ಉಡುಪಿ | ಜಿಲ್ಲೆಯಲ್ಲಿ ನಿಷ್ಕ್ರಿಯ ಗೊಂಡ ಎರಡು ಸರಕಾರಿ ಇಲಾಖೆಗಳು, ಜಿಲ್ಲಾಡಳಿತ ದಿವ್ಯ ಮೌನ !

Date:

ಉಡುಪಿ ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ಮತ್ತು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಎನ್ನುವ ಎರಡು ಸರಕಾರಿ ಇಲಾಖೆಗಳು ಅಧಿಕಾರಿಗಳಿಲ್ಲದೆ ಮಲಗಿದಲ್ಲೇ ಸತ್ತಿವೆ! ಸರಕಾರಿ ಆಸ್ಪತ್ರೆಗಳಲ್ಲಿನ ವ್ಯವಸ್ಥೆ ದೇವರಿಗೇ ಪ್ರೀತಿ! ಜಿಲ್ಲೆಯ ಗ್ರಾಮ ಮತ್ತು ತಾಲೂಕು ಪಂಚಾಯತ್ ಗಳನ್ನು ಹೇಳುವವರು, ಕೇಳುವವರೇ ಇಲ್ಲ.

ಹೌದು ಮೊದಲಿನಿಂದಲೂ ನಿದ್ದೆಯಲ್ಲೇ ಇರುತಿದ್ದ ಈ ಇಲಾಖೆಗಳಲ್ಲಿ ಅಧಿಕಾರಿಗಳೇ ಇಲ್ಲ! ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಇಲಾಖೆಯ ಬಗ್ಗೆ ಯಾವುದೇ ಅನುಭವ ಇಲ್ಲದ ಓರ್ವ ಅಧಿಕಾರಿ ಪ್ರಭಾರವಾಗಿ ಕಾಟಾಚಾರಕ್ಕೆ ಕಾರ್ಯ ನಿರ್ವಹಿಸುತ್ತಿದ್ದರೆ, ಉಡುಪಿ ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಅಧಿಕಾರಿಗಳೇ ಇಲ್ಲ! ಇನ್ನು ಸರಕಾರಿ ಆಸ್ಪತ್ರೆಗಳಿಗೆ ಬಡವರು ಚಿಕಿತ್ಸೆಗೆಂದು ಹೋದರೆ ವೈದ್ಯರು ಸಿಗುವುದೇ ಇಲ್ಲ! ಸಿಕ್ಕಿದರೂ ಸರಿಯಾದ ಔಷಧ ಕೊಡದೆ ಖಾಸಗಿ ಮೆಡಿಕಲ್ ಗಳಿಗೆ ಚೀಟಿ ಬರೆದು ಕೊಟ್ಟು ಕೈ ತೊಳೆದು ಕೊಳ್ಳುತ್ತಾರೆ.

ಮೂರು ಬಾರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರು ಕರೆದ ಜಿಲ್ಲಾ ದಲಿತರ ಕುಂದು ಕೊರತೆಗಳ ಸಭೆಯಲ್ಲಿ ಎಸ್ ಪಿ ಯವರ ಎದುರು ದಲಿತ ಮುಖಂಡರು ಈ ಗಂಭೀರ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದರೂ, ಮನವಿ ಮಾಡಿದರೂ ಧ್ವನಿಗೆ, ಮನವಿಗೆ ಜಿಲ್ಲಾಡಳಿತದಿಂದ ಕವಡೆ ಕಾಸಿನ ಕಿಮ್ಮತ್ತಿಲ್ಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಐದು ಗ್ಯಾರೆಂಟಿಗಳ ಮೂಲಕ ಉತ್ತಮ ಆಡಳಿತ ನಡೆಸುತ್ತಿದ್ದರೂ ಉಡುಪಿ ಜಿಲ್ಲೆಯಲ್ಲಿನ ಜಿಲ್ಲಾಡಳಿತ ತನ್ನ ಅಧೀನದ ಇಲಾಖೆಗಳ ಮೇಲೆ ಹಿಡಿತ ಇಲ್ಲದೆ ಜನ ಸಾಮಾನ್ಯರು ತಮ್ಮ ಕೆಲಸ ಕಾರ್ಯಗಳಿಗೆ ಪರದಾಡುವಂತ ಪರಿಸ್ಥಿತಿ ನಿರ್ಮಾಣ ಮಾಡಿದೆ. ಇದರಿಂದ ಜಿಲ್ಲೆಯಲ್ಲಿ ಸರಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶ ಜಿಲ್ಲಾಡಳಿತಕ್ಕೆ ಇದೆಯೇ ಅನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಜಿಲ್ಲೆಯ ದಲಿತ ಸಮುದಾಯದ ಬೆನ್ನೆಲುಬಾದ ಈ ಎರಡು ಇಲಾಖೆಗಳು ಜಿಲ್ಲೆಯಲ್ಲಿ ಇದ್ದೂ ಸತ್ತಂತೆ ಮಲಗಿವೆ. ದಲಿತ ಸಮುದಾಯದ ಮತ್ತು ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳನ್ನು ಮಾಡದೆ ಸುಮ್ಮನೆ ಸರಕಾರದ ಸಂಬಳವನ್ನು ತಿಂದು ತೇಗುತ್ತಿರುವ ಈ ಇಲಾಖೆಗಳ ವಿರುದ್ಧ ದಲಿತ ಸಮುದಾಯದಲ್ಲಿ ಹತಾಶೆ, ಆಕ್ರೋಶ ಮಡುವುಗಟ್ಟಿದೆ. ಇದೇ ರೀತಿ ಇಲಾಖೆಗಳ ಚಾಳಿ ಮುಂದುವರಿದರೆ ದಲಿತರು ಜಿಲ್ಲೆಯಲ್ಲಿ ಬೀದಿಗಿಳಿಯುವ ದಿನ ದೂರವಿಲ್ಲ.

ವರದಿ – ಶ್ರೀನಿವಾಸ್ ವಡ್ಡರ್ಸೆ (ಸಿಟಿಝನ್ ಜರ್ನಲಿಸ್ಟ್, ಉಡುಪಿ )

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...