ಉಡುಪಿ | ಹಬ್ಬಗಳು ತ್ಯಾಗ ಮತ್ತು ಭ್ರಾತೃತ್ವದ ಸಂಕೇತ: ಡಾ ವಿನ್ಸೆಂಟ್ ಆಳ್ವಾ

Date:

ಪ್ರತಿಯೊಂದು ಹಬ್ಬಗಳು ಸಮಾಜದಲ್ಲಿ ಸಂತೋಷವನ್ನು ಹಂಚುತ್ತವೆ. ಕೇವಲ ಮನೆಯವರೇ ಹಬ್ಬ ಆಚರಿಸಿದರೆ ಅದು ಹಬ್ಬ ಅನಿಸುವುದಿಲ್ಲ. ಇತರರೊಂದಿಗೆ ಸೇರಿ ಆಚರಿಸಿ ಇತರರ ಮೊಗದಲ್ಲೂ ಸಂತೋಷ ಕಂಡರೆ ಮಾತ್ರ ಹಬ್ಬ ಎನಿಸುತ್ತದೆ. ಹಬ್ಬಗಳು ತ್ಯಾಗ ಮತ್ತು ಭ್ರಾತೃತ್ವದ ಸಂಕೇತವಾಗಿವೆ ಎಂದು ಕಲ್ಯಾಣಪುರ ಮಿಲಾಗ್ರೀಸ್ ಕಾಲೇಜಿನ ಪ್ರಾಂಶುಪಾಲ ಡಾ ವಿನ್ಸೆಂಟ್ ಆಳ್ವಾ ಹೇಳಿದರು.

ಉಡುಪಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಂಡಿದ್ದ ಈದ್ ಸೌಹಾರ್ದ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅತಿಥಿ ಭಾಷಣ ಮಾಡಿ, “ಕರಾವಳಿಯಲ್ಲಿ ಮುಸ್ಲಿಮರ ಕೊಡಗೆ ಬಹಳಷ್ಟಿವೆ.‌ ಹಿಂದೂ-ಮುಸ್ಲಿಂ-ಕ್ರೈಸ್ತರು ಎಲ್ಲರೂ ಸೌಹಾರ್ದತೆಯಿಂದ ಬದುಕು ಕಾಣಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಕುಂಞಿ ಮಾತನಾಡಿ, “ಜನಾಂಗೀಯತೆ ಎಂಬುದು ಇರಬಾರದು. ನಾನು ಶ್ರೇಷ್ಟ ನೀನು ಕನಿಷ್ಟ ಎಂಬ ಭಾವನೆ ಯಾವಾಗ ನಮ್ಮಲ್ಲಿ ಮೂಡುತ್ತದೆಯೋ ಆಗ ಜನಾಂಗೀಯತೆ ಬೆಳೆಯುತ್ತದೆ. ಅದರ ಬದಲಾಗಿ ನಾವೆಲ್ಲರೂ ಮಾನವರು ಪರಸ್ಪರ ಸಹೋದರರೆಂಬ ಭಾವನೆ ಸದಾ ನಮ್ಮಲ್ಲಿ ಇರಬೇಕಾಗಿದೆ. ಜಗತ್ತಿನುದ್ದಕ್ಕೂ ನಮ್ಮ ಹಿರಿಯರ ತ್ಯಾಗ ಬಲಿದಾನದಿಂದ ನಾವು ಈವರೆಗೆ ತಲುಪಿದ್ದೇವೆ. ಯಾರಾದರೂ ಏನಾದರೂ ಪಡೆಯಬೇಕಿದ್ದರೆ ಅದಕ್ಕೆ ಪರಿಶ್ರಮ ಮತ್ತು ತ್ಯಾಗ ಅತ್ಯಗತ್ಯವಾಗಿದೆ. ತ್ಯಾಗ ಅಥವಾ ಬಲಿದಾನ ಮಾಡದಿದ್ದರೆ ಅದರಲ್ಲಿ ಜಯ ಎನ್ನುವುದೇ ಸಿಗುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯ

ಜಮಾಅತೆ ಇಸ್ಲಾಮೀ ಹಿಂದ್ ಸ್ಥಾನೀಯ ಅಧ್ಯಕ್ಷ ನಿಸಾರ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ವಿಭಾಗದ ಸಂಚಾಲಕಿ ವಾಜಿದಾ ತಬಸ್ಸುಮ್ ಧನ್ಯವಾದ ತಿಳಿಸಿದರು. ಸರ್ಪರಾಜ್ ಮನ್ನ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...