ಉಡುಪಿ | ಕ್ರೆಡಿಟ್ ಕಾರ್ಡ್ ನೆಪದಲ್ಲಿ ₹2.47 ಲಕ್ಷ ವಂಚನೆ: ಪ್ರಕರಣ ದಾಖಲು

Date:

ಮಣಿಪಾಲದ ಶಿವಳ್ಳಿ ಗ್ರಾಮದ ಮಾಂಡವಿ ಪರ್ಲ್ ಸಿಟಿ ಅಪಾರ್ಟ್‌ಮೆಂಟ್‌ ನಿವಾಸಿ ಸಂತೋಷ್ ಸಿ. ಕಾಮತ್ (60) ಎಂಬವರಿಗೆ ಕ್ರೆಡಿಟ್ ಕಾರ್ಡ್ ನೀಡುವ ನೆಪದಲ್ಲಿ ಅಪರಿಚಿತರು ಸುಮಾರು ₹2.47 ಲಕ್ಷ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಡಿಸೆಂಬರ್ 15 ರಂದು ಸಂಜೆ ಸುಮಾರು 6 ಗಂಟೆಗೆ ಸಂತೋಷ್ ಕಾಮತ್ ತಮ್ಮ ನಿವಾಸದಲ್ಲಿರುವ ವೇಳೆ, HDFC ಬ್ಯಾಂಕಿನ ಕ್ರೆಡಿಟ್ ಕಾರ್ಡ್ ವಿಭಾಗದ ಚಾನೆಲ್ ಪಾರ್ಟನರ್ ಎಂದು ಪರಿಚಯಿಸಿಕೊಂಡ MBYC11 ಸಂಸ್ಥೆಯ ಸೇಲ್ಸ್ ಅಸೋಸಿಯೇಟ್ ಆರೋಹಿ ಶರ್ಮ ಎಂಬವರು 7348179208 ಸಂಖ್ಯೆಯಿಂದ ವಾಟ್ಸಪ್ ಕರೆ ಮಾಡಿದ್ದರು. ಕರೆ ವೇಳೆ HDFC ಬ್ಯಾಂಕಿನ ರೆಗಾಲಿಯಾ ಗೋಲ್ಡ್ ಕ್ರೆಡಿಟ್ ಕಾರ್ಡ್ ನೀಡುವುದಾಗಿ ಹೇಳಿ, ವಾಟ್ಸಪ್ ವಿಡಿಯೋ ಕರೆ ಮೂಲಕ ಪಾನ್ ಕಾರ್ಡ್ ತೋರಿಸುವಂತೆ ಕೇಳಿಕೊಂಡಿದ್ದಾರೆ.

ಕರೆ ಮಾಡಿದವರ ಮಾತನ್ನು ನಂಬಿದ ಸಂತೋಷ್ ಸಿ. ಕಾಮತ್ ತಮ್ಮ ಪಾನ್ ಕಾರ್ಡ್ ಅನ್ನು ತೋರಿಸಿದ್ದು, ನಾಲ್ಕು ದಿನಗಳಲ್ಲಿ ನೋಂದಾಯಿತ ವಿಳಾಸಕ್ಕೆ ಕಾರ್ಡ್ ತಲುಪುತ್ತದೆ ಎಂದು ತಿಳಿಸಿ ಕರೆ ಕಡಿತಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಒಂದು ಗಂಟೆಯ ಬಳಿಕ ತಮ್ಮ ಮೂರು ಕ್ರೆಡಿಟ್ ಕಾರ್ಡ್‌ಗಳನ್ನು ಪರಿಶೀಲಿಸಿದಾಗ, ಒಟ್ಟು ₹2,47,283 ಮೊತ್ತ ಡೆಬಿಟ್ ಆಗಿರುವುದು ಕಂಡುಬಂದಿದೆ. ಪಿರ್ಯಾದಿದಾರರಿಗೆ ತಿಳಿಯದಂತೆ ಯಾರೋ ಅಪರಿಚಿತರು ಮೋಸದಿಂದ ಹಣ ವರ್ಗಾವಣೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...