ಉಡುಪಿ‌ | ಜನಸೇವೆಯೇ ಅಂಬೇಡ್ಕರ್‌ರಿಗೆ ನೀಡುವ ನಿಜವಾದ ಗೌರವ : ಸುಂದರ ಮಾಸ್ತರ್

Date:

ಕಾಲಹರಣ ಮಾಡಿ ಮಾತನಾಡುವುದು ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಶೋಷಿತರ, ಬಡವರ ನೋವಿಗೆ, ಕಷ್ಟಗಳಿಗೆ ಸ್ಪಂದಿಸುವುದೇ ನಾವು ಅಂಬೇಡ್ಕರ್ ರವರಿಗೆ ಸಲ್ಲಿಸುವ ಅತೀ ದೊಡ್ಡ ಗೌರವ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಹೇಳಿದರು.

ದ.ಸಂ.ಸ. ಅಂಬೇಡ್ಕರ್ ವಾದ ಸಂಘಟನೆಗೆ ಅದರದ್ದೇ ಆದ ಮೌಲ್ಯ ಮತ್ತು ವೈವಿಧ್ಯತೆ ಇದೆ ಇಡೀ ರಾಜ್ಯದಲ್ಲಿ ಅಣ್ಣಾ ಮಾವಳ್ಳಿ ಶಂಕರ್ ನೇತ್ರತ್ವದಲ್ಲಿ ನಿಜವಾದ ದಲಿತ ಚಳುವಳಿ ನಡೆಯುತ್ತಿದೆ. ಫ್ರೋಪೆಸರ್ ಕ್ರಷ್ಣಪ್ಪ ಅವರ ಶ್ರೀಮತಿ ಇಂದಿರಾ ಕ್ರಷ್ಣಪ್ಪ ಅವರು ನಮ್ಮ ರಾಜ್ಯ ಸಮಿತಿಯಲ್ಲಿ ಇದ್ದು ಅವರ ಮಾರ್ಗದಲ್ಲಿ ನಮ್ಮ ಅಂಬೇಡ್ಕರ್ ವಾದ ಸಂಘಟನೆ ಸಾಗುತ್ತಿದೆ ಎಂದು ಬಾಬಾಸಾಹೇಬ್ ಅಂಬೇಡ್ಕರ್ ರವರ 69 ನೇ ಪರಿನಿಬ್ಬಾಣ ದಿನದಂದು ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಪರಿನಿಬ್ಬಾಣ ಕಾರ್ಯಕ್ರಮದಂದು ಗೌರವ ಸಲ್ಲಿಸಿ ನುಡಿದರು.

ಸಂಘಟನೆ ಕಟ್ಟಿ ಪ್ರಾಮಾಣಿಕ ಕೆಲಸ ಮಾಡಿ ಜನರ ವಿಶ್ವಾಸ ಗಳಿಸುವುದು ಮುಖ್ಯ, ಅದನ್ನು ನಾವು ಮಾಡೋಣಾ, ಶೋಷಿತರ ಕಷ್ಟಗಳಿಗೆ ಕೂಡಲೇ ಸ್ಪಂದಿಸಿದಾಗ ಜನರು ನಮ್ಮ ಮೇಲೆ ವಿಶ್ವಾಸ ಇಟ್ಟು ದಲಿತ ಚಳುವಳಿಗೆ ಕೈ ಜೋಡಿಸುತ್ತಾರೆ. ಆದ್ದರಿಂದಲೇ ಹಿಂದುತ್ವದ ಪ್ರಯೋಗ ಶಾಲೆಯಾದ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪೂರ್ಣ ಪ್ರಮಾಣದ ದ.ಸಂ.ಸ. ಅಂಬೇಡ್ಕರ್ ವಾದ ಶಾಖೆಯನ್ನು ತೆರೆಯಲು ಸಾಧ್ಯವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶಾದ್ಯಂತ ಪ್ರಗತಿಪರರು, ಜಾತ್ಯಾತೀತ ನಾಯಕರು, ದೇಶದ ಈ ಸ್ಥಿತಿಗೆ ಮತ್ತು ಸಂವಿಧಾನದ ಅಭದ್ರತೆಗೆ ಪ್ರತಿಕ್ರಯಿಸುತ್ತಿದ್ದಾರೆ, ಕರ್ನಾಟಕದಲ್ಲೂ ದಲಿತರು, ಶೋಷಿತರು ಆತಂಕಗೊಂಡಿದ್ದಾರೆ, ದೇಶವನ್ನು ಈ ದೀವಾಳಿ ಸ್ಥಿತಿಗೆ, ಸರ್ವಾಧಿಕಾರಿ ಧೋರಣೆಗೆ, ಬಹುತ್ವ ವಿರೋಧಿ ನೀತಿಗೆ ಎಳೆದುತಂದು ನಿಲ್ಲಿಸಿರುವ ಆರ್ ಎಸ್ ಎಸ್ ಮತ್ತು ಬಿಜೆಪಿಯ ನೀತಿಯನ್ನು ವಿರೋಧಿಸುವುದನ್ನು ಬಿಟ್ಟು ಕೆಲವೊಂದು ಸ್ವಯಂಘೋಷಿತ ದಲಿತ ನಾಯಕರು ದಲಿತ ವಿರೋಧಿಗಳೊಂದಿಗೆ, ಸಂಘ ಪರಿವಾರದವರೊಂದಿಗೆ ಶಾಮೀಲಾಗಿರುವಂತೆ ವರ್ತಿಸುತ್ತಿರುವುದು ನಮಗೆಲ್ಲಾ ಆಶ್ಚರ್ಯವನ್ನುಂಟು ಮಾಡುತ್ತಿದೆ. ನಾವೆಲ್ಲಾ ಸಮಾನ ಮನಸ್ಕರು ಅಂಬೇಡ್ಕರ್ ವಾದ ಸಂಘಟನೆಯನ್ನು ಒಂದು ನೈಜ ದಲಿತ ಚಳುವಳಿಯ ಪ್ರತಿರೂಪವಾಗಿ ಬೆಳೆಸೋಣಾ ಅದಕ್ಕಾಗಿ ನಮ್ಮ ಗ್ರಾಮ ಗ್ರಾಮಕ್ಕೆ ಹೋಗಿ ಅಂಬೇಡ್ಕರ್ ಸಿದ್ದಾಂತವನ್ನು ತಿಳಿಸೋಣ ಎಂದರು.

ಅಂಬೇಡ್ಕರ್ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಜಿಲ್ಲಾ ಸಂಘಟನಾ ಸಂಚಾಲಕರಾದ ಮಂಜುನಾಥ ನಾಗೂರು, ಬ್ರಹ್ಮಾವರ ತಾಲೂಕು ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ಬೈಂದೂರು ತಾಲೂಕು ಸಂಚಾಲಕರಾದ ಶಿವರಾಜ್ ಬೈಂದೂರು, ಸಂಘಟನೆಯ ವಿವಿಧ ಪದಾಧಿಕಾರಿಗಳಾದ ಕುಮಾರ್ ಕೋಟಾ, ವಿಜಯ ಗಿಳಿಯಾರು, ಶ್ರೀನಿವಾಸ್ ವಡ್ಡರ್ಸೆ, ಹರೀಶ್ಚಂದ್ರ ಕೆ. ಡಿ., ಬಿರ್ತಿ ಸುರೇಶ, ಸುರೇಶ ಬಾರ್ಕೂರು, ಕೃಷ್ಣ ಎಲ್ ಐ ಸಿ, ಪ್ರಕಾಶ್ ಹೇರೂರು, ದಿನೇಶ ಬಿರ್ತಿ, ಸುಧಾಮ ಹಂಗಾರಕಟ್ಟೆ, ಭಾಸ್ಕರ ಕೆರ್ಗಾಲ್, ಮತ್ತು ಬುದ್ದಿಸ್ಟ್ ಸೊಸೖಟಿ ಆಫ್ ಇಂಡಿಯಾದ ರಾಘವೇಂದ್ರ ಸಾಸ್ತಾನ, ಗೋಪಾಲಕೃಷ್ಣ ಕುಂದಾಪುರ, ವಿಠಲ ಸಾಲೀಕೇರಿ, ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...