ಉಡುಪಿ | ನಾಯಿ ಕೊಂದಿರುವುದಾಗಿ ದೂರು ದಾಖಲಿಸಿದ ಪೋಷಕಿ, ಮುಂದುವರಿದ ತನಿಖೆ

Date:

ಆಹಾರದಲ್ಲಿ ವಿಷಹಾಕಿ ಸಾಕು ನಾಯಿಯನ್ನು ಕೊಂದಿರುವುದಾಗಿ ನಾಯಿಯ ಪೋಷಕಿ ಸಾಮಾಜಿಕ ಕಾರ್ಯಕರ್ತೆ‌ ಮಣಿಪುರ ಬಡಗುಮನೆಯ ಬಿಂದು ಶೆಟ್ಟಿ ಅವರು, ಕಾಪು ಪೋಲಿಸ್ ಠಾಣೆಯ‌ಲ್ಲಿ ದೂರು ದಾಖಲಿಸಲಿಸಿದ್ದಾರೆ. ಫೆ.21 ಶುಕ್ರವಾರ, ರಾತ್ರಿ 11.00 ಗಂಟೆಯಿಂದ ಫೆ. 22 ರ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ನಾಯಿಗೆ ವಿಷ ಪದಾರ್ಥ ಹಾಕಿ ಕೊಂದಿರುವುದಾಗಿ ದೂರಲಾಗಿದೆ.

ಮೃತ ನಾಯಿಯ ಕಳೇಬರವನ್ನು ವಾರಸುದಾರರು ಮನೆಯ ವಠಾರದಲ್ಲಿ ದಫನ ನಡೆಸಿದ್ದರು. ದೂರು ದಾಖಲಾದ ಕಾರಣ ಕಾನೂನು ಪ್ರಕ್ರಿಯೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸಬೇಕಾಯಿತು. ಹಾಗಾಗಿ ಹೆಡ್ ಕಾನ್ಸಟೇಬಲ್ಗಳಾದ ಅರುಣ್ ಉಪ್ಪೂರು, ಸುಧಾಕರ್ ನಾಯ್ಕ್ ಹಾಗೂ ಪ್ರಾಣಿ ದಯಾ ಸಂಘದ ಮಂಜುಳ ಅವರ ಸಮಕ್ಷಮದಲ್ಲಿ ನಾಯಿಯ ಕಳೇಬರವನ್ನು ಗುಂಡಿಯಿಂದ ಮೇಲ್ಕೆತ್ತಲಾಯಿತು. ಶ್ವಾನದ ಕಳೇಬರ ಕೆಡದಂತೆ ಸುರಕ್ಷಿತ ವಿಧಾನದಲ್ಲಿ ರಕ್ಷಿಸಿಡಬೇಕಾಯಿತು. ಈ ಸಂದರ್ಭ ಕಾಪು ಪೋಲಿಸರು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರ, ನೆರವು ಪಡೆದರು. ಪೋಲಿಸರು ಬಿಂದು ಶೆಟ್ಟಿಯವರಿಗೆ ನಾಯಿಯ ಕಳೇಬರವನ್ನು ಮಣಿಪಾಲದಲ್ಲಿರುವ ಸಮಾಜಸೇವಕ ಒಳಕಾಡುವರ ಮನೆಗೆ ಕಂಡ್ಯೊಲು ಸಲಹೆವಿತ್ತರು.‌ ಒಳಕಾಡುವರು ನಾಯಿಯ ಕಳೇಬರವನ್ನು ಮನೆಯಲ್ಲಿರುವ ವಿದ್ಯುತ್ ಚಾಲಿತ‌ ಶೀತಲೀಕೃತ ಪ್ರಾಣಿ ಕಳೇಬರ ರಕ್ಷಣಾ ಪೆಟ್ಟಿಗೆಯಲ್ಲಿ ರಕ್ಷಿಸಿಟ್ಟಿದ್ದರು. ಭಾನುವಾರ ಬೈಲೂರು ಪಶುಚಿಕಿತ್ಸಾ ಕೇಂದ್ರಕ್ಕೆ ಸಾಗಿಸಿದರು. ಪಶುವೈದ್ಯ ಡಾ. ಚಂದ್ರಕಾಂತ್ ಅವರಿಂದ ಮರಣೋತ್ತರ ಪರೀಕ್ಷೆ ನಡೆದಿದ್ದು ವರದಿ ಬರಬೇಕಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...