ಉಡುಪಿ | ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ. ಕೆ

Date:

ಉಡುಪಿ ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ರಾಹಕರಿಗೆ ಸಿ.ಎನ್.ಜಿ ಗ್ಯಾಸ್ ವಿತರಣಾ ಕೇಂದ್ರಗಳಲ್ಲಿ ವಾಹನಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿ.ಎನ್.ಜಿ ಗ್ಯಾಸ್ ಸರಬರಾಜಿನಲ್ಲಿ ಉಂಟಾಗುವ ಸಮಸ್ಯೆಯನ್ನು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಸಿ.ಎನ್. ಜಿ ಗ್ಯಾಸ್ ಬಳಸಿ ವಾಹನ ಚಾಲನೆ ಮಾಡುತ್ತಿರುವ ಆಟೋ ಚಾಲಕರು ಸೇರಿದಂತೆ ಮತ್ತಿತರರ ವಾಹನಗಳಿಗೆ ಗ್ಯಾಸ್ ತುಂಬಿಸಲು ಬಂಕ್ ಗಳ ಮುಂದೆ ಎರಡು-ಮೂರು ಗಂಟೆಗಿಂತ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಉಂಟಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಇದನ್ನು ಕೂಡಲೇ ಗೈಲ್ ಗ್ಯಾಸ್ ಕಂಪನಿ ಹಾಗೂ ಅದಾನಿ ಕಂಪನಿಯವರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಗ್ಯಾಸ್ ವಿತರಣೆಯಲ್ಲಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009373991

ಜಿಲ್ಲೆಯಲ್ಲಿ ಸಿ.ಎನ್.ಜಿ ಬಳಸುವ ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಗ್ಯಾಸ್ ವಿತರಣೆಗೆ ಅಗತ್ಯವಿರುವ ಇಲ್ಲಾ ರೀತಿಯ ಕಾರ್ಯ ಚಟುವಟಿಕೆ ಕೈಗೊಂಡು ಬೇಡಿಕೆಗೆ ಅನುಗುಣವಾಗಿ ಪೂರೈಸಬೇಕು ಎಂದು ಅದಾನಿ ಕಂಪನಿ ಪ್ರತಿನಿಧಿಗೆ ಸೂಚಿಸಿದರು.

ಮಂಗಳೂರಿನ ಗ್ಯಾಸ್ ಡಿಪೋದಲ್ಲಿ ಟ್ಯಾಂಕರ್‌ಗಳಿಗೆ ಗ್ಯಾಸ್ ತುಂಬಿಸುವಾಗ ಉಡುಪಿ ಜಿಲ್ಲೆಯ ವಾಹನಗಳಿಗೆ ಆದ್ಯತೆ ನೀಡಿ ಸರತಿ ಸಾಲಿನ ಪ್ರಕಾರ ಗ್ಯಾಸ್ ತುಂಬಿಸಲು ಆದ್ಯತೆ ನೀಡಬೇಕು. ಸಾಧ್ಯವಾದಲ್ಲಿ ನಿಗದಿತ ವೇಳೆಯನ್ನು ನೀಡಿ ಗ್ಯಾಸ್ ಟ್ಯಾಂಕರ್‌ಗಳಿಗೆ ಭರ್ತಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆಯಲ್ಲಿ ಸಿ. ಎನ್.ಜಿ ಗ್ಯಾಸ್ ಅಸಮರ್ಪಕ ವಿತರಣೆಯಿಂದಾಗಿ ಆಟೋ ಸೇರಿದಂತೆ ಮತ್ತಿತರ ವಾಹನ ಚಾಲಕರಿಗೆ ಗ್ಯಾಸ್ ತುಂಬಿಸಲು ದಿನಗಟ್ಟಲೆ ನಿಲ್ಲುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ಕೆಲವರ ವೃತ್ತಿ ಜೀವನದಲ್ಲಿ ತೊಂದರೆ ಉಂಟಾಗುತ್ತಿದೆ. ಸಮರ್ಪಕ ವಿತರಣೆಗೆ ಮುಂದಾಗಬೇಕು ಎಂದು ತಿಳಿಸಿದರು.

ಕಳೆದ ಸಭೆಯಲ್ಲಿ ಅದಾನಿ ಕಂಪನಿಯವರು ತಮ್ಮದೇ ಸ್ವಂತ ಗ್ಯಾಸ್ ತುಂಬುವ ಡಿಪೋ ವನ್ನು ಶೀಘ್ರವೇ ಪ್ರಾರಂಭಿಸುವುದಾಗಿ ತಿಳಿಸಿದ್ದರು. ಆದರೆ ಇದುವರೆಗೂ ಆಗಿಲ್ಲ. ಇದನ್ನು ಕೂಡಲೇ ಪ್ರಾರಂಭಿಸಲು ಮುಂದಾಗಿ ಜನರಿಗೆ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದ ಅವರು, ಪ್ರಸ್ತುತ 17 ಗ್ಯಾಸ್ ಟ್ಯಾಂಕರ್ ವಾಹನಗಳು ಬಳಕೆ ಮಾಡಿ ಮಂಗಳೂರಿನಿಂದ ತರಲಾಗುತ್ತಿದೆ. ಈ ವಾಹನಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿದ್ದಲ್ಲಿ ಸಿ.ಎನ್.ಸಿ ಸುಗಮ ಗ್ಯಾಸ್ ಸರಬರಾಜಿಗೆ ಅನುಕೂಲವಾಗಲಿದೆ. ಇದಕ್ಕೆ ಅದಾನಿ ಕಂಪನಿಯವರು ಒತ್ತು ನೀಡಬೇಕು ಎಂದರು.

ಜಿಲ್ಲೆಯ ಸಿ.ಎನ್.ಜಿ ಗ್ಯಾಸ್ ವಿತರಣಾ ಘಟಕಗಳಲ್ಲಿ ಗ್ಯಾಸ್ ತುಂಬಿಸಲು ವಾಹನಗಳು ಗಂಟೆಗಟ್ಟಲೆ ನಿಂತು ತುಂಬಿಸುವ ಅನಿವಾರ್ಯ ಉಂಟಾಗಿದೆ ಹಾಗೂ ಗ್ಯಾಸ್ ತುಂಬುವಾಗ ಒತ್ತಡದ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ವಾಹನ ಚಾಲಕರು ತಮ್ಮ ಅಹವಾಲು ತೋಡಿಕೊಂಡರು.

ಸಭೆಯಲ್ಲಿ ಶಾಸಕ ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಗೈಲ್ ಗ್ಯಾಸ್ ಹಾಗೂ ಅದಾನಿ ಗ್ಯಾಸ್ ಕಂಪನಿ ಯ ಮುಖ್ಯಸ್ಥರುಗಳು, ಆಟೋ ರಿಕ್ಷಾ ಚಾಲಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...