ಉಡುಪಿ | ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ

Date:

ಭಾರತೀಯ ದಂಡ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ ಸಂಘ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಇತರ ಎರಡು ಕಾನೂನುಗಳ ಕುರಿತು ಮಾತನಾಡಿ, “ಬ್ರಿಟೀಷರ ಕಾಲದಲ್ಲಿ ಜಾರಿಗೆ ಬಂದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜ಼ರ್ ಕೋಡ್(ಸಿಆರ್‌ಪಿಸಿ), ಭಾರತ ಸಾಕ್ಷ ಅಧಿನಿಯಮ(ಇಂಡಿಯನ್ ಎವಿಡೆನ್ಸ್ ಆ್ಯಕ್ಟ್) ತುಂಬಾ ಪ್ರಮುಖವಾದ ಕಾನೂನುಗಳು. ಇದೂ ಕೂಡ ನಿಜವಾದ ಕ್ರಿಮಿನಲ್ ಜಸ್ಟೀಸ್ ಸಿಸ್ಟಮ್. ಈ ಮೂರು ಕಾನೂನುಗಳು ರತ್ನಗಳಿದ್ದಂತೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ಯಾವ ಉದ್ದೇಶಕ್ಕೆ ಹೊಸ ಕಾನೂನು ತರಲಾಗಿದೆ” ಎಂಬುದು ಅರ್ಥವಾಗುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತೀಯ ದಂಡ ಕ್ರಿಯಾ ಸಂಹಿತೆ ಕಾನೂನುಗಳನ್ನು ಬದಲಾಯಿಸುವಂತೆ ಜನರಿಂದ ಯಾವುದೇ ಒತ್ತಾಯಗಳು ಬಂದಿಲ್ಲ ಮತ್ತು ಯಾವುದೇ ಪಕ್ಷಗಳ ಪ್ರಣಾಳಿಕೆಯಲ್ಲೂ ಆ ಬೇಡಿಕೆ ಇರಲಿಲ್ಲ. ಆದರೂ ಏಕಾಏಕಿ ಈ ಹೊಸ ಕಾನೂನುಗಳನ್ನು ಜನರ ಮೇಲೆ ಏರಲಾಗುತ್ತಿದೆ. ಕಾಲಕ್ಕೆ ತಕ್ಕಂತೆ ಕಾನೂನು ಬದಲಾಗಬೇಕು. ಅದರಂತೆ ಹಲವು ಕಾನೂನುಗಳಿಗೆ ತಿದ್ದುಪಡಿ ಕೂಡ ಆಗಿದೆ. ಆದರೆ ಇಡೀ ಕಾನೂನುಗಳನ್ನೇ ಬದಲಾಯಿಸುವ ಅಗತ್ಯ ಇದೆಯೇ ಎಂಬುದು ಎಲ್ಲರ ಪ್ರಶ್ನೆಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕರ್ನಾಟಕ ಒನ್‌ನಲ್ಲಿ ಬಸ್ ಪಾಸ್ ವಿತರಣೆಗೆ ಹೆಚ್ಚಿನ ಹಣ ವಸೂಲಿ; ಆರೋಪ

ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ ರವೀಂದ್ರ ನಾಥ್ ಶಾನುಭೋಗ್,  ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಮುಖ್ಯ ಅತಿಥಿಯಾಗಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಕರ್ತ ಮೈಕಲ್ ರೊಡ್ರಿಗಸ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...