ಕಾಲಹರಣ ಮಾಡಿ ಮಾತನಾಡುವುದು ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಶೋಷಿತರ, ಬಡವರ ನೋವಿಗೆ, ಕಷ್ಟಗಳಿಗೆ ಸ್ಪಂದಿಸುವುದೇ ನಾವು ಅಂಬೇಡ್ಕರ್ ರವರಿಗೆ ಸಲ್ಲಿಸುವ ಅತೀ ದೊಡ್ಡ ಗೌರವ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಹೇಳಿದರು.
ದ.ಸಂ.ಸ. ಅಂಬೇಡ್ಕರ್ ವಾದ ಸಂಘಟನೆಗೆ ಅದರದ್ದೇ ಆದ ಮೌಲ್ಯ ಮತ್ತು ವೈವಿಧ್ಯತೆ ಇದೆ ಇಡೀ ರಾಜ್ಯದಲ್ಲಿ ಅಣ್ಣಾ ಮಾವಳ್ಳಿ ಶಂಕರ್ ನೇತ್ರತ್ವದಲ್ಲಿ ನಿಜವಾದ ದಲಿತ ಚಳುವಳಿ ನಡೆಯುತ್ತಿದೆ. ಫ್ರೋಪೆಸರ್ ಕ್ರಷ್ಣಪ್ಪ ಅವರ ಶ್ರೀಮತಿ ಇಂದಿರಾ ಕ್ರಷ್ಣಪ್ಪ ಅವರು ನಮ್ಮ ರಾಜ್ಯ ಸಮಿತಿಯಲ್ಲಿ ಇದ್ದು ಅವರ ಮಾರ್ಗದಲ್ಲಿ ನಮ್ಮ ಅಂಬೇಡ್ಕರ್ ವಾದ ಸಂಘಟನೆ ಸಾಗುತ್ತಿದೆ ಎಂದು ಬಾಬಾಸಾಹೇಬ್ ಅಂಬೇಡ್ಕರ್ ರವರ 69 ನೇ ಪರಿನಿಬ್ಬಾಣ ದಿನದಂದು ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಪರಿನಿಬ್ಬಾಣ ಕಾರ್ಯಕ್ರಮದಂದು ಗೌರವ ಸಲ್ಲಿಸಿ ನುಡಿದರು.
ಸಂಘಟನೆ ಕಟ್ಟಿ ಪ್ರಾಮಾಣಿಕ ಕೆಲಸ ಮಾಡಿ ಜನರ ವಿಶ್ವಾಸ ಗಳಿಸುವುದು ಮುಖ್ಯ, ಅದನ್ನು ನಾವು ಮಾಡೋಣಾ, ಶೋಷಿತರ ಕಷ್ಟಗಳಿಗೆ ಕೂಡಲೇ ಸ್ಪಂದಿಸಿದಾಗ ಜನರು ನಮ್ಮ ಮೇಲೆ ವಿಶ್ವಾಸ ಇಟ್ಟು ದಲಿತ ಚಳುವಳಿಗೆ ಕೈ ಜೋಡಿಸುತ್ತಾರೆ. ಆದ್ದರಿಂದಲೇ ಹಿಂದುತ್ವದ ಪ್ರಯೋಗ ಶಾಲೆಯಾದ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪೂರ್ಣ ಪ್ರಮಾಣದ ದ.ಸಂ.ಸ. ಅಂಬೇಡ್ಕರ್ ವಾದ ಶಾಖೆಯನ್ನು ತೆರೆಯಲು ಸಾಧ್ಯವಾಯಿತು.
ದೇಶಾದ್ಯಂತ ಪ್ರಗತಿಪರರು, ಜಾತ್ಯಾತೀತ ನಾಯಕರು, ದೇಶದ ಈ ಸ್ಥಿತಿಗೆ ಮತ್ತು ಸಂವಿಧಾನದ ಅಭದ್ರತೆಗೆ ಪ್ರತಿಕ್ರಯಿಸುತ್ತಿದ್ದಾರೆ, ಕರ್ನಾಟಕದಲ್ಲೂ ದಲಿತರು, ಶೋಷಿತರು ಆತಂಕಗೊಂಡಿದ್ದಾರೆ, ದೇಶವನ್ನು ಈ ದೀವಾಳಿ ಸ್ಥಿತಿಗೆ, ಸರ್ವಾಧಿಕಾರಿ ಧೋರಣೆಗೆ, ಬಹುತ್ವ ವಿರೋಧಿ ನೀತಿಗೆ ಎಳೆದುತಂದು ನಿಲ್ಲಿಸಿರುವ ಆರ್ ಎಸ್ ಎಸ್ ಮತ್ತು ಬಿಜೆಪಿಯ ನೀತಿಯನ್ನು ವಿರೋಧಿಸುವುದನ್ನು ಬಿಟ್ಟು ಕೆಲವೊಂದು ಸ್ವಯಂಘೋಷಿತ ದಲಿತ ನಾಯಕರು ದಲಿತ ವಿರೋಧಿಗಳೊಂದಿಗೆ, ಸಂಘ ಪರಿವಾರದವರೊಂದಿಗೆ ಶಾಮೀಲಾಗಿರುವಂತೆ ವರ್ತಿಸುತ್ತಿರುವುದು ನಮಗೆಲ್ಲಾ ಆಶ್ಚರ್ಯವನ್ನುಂಟು ಮಾಡುತ್ತಿದೆ. ನಾವೆಲ್ಲಾ ಸಮಾನ ಮನಸ್ಕರು ಅಂಬೇಡ್ಕರ್ ವಾದ ಸಂಘಟನೆಯನ್ನು ಒಂದು ನೈಜ ದಲಿತ ಚಳುವಳಿಯ ಪ್ರತಿರೂಪವಾಗಿ ಬೆಳೆಸೋಣಾ ಅದಕ್ಕಾಗಿ ನಮ್ಮ ಗ್ರಾಮ ಗ್ರಾಮಕ್ಕೆ ಹೋಗಿ ಅಂಬೇಡ್ಕರ್ ಸಿದ್ದಾಂತವನ್ನು ತಿಳಿಸೋಣ ಎಂದರು.
ಅಂಬೇಡ್ಕರ್ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಜಿಲ್ಲಾ ಸಂಘಟನಾ ಸಂಚಾಲಕರಾದ ಮಂಜುನಾಥ ನಾಗೂರು, ಬ್ರಹ್ಮಾವರ ತಾಲೂಕು ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ಬೈಂದೂರು ತಾಲೂಕು ಸಂಚಾಲಕರಾದ ಶಿವರಾಜ್ ಬೈಂದೂರು, ಸಂಘಟನೆಯ ವಿವಿಧ ಪದಾಧಿಕಾರಿಗಳಾದ ಕುಮಾರ್ ಕೋಟಾ, ವಿಜಯ ಗಿಳಿಯಾರು, ಶ್ರೀನಿವಾಸ್ ವಡ್ಡರ್ಸೆ, ಹರೀಶ್ಚಂದ್ರ ಕೆ. ಡಿ., ಬಿರ್ತಿ ಸುರೇಶ, ಸುರೇಶ ಬಾರ್ಕೂರು, ಕೃಷ್ಣ ಎಲ್ ಐ ಸಿ, ಪ್ರಕಾಶ್ ಹೇರೂರು, ದಿನೇಶ ಬಿರ್ತಿ, ಸುಧಾಮ ಹಂಗಾರಕಟ್ಟೆ, ಭಾಸ್ಕರ ಕೆರ್ಗಾಲ್, ಮತ್ತು ಬುದ್ದಿಸ್ಟ್ ಸೊಸೖಟಿ ಆಫ್ ಇಂಡಿಯಾದ ರಾಘವೇಂದ್ರ ಸಾಸ್ತಾನ, ಗೋಪಾಲಕೃಷ್ಣ ಕುಂದಾಪುರ, ವಿಠಲ ಸಾಲೀಕೇರಿ, ಮೊದಲಾದವರು ಉಪಸ್ಥಿತರಿದ್ದರು.





