ಉಡುಪಿ | ಮಣಿಪುರ ಹಿಂಸಾಚಾರದ ಹಿಂದೆ ಜನಾಂಗೀಯ ದ್ವೇಷವಿದೆ: ಶಿವಸುಂದರ್

Date:

ಮಣಿಪುರದ ಇಬ್ಬರು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಕಾರಣ ಕೇವಲ ಕಾಮ ಮಾತ್ರವಲ್ಲ, ಜನಾಂಗೀಯ ದ್ವೇಷ ಕಾರಣ. ಇಂತಹ ದುರ್ಘಟನೆಗಳು ನನ್ನವರಲ್ಲದವರ ಮೇಲೆ ಸೇಡು ತೀರಿಸಿಕೊಳ್ಳುವ ಕೃತ್ಯಗಳಾಗಿವೆ ಎಂದು ಸಾಮಾಜಿಕ ಚಿಂತಕ ಶಿವಸುಂದರ್ ಹೇಳಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಉಡುಪಿಯಲ್ಲಿ ‘ಸಮಾನ ಮನಸ್ಕ ವೇದಿಕೆ’ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಮಣಿಪುರದ ಹಿಂಸಾಚಾರ ಮತ್ತು ದೌರ್ಜನ್ಯಗಳು ಆಕಸ್ಮಿಕವಲ್ಲ. ಅದರ ಹಿಂದೆ ಮತೀಯ ರಾಜಕಾರಣದ ದುರುದ್ದೇಶವಿದೆ. ಪ್ರಧಾನಿ ಮೌನವನ್ನ ಆಯುಧ ಮಾಡಿಕೊಂಡಾಗ, ನಾವು ಮಾತನ್ನು ಆಯುಧ ಮಾಡಿಕೊಳ್ಳಬೇಕು. ಮಾತನಾಡುವ ಮೂಲಕ, ಪ್ರತಿಭಟನೆಗಳನ್ನು ಮಾಡುವ ಮೂಲಕ ದೇಶವನ್ನು ಎಚ್ಚರಿಸಬೇಕು” ಎಂದು ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆ ನಡೆದಾಗ ಏನಾಯಿತು ಅಂತ ತಿಳಿದುಕೊಳ್ಳುವುದು ಮಾತ್ರವಲ್ಲ. ಯಾಕಾಯಿತು ಎಂಬುದನ್ನು ತಿಳಿದುಕೊಳ್ಳಬೇಕು. ಮೇ 4ರಂದು ನಡೆದ ದುರಂತ ಘಟನೆ ಬೆಳಕಿಗೆ ಬಂದಿದ್ದು 80 ದಿನಗಳ ಬಳಿಕ. ಇಂತಹ ನೂರಾರು ಘಟನೆಗಳು ಮಣಿಪುರದಲ್ಲಿ ನಡೆಯುತ್ತಿವೆ. ತಮ್ಮ ಮೇಲಿನ ದೌರ್ಜನ್ಯಗಳನ್ನು ನಿಲ್ಲಿಸುವಂತೆ ಮಣಿಪುರದ ಜನರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು. ಮೊದಲಿಗೆ ಸುಪ್ರೀಂ ಕೋರ್ಟ್‌ ಕೂಡ ಆ ಜನರ ಮಾತಿಗೆ ಕಿವಿಗೊಡಲಿಲ್ಲ. ಸುಪ್ರೀಂ ಕೋರ್ಟ್‌ ಒಳಗೊಂಡಂತೆ ಇಡೀ ದೇಶ ಎಚ್ಚರಗೊಳ್ಳಲು ದುರಂತ ಘಟನೆಯೇ ನಡೆಯಿತು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಂತಹ ದುರ್ಘಟನೆಗಳ ಹಿಂದೆ ಇದ್ದದ್ದು ಕೇವಲ ಕಾಮ ಮಾತ್ರವಲ್ಲ. ದ್ವೇಷ, ಅಸೂಯೆಯೂ ಇದೆ.  ಇಂತಹ ಹಲವು ಘಟನೆಗಳು ಹಿಂದೆಯೂ ನಡೆದಿವೆ. ಇದೆಲ್ಲವೂ ನನ್ನವರಲ್ಲ ಎಂಬವರ ಮೇಲೆ ಸೇಡು ತೀರಿಸಿಕೊಳ್ಳುವ ಕೃತ್ಯ. ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ನಡೆದಾಗ 900 ಮಂದಿ ಪುರುಷರು ಮೆರವಣಿಗೆ ಹೋಗುತ್ತಿದ್ದರು. ಅವರಾರಿಗೂ ಆ ಹೆಣ್ಣು ಮಕ್ಕಳ ಮೇಲೆ ‘ಅಯ್ಯೋ’ ಅನ್ನಿಸಲಿಲ್ಲ. ಇದಕ್ಕೆ ಕಾಮ ಮಾತ್ರವಲ್ಲ ಕಾರಣವಲ್ಲ. ದ್ವೇಷವೂ ಕಾರಣ. ಮಣಿಪುರದ ವಿಚಾರದಲ್ಲಿ ಪ್ರಧಾನಿಯ ಮೌನದ ಹಿಂದೆ ಇಡೀ ಸರ್ಕಾರವಿದೆ. ಮತೀಯ ರಾಜಕಾರಣವಿದೆ” ಎಂದು ಅವರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ?: ಆರಗ ಜ್ಞಾನೇಂದ್ರರಂತಹ ಅರೆ ಜ್ಞಾನಿಗಳು ಶಾಸಕರಾಗಿರುವುದೇ ದುರ್ದೈವ: ರಮೇಶ್‌ ಬಾಬು

“ಇಡೀ ಮಣಿಪುರದಲ್ಲಿ ಮೈಥೇಯಿ ಜನಾಂಗ ಪ್ರಬಲವಾಗಿದೆ. ಅವರು ಹಿಂದು ಧರ್ಮದ ಭಾಗವಾಗುವ ಮೊದಲು ಎಲ್ಲರನ್ನೂ ಒಳಗೊಳ್ಳುತ್ತಿದ್ದರು. ಆದರೆ, ಅವರು ಯಾವಾಗ ಬ್ರಾಹ್ಮಣ್ಯದ ಧರ್ಮ ಸೇರಿದರೂ, ಅಂದಿನಿಂದ ತಮ್ಮ ಸಮುದಾಯ ಅಲ್ಲವರನ್ನು ದ್ವೇಷಿಸಲು ಆರಂಭಿಸಿದರು. ಇಂದು ಅವರು ಕುಕಿ, ನಾಗ ಸಮುದಾಯಗಳನ್ನು ದ್ವೇಷಿಸುತ್ತಿದ್ದಾರೆ” ಎಂದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತೆ ಝನೇಟ್ ಬರ್ಬೋಝಾ, “ಬೊಲೊ ಭಾರತ್ ಮಾತಕಿ ಜೈ ಎಂದು ಪ್ರಧಾನಿ ನರೇಂದ್ರ ಮೋದಿಗಳು ಯಾವಾಗಲೂ ಹೇಳುತ್ತಿರುತ್ತಾರೆ. ನರೇಂದ್ರ ಮೋದಿಯವರೇ ಮಹಿಳೆಯರನ್ನು ನಗ್ನವಾಗಿ ನೆರವಣಿಗೆ ಮಾಡಿದ್ದಕ್ಕೆ ಭಾರತ್ ಮಾತಕಿ ಜೈ ಎಂದು ಕೂಗುವುದೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...