ಉಡುಪಿ | ಸೌದೆ ಒಲೆ ಉರಿಸಿ ಚಾ ಕುಡಿದ ಕಾಂಗ್ರೆಸ್ ಕಾರ್ಯಕರ್ತರು

Date:

ಪೆಟ್ರೋಲ್, ಡಿಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಇಂದು ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಅಜ್ಜರಕಾಡು ಹುತಾತ್ಮ ವೇದಿಕೆ ಬಳಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಕಾರರು ಸ್ಥಳದಲ್ಲೇ ಸೌದೆ ಒಲೆ ಮೂಲಕ ಚಹಾ ಮಾಡಿ ಕುಡಿದು ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ಹೊರಹಾಕಿದರು.

1004977078

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಂ ಎ ಗಫೂರ್, ಬಿಜೆಪಿಯರ ಜನಾಕ್ರೋಶ ಯಾತ್ರೆ ಕೇಂದ್ರ ಸರ್ಕಾರದ ವಿರುದ್ದವೋ ರಾಜ್ಯ ಸರ್ಕಾರದ ವಿರುದ್ಧವೂ, ದೇಶಗಳಲ್ಲಿನ ಅರ್ಥಿಕ ವ್ಯವಸ್ಥೆ ಯಾವ ಮಟ್ಟದಲ್ಲಿ ಹದಗೆಟ್ಟಿದೆ ಎಂದು ಎಲ್ಲರಿಗೂ ತಿಳಿದಿದೆ. ಬಡವರು ಇನ್ನಷ್ಟು ಬಡವರಾಗಿಯೇ ಉಳಿದಿದ್ದಾರೆ, ಬಡವರ ಬಗ್ಗೆ ಸ್ವಲ್ಪ ಕಾಳಜಿ ಇಲ್ಲದ ಬಿಜೆಪಿ ಸರ್ಕಾರ ಬಡವರನ್ನು ತುಳಿಯುವ ಕೆಲಸ ಮಾಡುತ್ತಿದೆ. ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವುದು ಬಿಡಿ ಇರುವ ಉದ್ಯೋಗವನ್ನೇ ಖಾಸಗಿಯವರಿಗೆ ನೀಡುತ್ತದೆ ಎಂದು ಹೇಳಿದರು. ವಾಹನ ಚಾಲಕರು, ರಿಕ್ಷಾ ಚಾಲಕರು ರಸ್ತೆಯ ಇಳಿಯುವ ವಾತಾವರಣ ನಿರ್ಮಾಣವಾಗಿದೆ ಬೆಲೆ ಏರಿಕೆಯಿಂದ ಒಲೆ ಉರಿಸುವ ಪರಿಸ್ಥಿತಿ ತಂದು ನಿಲ್ಲಿಸಿದ್ದಾರೆ ಎಂದು ಹೇಳಿದರು.

1004977079

ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಮೈಕ್ರೋ ಇಂಡಸ್ಟ್ರಿಯನ್ಬು ತಳಮಟಕ್ಕೆ ತಲುಪಿಸುವಲ್ಲಿ ಬಿಜೆಪಿ ಸರ್ಕಾರದ ಪಾಲು ಹೆಚ್ಚು ಇದ್ದು, 12 ಕೋಟಿ ಜನರಿಗೆ ಉದ್ಯೋಗ ನೀಡುತ್ತೇವೆ ಎಂದು ನಿರುದ್ಯೋಗವನ್ನೇ ಹೆಚ್ಚಿಸಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರ ಕಷ್ಟವನ್ನು ಅರಿತು ಐದು ಯೋಜನೆಯನ್ನು ತಂದು ಅವರ ಕಷ್ಟಕ್ಕೆ ಸ್ಪಂದಿಸಿದರೆ ರಾಜ್ಯ ಕಾಂಗ್ರೆಸ್ ಸರ್ಕಾರವನ್ನೇ ಟೀಕಿಸುತ್ತಿದ್ದಾರೆ. 62 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ರೈತರ ಬಡವರ ಕಾಳಜಿಯಿದೆ ಹೊರತು ಉದ್ಯಮಿಗಳ ಸಾಲ ಮನ್ನ ಮಾಡಿ, ರೈತರಿಗೆ, ಮೀನುಗಾರರಿಗೆ ಮೋಸ ಮಾಡಿದ ಬಿಜೆಪಿ ಸರ್ಕಾರಕ್ಕೆ ಸ್ವಲ್ಪವೂ ಕಾಳಜಿಯಿಲ್ಲ ಎಂದು ಹೇಳಿದರು.

1004976862

ನಗರ ಸಭಾ ಸದಸ್ಯ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಅಂಜುಮ್, ಗಣೇಶ್ ನರ್ಗಿ, ಹರೀಶ್ ಕಿಣಿ, ಅಬ್ದುಲ್ ಅಝೀಜ್ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...