ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಮನರೇಗಾ) ಯನ್ನು ಪುನಃ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಬನ್ನಂಜೆ ವಾರ್ಡ್ನ ಕಾಂಗ್ರೆಸ್ ಕಾರ್ಯಕರ್ತರು ಇಂದು ಉಡುಪಿ ತಾಲೂಕು ಕಚೇರಿ ಪಕ್ಕದಲ್ಲಿ ಧರಣಿ ಮುಷ್ಕರ ನಡೆಸಿದರು.
ಬನ್ನಂಜೆ ಕಾಂಗ್ರೆಸ್ ಮುಖಂಡ ಸುರೇಶ್ ಶೆಟ್ಟಿ ಬನ್ನಂಜೆ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ಮನರೇಗಾ ಯೋಜನೆಯ ಮೂಲ ಸ್ವರೂಪವನ್ನು ದುರ್ಬಲಗೊಳಿಸಿ ಗ್ರಾಮೀಣ ಜನರ ಉದ್ಯೋಗ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ಶ್ರೀ ಪ್ರಸಾದ್ ರಾಜ್ ಕಾಂಚನ್, ಕೆಪಿಸಿಸಿ ಸದಸ್ಯ ಶ್ರೀ ದಿನೇಶ್ ಪುತ್ರನ್, ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ದಿನಕರ್ ಹೇರೂರು ಮಾತನಾಡಿ, ಮನರೇಗಾ ಯೋಜನೆ ಗ್ರಾಮೀಣ ಬಡವರ ಜೀವನಾಡಿಯಾಗಿದ್ದು, ತಕ್ಷಣವೇ ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀ ಶೇಖರ್ ಶೆಟ್ಟಿ, ಶ್ರೀ ಪ್ರಭಾಕರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಡಾ. ಸಂದೀಪ್ ಸನಿಲ್, ಶ್ರೀ ಸುರೇಂದ್ರ, ಶ್ರೀ ಅಜರುದ್ದೀನ್, ಶ್ರೀ ಪ್ರವೀಣ್ ಪ್ರಭಾಕರ್, ಶ್ರೀ ರವಿ ಶೆಟ್ಟಿ, ಶ್ರೀ ಪ್ರಭಾಕರ್ ಶೆಟ್ಟಿ (ಕರಾವಳಿ), ಶ್ರೀ ಹಬೀಬ್ ಆಲಿ, ಶ್ರೀ ಸದಾಶಿವ ಕಟ್ಟೆಗುಡ್ಡೆ, ಶ್ರೀ ಚೇತನ್ ಪೂಜಾರಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.





