ಉಡುಪಿ‌ | ಸಿಪಿಐ(ಎಂ) ಚುನಾವಣಾ ಕನ್ನಡ ಪ್ರಣಾಳಿಕೆ ಬಿಡುಗಡೆ

Date:

18ನೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಿಪಿಐ(ಎಂ) ಕೇಂದ್ರ ಸಮಿತಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಕನ್ನಡ ಪ್ರತಿಯನ್ನು, ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿತು. ಸಭೆಯ ಅಧ್ಯಕ್ಷತೆಯನ್ನು ಪಕ್ಷದ ಹಿರಿಯ ಮುಖಂಡ ಕೆ.ಶಂಕರ್ ವಹಿಸಿದ್ದರು.

ಈ ವೇಳೆ ಮಾತನಾಡಿದ ಮುಖಂಡರು, ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಸಂವಿಧಾನದ ನಾಲ್ಕು ಆಧಾರ ಸ್ತಂಭಗಳನ್ನು, ಜಾತ್ಯತೀತ, ಪ್ರಜಾಪ್ರಭುತ್ವ, ಆರ್ಥಿಕ ಸ್ವಾವಲಂಬನೆ, ಒಕ್ಕೂಟವಾದ ಮತ್ತು ಸಾಮಾಜಿಕ ನ್ಯಾಯ ಇವುಗಳನ್ನು ವ್ಯವಸ್ಥಿತವಾಗಿ ಕಳಚಿ ಹಾಕುತ್ತಿದೆ. ಜನರಲ್ಲಿ ವಿಭಜನೆ ಉಂಟು ಮಾಡುವ ಸಲುವಾಗಿ ವಿಷಪೂರಿತ ಕೋಮುವಾದಿ ಸಿದ್ದಾಂತವನ್ನು ಹೇರುತ್ತಿದೆ ಎಂದರು.

ಬೆಲೆ ಏರಿಕೆ, ನಿರುದ್ಯೋಗ ತೀವ್ರವಾಗಿ ಹೆಚ್ಚುತ್ತಿದ್ದು, ಜನ ಸಾಮಾನ್ಯರು ಕಷ್ಟಕ್ಕೆ ಒಳಗಾಗಿದ್ದಾರೆ.‌ ಜನರ ತೆರಿಗೆಯ ಹಣದಿಂದ ನಿರ್ಮಾಣವಾದ ಸಾರ್ವಜನಿಕ ‌ಆಸ್ತಿಗಳನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇಂತಹ ದುರ್ನೀತಿಯ ಬದಲಾಗಿ ಸಿಪಿಐ(ಎಂ), ರೈತ, ಕಾರ್ಮಿಕ, ದಲಿತ, ಆದಿವಾಸಿ,ಮಹಿಳೆಯರು, ಸಣ್ಣ ಉದ್ದಿಮೆದಾರರ ಪರವಾಗಿರುವ ಪರ್ಯಾಯ ಧೋರಣೆಗಳನ್ನು ಸೂಚಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐ(ಎಂ) ಮತದಾರರಲ್ಲಿ 3 ಮನವಿಯನ್ನು ಮಾಡಿದೆ

  1. ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳನ್ನು ಸೋಲಿಸುವುದು
  2. ಲೋಕಸಭೆಯಲ್ಲಿ ಸಿಪಿಐ(ಎಂ) ಮತ್ತು ಎಡ ಪಕ್ಷಗಳ ಬಲವನ್ನು ಹೆಚ್ಚಿಸುವುದು
  3. ಕೇಂದ್ರದಲ್ಲಿ ಪರ್ಯಾಯ ಜಾತ್ಯಾತೀತ ಸರ್ಕಾರದ ರಚನೆಯನ್ನು ಖಾತ್ರಿಗೊಳಿಸುವುದು.

ಜಿಲ್ಲಾ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಎಚ್. ನರಸಿಂಹ, ಸುರೇಶ ಕಲ್ಲಾಗರ, ವೆಂಕಟೇಶ ಕೋಣಿ, ಶಶಿಧರ, ಬಲ್ಕಿಸ್, ಶೀಲಾವತಿ ಮೊದಲಾದವರು ಭಾಗವಹಿಸಿದ ಸಭೆಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು ಮಾತ್ರವಲ್ಲದೆ ‘I.N.D.I.A.’ ಕೂಟದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಯತ್ನಿಸಬೇಕು ಎಂದು ನಿರ್ಧರಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಪ್ರಕಟಿಸಿದ, ‘ನಾನು ಬಾಂಡ್-ಚುನಾವಣಾ ಬಾಂಡ್’ ಭರ್ಜರಿ ಸುಳ್ಳುಗಳೇ ಮೋದಿ ಗ್ಯಾರಂಟಿಗಳು ಪುಸ್ತಕವನ್ನು ಸಹ ಬಿಡುಗಡೆ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...