ಉಡುಪಿ | ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಿ – ಡಿಸಿ ವಿದ್ಯಾಕುಮಾರಿ

Date:

ಉಡುಪಿ ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಹೊಸದಾಗಿ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ(ನಿ) ಸ್ಥಾಪನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ ಸ್ಥಾಪನೆಯಿಂದ ಕಾರ್ಮಿಕರು, ಹೊರ ಗುತ್ತಿಗೆದಾರರು, ವಿವಿಧ ಆರ್ಥಿಕ ಲಾಭಗಳನ್ನು ಪಡೆಯಲು ಅನುಕೂಲವಾಗುವ ದರ ಜೊತೆಗೆ ಸರಕಾರದ ವಿವಿಧ ಇಲಾಖೆಗಳು ಹಾಗೂ ಇವುಗಳ ಅಧೀನದಲ್ಲಿ ಬರುವ ನಿಗಮ ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರ ಸೇವೆಗಳನ್ನು ಒದಗಿಸಲು ಅನುಕೂಲವಾಗಲಿದೆ. ಹೊರಗುತ್ತಿಗೆದಾರರ ವೇತನ ಪಾವತಿ, ಇ.ಎಸ್.ಐ, ಪಿ.ಎಫ್ ಮುಂತಾದ ಶಾಸನಾತ್ಮಕ ಸೌಲಭಗಳನ್ನು ನೌಕರರಿಗೆ ಒದಗಿಸುವ ಮೂಲಕ ಯಾವುದೇ ಸಮಸ್ಯೆಗಳಿಲ್ಲದೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದರು.
ರಾಜ್ಯದಲ್ಲಿ ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಈ ರೀತಿಯ ಸಂಘಗಳನ್ನು ಸ್ಥಾಪಿಸಿ, ಸದರಿ ಸಂಘದ ಮೂಲಕ ಹೊರ ಗುತ್ತಿಗೆ ನೌಕರರನ್ನು ವಿವಿಧ ಇಲಾಖೆಗಳಿಗೆ ನಿಯೋಜಿಸಿದೆ. ಹಾಗೂ ಅವರಿಗೆ ವೇತನ ಸೇರಿದಂತೆ ಮತ್ತಿತರ ಶಾಸನಾತ್ಮಕವಾಗಿ ನೀಡಬೇಕಾದ ಸೇವೆಗಳು ಯಾವುದೇ ಸಂಸ್ಯೆಗಳಿಲ್ಲದೆ ಸರಳವಾಗಿ ನೀಡುವುದರೊಂದಿಗೆ ಯಶಸ್ವಿಯಾಗಿದೆ. ಇದನ್ನು ಈ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘದ ಪ್ರಾರಂಭಕ್ಕೆ ಅಗತ್ಯವಿರುವ ಕಚೇರಿ, ಸಂಘದ ಬೈಲಾ, ಅಡಕ್ ಸಮಿತಿ ಸೇರಿದಂತೆ ಮತ್ತಿತರ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡು ಶೀಘ್ರದಲ್ಲಿಯೇ ಸಂಘ ಸ್ಥಾಪನೆಗೆ ಮುಂದಾಗಬೇಕು ಎಂದ ಅವರು, ಪ್ರಸ್ತುತ ಚಾಲ್ತಿಯಲಿರುವ ಕಾರ್ಮಿಕ ಇಲಾಖೆಗಳ ವಿವಿದ್ದೋದ್ದೇಶ ಸಹಕಾರ ಸಂಘಕ್ಕೆ ಜಿಲ್ಲೆಯ ತಂಡ ಭೇಟಿ ನೀಡಿ, ವೀಕ್ಷಿಸಿ ಮಾಹಿತಿ ಕಲೆ ಹಾಕಬೇಕು ಎಂದರು.

ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ 2080 ಕ್ಕೂ ಹೆಚ್ಚು ಜನ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುತ್ತಾರೆ ಎಂದ ಅವರು, ಕೆಲವು ಗುತ್ತಿಗೆ ಸಂಸ್ಥೆಗಳು ತಮಗೆ ಸರಿಯಾಗಿ ವೇತನ, ಪಿ.ಎಫ್ ಸೇರಿದಂತೆ ಮತ್ತಿತರ ಕಾನೂನಾತ್ಮಕ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅನೇಕ ಬಾರಿ ದೂರಿದ್ದಾರೆ. ಈ ರೀತಿಯ ವಿವಿದ್ದೋದ್ದೇಶ ಸಂಘಗಳನ್ನು ಮಾಡಿಕೊಳ್ಳುವುದರಿಂದ ಅನೇಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.

ವಿವಿದ್ದೋದ್ದೇಶ ಸಹಕಾರ ಸಂಘ ಪ್ರಾರಂಭ ಕುರಿತು ಈಗಾಗಲೇ ಜಿಲ್ಲೆಯ ಅನೇಕ ಸರಕಾರಿ, ನಿಗಮ ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 12 ರಂದು ಸಭೆಯನ್ನು ಕರೆದು ಅವರೊಂದಿಗೆ ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಬಾಲ ಕಾರ್ಮಿಕ ಸಂಘದ ಯೋಜನಾಧಿಕಾರಿ ಅಮೃತ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ತಾಲೂಕು ತಹಶೀಲ್ದಾರ್ ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...