ಉಡುಪಿ | ಕೋಮುವಾದಿಗಳ ಅಕ್ಷತೆ ನಾಟಕಕ್ಕೆ ಬಲಿಯಾಗಬೇಡಿ: ದಸಂಸ

Date:

ಮನುವಾದಿಗಳ, ಜಾತೀ ವಾದಿಗಳ ಅಕ್ಷತೆ ಹಂಚುವ ನಾಟಕಕ್ಕೆ ನಮ್ಮ ಜನರು ಬಲಿಯಾಗಬಾರದು. ಈ ಅಕ್ಷತೆ ತಗೊಂಡು ಯಾರೂ ಉದ್ಧಾರ ಆಗಲ್ಲ. ನಾವು ಉದ್ಧಾರ ಆಗಬೇಕಾದರೆ ಸ್ವಂತ ಉದ್ಯೋಗ ಮಾಡಬೇಕು ಎಂದು ದಸಂಸ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು.

ಉಡುಪಿಯ ಕೊಡಂಕೂರಿನಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶ ಮತ್ತು ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಮಕ್ಕಳ ಕೈಯಲ್ಲಿರುವ ಕೇಸರಿ ಧ್ವಜ ಕಿತ್ತು  ಬಿಸಾಕಿ ಅವರ ಕೈಗೆ ಶಿಕ್ಷಣದ ಪುಸ್ತಕ ಕೊಡಿ ಎಂದರು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ನಗರಸಭೆಯ ಪೌರಾಯುಕ್ತ ರಾಯಪ್ಪ, “ಶೋಷಿತರು ಅಭಿವೃದ್ಧಿ ಹೊಂದಬೇಕಾದರೆ ನಮ್ಮ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡಬೇಕು. ಬಾಬಾಸಾಹೇಬ್ ಅಂಬೇಡ್ಕರ್‌ ಇದನ್ನೇ ಪ್ರತಿಪಾದಿಸಿದರು. ಅಂಬೇಡ್ಕರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲು ಮೇಲ್ವರ್ಗದವರು ಅಂದಿನ ಕಾಲಘಟ್ಟದಲ್ಲಿ ಸಾಕಷ್ಟು ತೊಂದರೆ, ಕಷ್ಟ, ಹುನ್ನಾರಗಳನ್ನು ಮಾಡಿದ್ದರು. ಆದರೆ, ಬಾಬಾಸಾಹೇಬರು ಛಲ ಬಿಡದೇ ಎಲ್ಲಾ ನೋವನ್ನು ನುಂಗಿಕೊಂಡೇ ಅತ್ಯುತ್ತಮ ಶಿಕ್ಷಣ ಪಡೆದು ನಮ್ಮ ದೇಶಕ್ಕೆ ಪ್ರಪಂಚದಲ್ಲೇ ಸರ್ವಶ್ರೇಷ್ಠ ಸಂವಿಧಾನವನ್ನು ಕೊಟ್ಟರು” ಎಂfಉ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಬಾಸಾಹೇಬರು ಕೊಟ್ಟ ಸಂವಿಧಾನದಿಂದಾಗಿಯೇ ನಾನಿಲ್ಲಿ ಬಂದು ನಿಂತಿದ್ದೇನೆ. ಈ ದೇಶದ ಸಂವಿಧಾನವನ್ನು ಬಾಬಾಸಾಹೇಬರು ರಚಿಸದೇ ಇದ್ದಿದ್ದರೆ ನಮ್ಮ ಬದುಕನ್ನು ಊಹಿಸಿಕೊಳ್ಳುವುದು ಕಷ್ಟ. ಸಂವಿಧಾನದಲ್ಲಿ ಎಲ್ಲಾ ಅವಕಾಶವನ್ನು ನಮಗೆ ಕಲ್ಪಿಸಿದ್ದಾರೆ ನಾವು ಈ ಅವಕಾಶವನ್ನು ಉಪಯೋಗಿಸಿಕೊಂಡು ನಮ್ಮ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣವನ್ನು ಕೊಡಬೇಕು” ಎಂದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಉಡುಪಿ ಟೌನ್ ಸರ್ಕಲ್ ಇನ್ಸ್ಪೆಕ್ಟರ್ ಮಂಜಪ್ಪ, ನಾವು ಅಂಬೇಡ್ಕರ್ ಹಾಕಿಕೊಟ್ಟ ಧ್ಯೇಯ ವಾಕ್ಯಗಳಾದ ಶಿಕ್ಷಣ ಸಂಘಟನೆ ಹೋರಾಟ ಇದರ  ಮೂಲ ತತ್ವವನ್ನು ಅರಿತು ನಡೆದುಕೊಳ್ಳಬೇಕಾಗಿದೆ. ಇಂದು ನಾನು ಏನಾಗಿದ್ದೇನೋ ಅದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರೇ ಕಾರಣರು. ಹಳ್ಳಿ ಹಳ್ಳಿಗಳಲ್ಲೂ ನಾವು ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು. ನಮ್ಮ ಮಕ್ಕಳು ಅರ್ಧದಲ್ಲೇ ಡ್ರಾಪೌಟ್ ಆಗದ ಹಾಗೆ ನೋಡಿಕೊಳ್ಳಬೇಕು. ಹೆಚ್ಚಿನ ಕಡೆಗಳಲ್ಲಿ ನಮ್ಮ ಮಕ್ಕಳು ಹತ್ತನೇ ತರಗತಿಯಿಂದ ಮೇಲೆ ಹೋಗೋಲ್ಲಾ. ಆ ಮಕ್ಕಳ ಹೆತ್ತವರ ಮನವೊಲಿಸಿ ಅವರು ಶಿಕ್ಷಣ ಮುಂದುವರಿಸಿಕೊಂಡು ಹೋಗುವ ಹಾಗೆ ನಾವು ಮಾಡಬೇಕು ಎಂದರು.

ಮುಖ್ಯ ಭಾಷಣ ಕಾರರಾಗಿ ಮಾತನಾಡಿದ ವಕೀಲರು, ದಲಿತ ಮುಖಂಡರು ಆದ ಮಂಜುನಾಥ ಗಿಳಿಯಾರು, ಸ್ವಾತಂತ್ರ್ಯ ಬಂದು 75ವರ್ಷ ಕಳೆದರೂ ನಾವಿನ್ನೂ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವ ದುರ್ದೈವ ಬಂದೊದಗಿದೆ. ಈ ಹೋರಾಟ ಮಾಡಲು ನಮಗೆ ಸಂಘಟನೆಯ ಅಗತ್ಯವಿದೆ. ದಲಿತರಾದ ನಾವು ಮುಖ್ಯವಾಗಿ ಭೂ ಹೋರಾಟ ಮಾಡುವ ಅಗತ್ಯವಿದೆ. ಒಂದು ಅಂಕಿ ಅಂಶದ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ನಮಗಾಗಿಯೇ ಕಾದಿರಿಸಿದ ಡಿಸಿ ಮನ್ನಾ ಭೂಮಿಯು ಸುಮಾರು 1,600 ಎಕರೆ ಇದೆ. ಇದನ್ನು ನಮ್ಮವರಿಗೆ ಕೊಡಿಸುವ ಬಗ್ಗೆ ನಾವು ಉಡುಪಿ ಜಿಲ್ಲೆಯಲ್ಲಿ ಒಂದು ದೊಡ್ಡ ಚಳವಳಿ ರೂಪಿಸುವ ಅಗತ್ಯತೆ ಇದೆ ಎಂದರು.

ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ವಿಠಲ್ ದಾಸ್ ಬನ್ನಂಜೆ, ವಾಸುದೇವ ಮುದೂರು , ಶ್ಯಾಮಸುಂದರ್ ತೆಕ್ಕಟ್ಟೆ, ಅಣ್ಣಪ್ಪ ನಕ್ರೆ, ವಸಂತಿ ಶಿವಾನಂದ, ಸಂಪಾವತಿ, ವಿಠಲ ಉಚ್ಚಿಲ,  ಶ್ರೀನಿವಾಸ ಮಲ್ಯಾಡಿ, ಶಿವಾನಂದ ಮೂಡುಬೆಟ್ಟು, ವಾಸುದೇವ ಮಾಸ್ಟರ್,  ರಾಘವೇಂದ್ರ ಬೆಳ್ಳೆ, ವಿಠಲ ಕೆ, ಶ್ರೀಧರ್ ಕುಂಜಿಬೆಟ್ಟು, ಶಿವಾನಂದ ಬಿರ್ತಿ, ಕ್ರಷ್ಣ ಎಲ್‌ಐಸಿ ಉಪಸ್ಥಿತರಿದ್ದರು.

ಶಂಕರ್ ದಾಸ್ ಚೆಂಡ್ಕಳ ಮತ್ತು ಹರೀಶ್ಚಂದ್ರ ಅವರು ಹೋರಾಟ ಗೀತೆಗಳನ್ನು ಹಾಡಿದರು. ಭಾಸ್ಕರ ಮಾಸ್ಟರ್ ಸ್ವಾಗತಿಸಿ ಪರಮೇಶ್ವರ ಉಪ್ಪೂರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...