ಉಡುಪಿ | ‘ಡಿಸಿ ಮನ್ನಾ ಭೂಮಿ’ಯಲ್ಲಿ ಅಕ್ರಮ ಕಟ್ಟಡ ತೆರವಿಗೆ ದಸಂಸ ಆಗ್ರಹ

Date:

ದಲಿತರಿಗಾಗಿ ಮೀಸಲಿಟ್ಟ ‘ಶೋಷಿತ ವರ್ಗ (ಡಿಸಿ) ಮನ್ನಾ ಭೂಮಿ’ಯಲ್ಲಿ ವಿಶ್ವನಾಥ ಪೂಜಾರಿ ಎಂಬಾತ ಅಕ್ರಮವಾಗಿ ನಿರ್ಮಿಸುತ್ತಿರುವ ಅಂಗಡಿ ಮಳಿಗೆಯನ್ನು ತೆರವುಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಗ್ರಹಿಸಿದೆ.

ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಪಡುಕುಡೂರು ಗ್ರಾಮದಲ್ಲಿ ಸರ್ವೆ ನಂ.74/2ರಲ್ಲಿರುವ ಡಿಸಿ ಮನ್ನಾ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿದೆ ಎಂದು ದಸಂಸ ಆರೋಪಿಸಿದೆ.

“ಅಕ್ರಮ ಕಟ್ಟಡದ ವಿರುದ್ಧ ದಸಂಸ ದೂರು ದಾಖಲಿಸಿದ ಪರಿಣಾಮ ಕಟ್ಟಡ ತೆರವುಗೊಳಿಸುವಂತೆ ತಹಶೀಲ್ದಾರರು ಮಾರ್ಚ್‌ 2ರಂದು ಆದೇಶ ಹೊರಡಿಸಿದ್ದರು. ಆದರೆ, ಈವರೆಗೂ ಆಕ್ರಮ ಕಟ್ಟಡವನ್ನು ತೆರವುಗೊಳಿಸಿಲ್ಲ” ಎಂದು ಸಂಘಟನೆಯ ಜಿಲ್ಲಾ ಪ್ರಾಧಾನ ಸಂಚಾಲಕ ಸುಂದರ ಮಾಸ್ತರ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಹುಲ್‌ ಗಾಂಧಿ ಅನರ್ಹತೆ ಹಿಂದೆ ಕೇಂದ್ರದ ಕೈವಾಡವಿದೆ: ಕಾಂಗ್ರೆಸ್ ಮುಖಂಡ

“ಅಕ್ರಮ ಕಟ್ಟಡವನ್ನು ಕೂಡಲೇ ತೆರವುಗೊಳಿಸದಿದ್ದಲ್ಲಿ ಹೆಬ್ರಿ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಸಂಘಟನೆಯ ಜಿಲ್ಲಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಪರಮೇಶ್ವರ ಉಪ್ಪೂರು, ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು, ಮಂಜುನಾಥ್ ಬಾಳ್ಕುದ್ರು, ಶ್ಯಾಮಸುಂದರ್ ತೆಕ್ಕಟ್ಟೆ, ಅಣ್ಣಪ್ಪ ನಕ್ರೆ, ಶ್ರೀಧರ ಕುಂಜಿಬೆಟ್ಟು, ಹೆಬ್ರಿ ತಾಲೂಕು ಸಂಚಾಲಕ ದೇವು ಹೆಬ್ರಿ, ಕಾರ್ಕಳ ತಾಲೂಕು ಸಂಚಾಲಕ ರಾಘವ ಕುಕುಜೆ ಇದ್ದರು.

ಉಡುಪಿ ಮೀಡಿಯಾ ವಾಲಂಟಿಯರ್  ಶಾಮರಾಜ್ ಬಿರ್ತಿ ಮಾಹಿತಿ ಆಧರಿಸಿದ ವರದಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...