಾರಕ್ಕೆ ಕಾಯುತ್ತಿದ್ದಾರೆ ಆಟೋ ಚಾಲಕರು

Date:

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಇಂಧನ ಸಮಸ್ಯೆ ಇನ್ನೂ ಬಗೆಹರಿಯದ ಸಮಸ್ಯೆಯಾಗಿಯೇ ಉಳಿದಿದೆ. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಈ ಬಗ್ಗೆ ಹಲವಾರು ವರದಿಗಳು ಪ್ರಕಟವಾಗಿದ್ದರೂ ಸಿಎನ್‌ಜಿ ಇಂಧನ ಸಮಸ್ಯೆ ಬಗೆಹರಿಸುವಂತೆ ಕಾರ್ಮಿಕ ಸಂಘಟನೆಗಳು ಮನವಿ ಮಾಡಿಕೊಂಡಿದ್ದರೂ ಸಮಸ್ಯೆ ಕೊನೆಯೇ ಇಲ್ಲದಂತಾಗಿದೆ.

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಇಂಧನ ಆಧಾರಿತ ವಾಹನಗಳ ಸಂಖ್ಯೆಗೆ ಅನುಗುಣವಾಗಿ ಸಿಎನ್‌ಜಿ ಬಂಕ್‌ಗಳು ಇಲ್ಲದ ಪರಿಣಾಮ ತೀವ್ರ ಇಂಧನ ಕೊರತೆ ಎದುರಾಗಿದೆ. ಪ್ರತಿನಿತ್ಯ ಸಾವಿರಾರು ಸಿಎನ್‌ಜಿ ಆಟೊ ರಿಕ್ಷಾ, ಕಾರು, ಸರಕು ಸಾಗಣೆ ವಾಹನಗಳು ಇಂಧನ ತುಂಬಿಸಿಕೊಳ್ಳಲು ಸಿಎನ್‌ಜಿ ಕೇಂದ್ರಗಳ ಮುಂದೆ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ.

ಅಂದು ದುಡಿದು ಅಂದು ಜೀವನ ನಡೆಸುವ ಅನಿವಾರ್ಯತೆಗೆ ಸಿಲುಕಿರುವ ಆಟೋ ಚಾಲಕರ ಪಾಡು ಯಾರಿಗೂ ಬೇಡ. ದಿನದ ಐದಾರು ಗಂಟೆ ಬಾಡಿಗೆ ಹೊಡೆದರೆ ಕನಿಷ್ಠ ಮೂರರಿಂದ ನಾಲ್ಕು ಗಂಟೆ ಇಂಧನ ಭರ್ತಿ ಮಾಡಿಕೊಳ್ಳಲು ಸಿಎನ್‌ಜಿ ಕೇಂದ್ರದ ಮುಂದೆ ಕಾಯಬೇಕಾಗಿದೆ. ಹಗಲಿನ ಹೊತ್ತು ಬಾಡಿಗೆ ನಷ್ಟವಾಗುವ ಆತಂಕದಿಂದ ಬೆಳಗಿನ ಜಾವ, ರಾತ್ರಿ ಹೊತ್ತು ತಾಸುಗಟ್ಟಲೆ ಕಾಯ್ದು ಇಂಧನ ಭರ್ತಿ ಮಾಡಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
auto3 1

ಜಿಲ್ಲೆಯಲ್ಲಿ ಮೂರೂವರೆ ಸಾವಿರಕ್ಕೂ ಹೆಚ್ಚು ಸಿಎನ್‌ಜಿ ಇಂಧನ ವಾಹನಗಳಿದ್ದರೂ ಸಿಎನ್‌ಜಿ ಬಂಕ್‌ಗಳು ಇರುವುದು ಕೇವಲ 8 ಉಡುಪಿಯ ಸೀಮಾ ಪ್ಯೂಯಲ್ಸ್ ಅಂಡ್ ಸರ್ವೀಸಸ್, ಮಲ್ಪೆಯ ಭಾವನಾ ಎಂಟರ್‌ ಪ್ರೈಸಸ್, ಬ್ರಹ್ಮಾವರ ತಾಲೂಕಿನ ಶ್ರೀಲಕ್ಷ್ಮೀ ಎಂಟರ್‌ ಪ್ರೈಸಸ್‌, ಹೆಜಮಾಡಿ ಟೋಲ್ ಗೇಟ್ ಬಳಿಯ ಮಾತೃಶ್ರೀ ಹೈವೇ ಸ್ಟಾರ್, ಕಾರ್ಕಳದ ಕೆದಿಂಜೆಯ ಶ್ರೀದುರ್ಗಾ ಪ್ಯೂಯಲ್ಸ್, ಕಾರ್ಕಳ ತಾಲೂಕಿನ ಸಾಣೂರಿನಲ್ಲಿರುವ ಪಡು ತಿರುಪತಿ ವೆಂಕಟರಮಣ, ಕುಂದಾಪುರ ತಾಲೂಕು ಕೋಟೇಶ್ವರದಲ್ಲಿರುವ ಕೆವಿಎಂ ಕಾಮತ್, ಪಡುಬಿದ್ರಿಯ ಭವ್ಯ ಪ್ಯೂಯೆಲ್ಸ್ ಜಿಲ್ಲೆಯಲ್ಲಿರುವ ಸಿಎನ್‌ಜಿ ಕೇಂದ್ರಗಳು.

ಬೆರಳೆಣಿಕೆಯ ಸಿಎನ್‌ಜಿ ಕೇಂದ್ರಗಳಲ್ಲಿ ಬೇಡಿಕೆಯಷ್ಟು ಇಂಧನ ಸಿಗುತ್ತಿಲ್ಲ. ಪ್ರತಿದಿನ ಜಿಲ್ಲೆಯ ಬಹುತೇಕ ಸಿಎನ್‌ಜಿ ಕೇಂದ್ರಗಳ ಮುಂದೆ ರಿಕ್ಷಾ, ಕಾರು, ಸರಕು ಸಾಗಣೆ ವಾಹನಗಳ ಉದ್ದನೆಯ ಸಾಲು ಸಾಮಾನ್ಯವಾಗಿ ಕಾಣಸಿಗುತ್ತದೆ. ತಾಸುಗಟ್ಟಲೆ ಕಾದರೂ ಇಂಧನ ಸಿಗುತ್ತದೆ ಎಂಬ ಯಾವ ಖಾತ್ರಿಯೂ ಇಲ್ಲದೆ ವಾಹನ ಸವಾರರು ಹೈರಾಣಾಗಿದ್ದಾರೆ.

auto1
ಬಾಬಣ್ಣ

ಈ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿದ ಆಟೋ ಚಾಲಕ ಬಾಬಣ್ಣ, “ನಮ್ಮ ಗೋಳು ಯಾರು ಸಹ ಕೇಳುವವರಿಲ್ಲ ಎರಡು ತಿಂಗಳ ಹಿಂದೆ ಸಿಎನ್ ಜಿ ಗ್ಯಾಸ್ ಗೆ ಕನ್ವರ್ಟ್ ಮಾಡಿಸಿದ್ದೇನೆ. ಆದರೆ ಈಗ ಸರಿಯಾಗಿ ಇಂಧನವೇ ಸಿಗುತ್ತಿಲ್ಲ ಈಗ ಸಿಎನ್ ಜಿ ಇಂದ ಬದಲಾಯಿಸಿ ಮೊದಲು ಇದ್ದ ಎಲ್ ಪಿಜಿ ಗೆ ಪುನಃ ಮಾಡಿಸಬೇಕು ಅಂದುಕೊಂಡಿದ್ದೇನೆ. ಇಲ್ಲದಿದ್ದರೆ ಬ್ಯಾಟರಿ ಆಟೋ ರಿಕ್ಷಾ ಆದ್ರೂ ಮಾಡಬೇಕೆಂದಿದ್ದೇನೆ. ಆಗ ಈ ರೀತಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ತಪ್ಪುತ್ತದೆ ಎಂದು ಹೇಳಿದರು.

auto 2
ಆಟೋ ಜಾಲಕ ಶ್ರೀನಿವಾಸ್

ಮತ್ತೊಬ್ಬ ಸಿಎನ್ ಜಿ ಆಟೋ ಜಾಲಕ ಶ್ರೀನಿವಾಸ್ ಮಾತನಾಡಿ, “ಸಿಎನ್ ಜಿ ಆಟೋ ತೆಗೆದುಕೊಂಡು ನಾವು ಮಂಗನಂತೆ ಆಗಿ ಬಿಟ್ಟಿದ್ದೇವೆ. ಕಂಪನಿಯವರು ಸಹ ಸರಿಯಾದ ಮಾಹಿತಿ ನೀಡಿರಲಿಲ್ಲ. ಈಗ ಇಂಧನಕ್ಕಾಗಿ ಕಷ್ಟ ಅನುಭವಿಸುತ್ತಾ ಇದ್ದೇವೆ. ಬಾಡಿಗೆ ಮಾಡಲು ಆಟೋ ನಿಲ್ದಾಣದಲ್ಲಿ ನಿಲ್ಲಿಸುವುದಕ್ಕಿಂತ ಹೆಚ್ಚು ಸಮಯ ಸಿಎನ್‌ಜಿ ಕೇಂದ್ರಗಳ ಮುಂದೆಯೇ ಕಳೆಯುತ್ತಿದ್ದೇವೆ. ಉಡುಪಿಯಲ್ಲಿ ಇಂಧನ ಇಲ್ಲದಿದ್ದರೆ ಬ್ರಹ್ಮಾವರಕ್ಕೆ, ಬ್ರಹ್ಮಾವರದಲ್ಲಿ ಇಲ್ಲದಿದ್ದರೆ ಉಡುಪಿಗೆ ಹೀಗೆಯೇ ಓಡಾಗುವುದೆ ದಿನಿತ್ಯದ ಕೆಲಸ ಆಗಿ ಬಿಟ್ಟಿದೆ ಇನ್ನೂ ಬಾಡಿಗೆ ಎಲ್ಲಿಂದ ಮಾಡುವುದು? ಪ್ರತಿದಿನ ಜನಪ್ರತಿನಿಧಿಗಳು ಇದೇ ರಸ್ತೆಯಲ್ಲಿ ಓಡಾಡುತ್ತಿರುತ್ತಾರೆ. ನೂರಾರು ಆಟೋ ರಿಕ್ಷಾಗಳು ಸಾರತಿ ಸಾಲಿನಲ್ಲಿ ನಿಂತಿರುತ್ತವೆ. ಯಾಕೆ ಎಂದು ಒಬ್ಬರೂ ಸಹ ಬಂದು ಕೇಳುವುದಿಲ್ಲ” ಎಂದು ತಮ್ಮ ನೋವು ಹೇಳಿಕೊಂಡರು.

auto4

ಇದನ್ನು ಓದಿದ್ದೀರಾ? ದಾವಣಗೆರೆ | ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: ಮುಖ್ಯ ಶಿಕ್ಷಕಿ ಸೇರಿ ಇಬ್ಬರ ಅಮಾನತು

ಒಟ್ಟಿನಲ್ಲಿ ಸಿಎನ್‌ಜಿ ಆಟೋ ರಿಕ್ಷಾ ವಾಹನಗಳು ಹೆಚ್ಚಾದಂತೆಲ್ಲ ಇಂಧನ ಪಂಪ್‌ಗಳ ಸಂಖ್ಯೆ ಸಹ ಹೆಚ್ಚಾಗಬೇಕು. ಅವಶ್ಯಕತೆಗೆ ತಕ್ಕಂತೆ ಪೂರೈಕೆ ಇದ್ದರೆ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಉಡುಪಿ ನಗರದಲ್ಲಿ ಇನ್ನೂ ಎರಡು ಸಿಎನ್‌ಜಿ‌ ಇಂಧನ ಕೇಂದ್ರಗಳು ಪ್ರಾರಂಭವಾದರೆ ಮಾತ್ರ ಇದಕ್ಕೆ ಪರಿಹಾರ ಸಾಧ್ಯ ಎನ್ನುತ್ತಾರೆ ಆಟೋ ಚಾಲಕ-ಮಾಲಕರ ಸಂಘದ ಮುಖಂಡರು.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...