ಉಡುಪಿ | ಸಾಮ್ರಾಜ್ಯಶಾಹಿ ನೀತಿಗಳ ವಿರುದ್ಧ ಜಾಗೃತಿ ಅಗತ್ಯ: ಪ್ರೊ ಫಣಿರಾಜ್

Date:

ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ “ಯು ಎಸ್ ಸಾಮ್ರಾಜ್ಯಶಾಹಿ ಭಾರತದ ಜನತೆಯ ಶತ್ರು” ಎಂಬ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವು ಇಂದು ಉಡುಪಿಯ ಸಿಪಿಎಂ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಗತಿಪರ ಚಿಂತಕ ಪ್ರೊ. ಫಣಿರಾಜ್, 1848ರಲ್ಲಿ ಕಾರ್ಲ್ ಮಾರ್ಕ್ಸ್ ಮತ್ತು ಫ್ರೆಡ್ರಿಕ್ ಎಂಗೆಲ್ಸ್ ರಚಿಸಿದ ಕಮ್ಯುನಿಸ್ಟ್ ಪ್ರಣಾಳಿಕೆಯ ಬಿಡುಗಡೆಯ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು. ಈ ಕೃತಿ ಬೈಬಲ್ ನಂತರ ಜಗತ್ತಿನಲ್ಲಿ ಅತಿ ಹೆಚ್ಚು ಮುದ್ರಣ ಕಂಡು ಅನೇಕ ಭಾಷೆಗಳಲ್ಲಿ ಪ್ರಕಟಗೊಂಡ ಮಹತ್ವದ ಗ್ರಂಥವೆಂದು ಹೇಳಿದರು.

1009707450

ಮುಂದುವರೆದು ಮಾತನಾಡಿದ ಅವರು, ಅಮೇರಿಕಾ ಸಾಮ್ರಾಜ್ಯಶಾಹಿಯು ಸಮಾಜವಾದಿ ರಾಷ್ಟ್ರಗಳ ಸಂಪತ್ತನ್ನು ಲೂಟಿ ಮಾಡಲು ನಿರಂತರ ಮಿಲಿಟರಿ ದಾಳಿಗಳು ಮತ್ತು ರಾಜಕೀಯ ಒತ್ತಡಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ ಅವರು, ಭಾರತದ ಮೇಲೂ ನೇರ ಸೈನಿಕ ದಾಳಿಯ ಬದಲಿಗೆ ರೈತರು ಹಾಗೂ ಕಾರ್ಮಿಕರ ಪರವಾದ ಕಾನೂನುಗಳನ್ನು ಬದಲಾಯಿಸುವ ಮೂಲಕ ನೀತಿಗಳನ್ನು ತಮ್ಮ ಪರ ಮಾಡಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು. ಕಡಿಮೆ ಬೆಲೆಗೆ ರಷ್ಯಾದಿಂದ ತೈಲ ಪಡೆಯುವುದನ್ನು ವಿರೋಧಿಸಿ ದುಬಾರಿ ತೈಲ ಖರೀದಿಸಲು ಒತ್ತಡ ತರುವ ನೀತಿಗಳು ಜನರ ಮೇಲೆ ಆರ್ಥಿಕ ಹೊರೆ ಹಾಕುವಂತಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009707453

ಸಾಮ್ರಾಜ್ಯಶಾಹಿ ನೀತಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಅದಿಲ್ಲದೆ ದೇಶದ ಭವಿಷ್ಯಕ್ಕೆ ಅಪಾಯ ಎದುರಾಗಬಹುದು ಎಂದು ಎಚ್ಚರಿಸಿದರು. ಇದರ ವಿರುದ್ಧ ಸಂಘಟಿತ ಆಂದೋಲನಗಳು ನಡೆಯಬೇಕೆಂದು ಕರೆ ನೀಡಿದರು.

ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯ ದಿನವನ್ನು ಕೆಂಪು ಪುಸ್ತಕ ದಿನವಾಗಿ ಆಚರಿಸುವ ಪರಂಪರೆ ವಿಶ್ವದಾದ್ಯಂತ ಇದೆ ಎಂದು ಹೇಳಿದ ಅವರು, ಸಂಘಟನೆಗಳನ್ನು ಬಲಪಡಿಸಲು ಮತ್ತು ಗಟ್ಟಿಗೊಳಿಸಲು ಈ ಕೃತಿಯನ್ನು ಪುನಃ ಪುನಃ ಓದುವುದು ಅಗತ್ಯವೆಂದು ಹೇಳಿದರು.

1009707452

ಬಂಡವಾಳಶಾಹಿಗಳ ಒಕ್ಕೂಟವೇ ಸಾಮ್ರಾಜ್ಯಶಾಹಿ ಎಂದು ಅಭಿಪ್ರಾಯಪಟ್ಟ ಅವರು, ಭಾರತದಲ್ಲಿ ಬ್ರಿಟಿಷರ ಕಾಲದಿಂದಲೇ ಹೊಸಹತುಷಾಹಿಯ ಲಕ್ಷಣಗಳು ಕಂಡುಬಂದಿವೆ ಎಂದು ಹೇಳಿದರು. ಯಾವುದೇ ರಾಷ್ಟ್ರ ಸ್ವತಂತ್ರವಾದರೂ ಅದರ ಆರ್ಥಿಕ-ರಾಜಕೀಯ ವ್ಯವಸ್ಥೆಯನ್ನು ತಮ್ಮ ಪ್ರಭಾವದಲ್ಲಿ ಇಡುವುದು ಸಾಮ್ರಾಜ್ಯಶಾಹಿ ಶಕ್ತಿಗಳ ಪ್ರಮುಖ ಅಜೆಂಡಾ ಎಂದು ಹೇಳಿದರು.

ಹೊಸ ಕಾರ್ಮಿಕ ನೀತಿಗಳು ಸಂಘಟನೆಗಳನ್ನು ದುರ್ಬಲಗೊಳಿಸುವ ಮೊದಲ ಹೆಜ್ಜೆಯಾಗಿದ್ದು, ಕಾನೂನುಗಳ ಮೂಲಕ ಕಾರ್ಮಿಕ ಸಂಘಟನೆಗಳ ಶಕ್ತಿಯನ್ನು ಒಡೆಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು. ಕರಾಳ ಕಾನೂನುಗಳನ್ನು ವಿರೋಧಿಸುವ ಸಂಘಟನೆಗಳ ಶಕ್ತಿಯನ್ನು ಏಕೀಕರಿಸಿ, ಚಳುವಳಿಗಳನ್ನು ಕಟ್ಟುವ ಮೂಲಕ ಸಾಮ್ರಾಜ್ಯಶಾಹಿ ಶಕ್ತಿಗಳ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯ ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಈದಿನ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, 1848ರ ಫೆಬ್ರವರಿ 21ರಂದು ಪ್ರಕಟವಾದ “ಕಮ್ಯುನಿಸ್ಟ್ ಪ್ರಣಾಳಿಕೆ”ಯ ಬಿಡುಗಡೆಯ ನೆನಪಿನಲ್ಲಿ ಕೆಂಪು‌ ಪುಸ್ತಕ ದಿನವನ್ನು ಆಚರಿಸಲಾಗುತ್ತದೆ. ಈ ಕೃತಿಯನ್ನು ಕಾರ್ಲ್ ಮಾರ್ಕ್ಸ್ ಮತ್ತು ಫ್ರೆಡ್ರಿಕ್ ಎಂಗೆಲ್ಸ್ ರಚಿಸಿದ್ದು, ಕಾರ್ಮಿಕ ವರ್ಗದ ಹಕ್ಕುಗಳು, ವರ್ಗ ಹೋರಾಟ ಮತ್ತು ಸಮಾಜ ಪರಿವರ್ತನೆಯ ತತ್ವಗಳನ್ನು ವಿವರಿಸುತ್ತದೆ ಎಂದು ಹೇಳಿದರು.

ರೆಡ್ ಬುಕ್ ದಿನದ ಉದ್ದೇಶ ಸಮಾಜದಲ್ಲಿ ಅಸಮಾನತೆ, ಶೋಷಣೆ, ಬಂಡವಾಳಶಾಹಿ ಮತ್ತು ಸಾಮ್ರಾಜ್ಯಶಾಹಿ ನೀತಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದೆ. ಈ ದಿನ ವಿವಿಧ ಎಡಪಂಥೀಯ ಸಂಘಟನೆಗಳು, ಸಾಹಿತ್ಯ ಸಂಘಗಳು ಮತ್ತು ಸಾಮಾಜಿಕ ಸಂಘಟನೆಗಳು ಪುಸ್ತಕ ವಾಚನ, ಚರ್ಚೆ, ಸಂವಾದ, ಪುಸ್ತಕ ಬಿಡುಗಡೆ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ ಎಂದು ಹೇಳಿದರು.

1009707449

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಸುಂದರ್ ಮಾಸ್ತರ್, ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಚ್ ನರಸಿಂಹ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ದುಡಿಯವವರು ಕಾರ್ಯಕ್ರಮದಲ್ಲಿದ್ದು ಸಂವಾದದಲ್ಲಿ ಭಾಗವಹಿಸಿದ್ದರು. ಬಿಡುಗಡೆ ಕಾರ್ಯಕ್ರಮದಲ್ಲಿ ಸಿಪಿಎಂ ಮುಖಂಡರಾದ ಕವಿರಾಜ್ ಎಸ್ ಕಾಂಚನ್, ವೆಂಕಟೇಶ್ ಕೋಣಿ, ಉಮೇಶ್ ಕುಂದರ್, ಸುಭಾಶ್ಚಂದ್ರ ನಾಯಕ್, ಶೀಲಾವತಿ, ಸಹಬಾಳ್ವೆ ಸಂಘಟನೆಯ ಇದ್ರಿಸ್ ಹೂಡೆ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಉಪಸ್ಥಿತರಿದ್ದರು. ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...