ಉಡುಪಿ | ಕೃಷಿ ಯಂತ್ರೋಪಕರಣ ಭ್ರಷ್ಟಾಚಾರ, ಕಾಡುಪ್ರಾಣಿ ಹಾವಳಿ, ರೈತರ ಪ್ರತಿಭಟನೆ

Date:

ಉಡುಪಿ ಜಿಲ್ಲೆಯ ಕೃಷಿಕರು ಎದುರಿಸುತ್ತಿರುವ ಸಂಕಷ್ಟ ಹಾಗೂ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ರೈತರು ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ರಾಮಕೃಷ್ಮ ಶರ್ಮಾ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಿಂದ ಸಹಾಯಧನ ರೂಪದಲ್ಲಿ ದೊರೆಯುವ ಕೃಷಿ ಯಂತ್ರೋಪಕರಣಗಳ ಖರೀದಿಯಲ್ಲಿನ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇದರಿಂದ ರೈತರಿಗೆ ಯಾವುದೇ ಪ್ರಯೋಜನ ಸಿಗುತ್ತಿಲ್ಲ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾಡು ಪ್ರಾಣಿಗಳ ಹಾವಳಿಯಿಂದ ಜಿಲ್ಲೆಯಲ್ಲಿ ಯಾವುದೇ ಬೆಳೆ ಬೆಳೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಉಂಟಾಗಿದೆ. ಇವುಗಳು ಯಾವುದಕ್ಕೂ ಹೆದರದೆ ಬೆಳೆಗಳನ್ನು ಹಾನಿ ಮಾಡುತ್ತಿದೆ. ಆದುದರಿಂದ ಸರಕಾರ ಈ ಬಗ್ಗೆ ಮಂಕಿ ಪಾರ್ಕ್, ಕಾಡು ಬೆಳೆಸಿ ಪ್ರಾಣಿಗಳು ನಾಡಿಗೆ ಬಾರದಂತೆ ಮಾಡುವ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಾದಿ ಕಾಲದಿಂದ ಅನುಭವಿಸಿಕೊಂಡು ಬರುತ್ತಿರುವ ರೈತರ ಕುಮ್ಕಿ ಹಕ್ಕನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸದೆ ರೈತರಿಗೆ ನೀಡಬೇಕು. ಮುಂಗಾರು ಹಂಗಾಮಿನ ಭತ್ತವನ್ನು ಅಕ್ಟೋಬರ್ನಿಂದ ಪ್ರಾರಂಭಿಸಿ, ವರ್ಷಪೂರ್ತಿ ಬೆಂಬಲ ಬೆಲೆಯಲ್ಲಿ ಖರೀದಿಸುವ ವ್ಯವಸ್ಥೆ ಮಾಡಬೇಕು. ಉಳಿದ ಬೆಳೆಗಳಿಗೂ ಬೆಂಬಲ ಬೆಲೆ ನೀಡುವ ಕ್ರಮಗಳನ್ನು ನಮ್ಮ ಜಿಲ್ಲೆಯಲ್ಲೂ ಆರಂಭಿಸಬೇಕು ಎಂದರು.

ಭತ್ತ ನಾಟಿ/ಕಟಾವು ಸಮಯದಲ್ಲಿ ಕೃಷಿಕರಿಗೆ ಯಂತ್ರೋಪಕರಣಗಳ ಕೊರತೆ ನೀಗಿಸಲು ಬೇರೆ ಜಿಲ್ಲೆಗಳ, ಯಂತ್ರಧಾರೆ ಯೋಜನೆ ಯಂತ್ರಗಳನ್ನು ನಿಗದಿತ ದರದಲ್ಲೇ ನಮ್ಮ ಜಿಲ್ಲೆಗೆ ತರಿಸುವ ವ್ಯವಸ್ಥೆಗಳಾಗಬೇಕು. ಬೆಳೆ ವಿಮೆ ನಿಯಮಗಳನ್ನು ಸರಳಗೊಳಿಸಬೇಕು ಮತ್ತು ಎಲ್ಲಾ ಬೆಳೆಗಳಿಗೂ ವಿಮೆಯನ್ನು ವಿಸ್ತರಿಸಬೇಕು. ಬೆಳೆವಿಮೆಯು ಬೆಲೆ ಹಾಗೂ ನಷ್ಟದ ಮೊತ್ತವನ್ನು ಒಳಗೊಂಡಿರಬೇಕು. ಕೃಷಿಕರಿಗೆ ಈಗ ನೀಡುತ್ತಿರುವ ಪ್ರಾಕೃತಿಕ ವಿಕೋಪ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು.

ಕಿಂಡಿ ಅಣೆಕಟ್ಟು ನೀರಿನ ನಿರ್ವಹಣೆ, ಮದಗಗಳ ಹೂಳೆತ್ತುವುದು ಸಮರ್ಪಕವಾಗಿ ನಿರ್ದಿಷ್ಟ ಸಮಯದೊಳಗೆ ನಿರ್ವಹಿಸುವ ವ್ಯವಸ್ಥೆಗಳಾಗಬೇಕು. ಸರಕಾರ ನೀರಾವರಿ ಸಹಿತ ಯಾವುದೇ ಯೋಜನೆಗಳನ್ನು ರೂಪಿಸುವಾಗ ರೈತರೊಂದಿಗೆ ಸಮಾಲೋಚಿಸಿ ಜಾರಿಗೆ ತರಬೇಕು. ಜಿಲ್ಲೆಯಲ್ಲಿ ಹೊಳೆಗಳನ್ನು ಪುರಜ್ಜೀವನಗೊಳಿಸಿ ನೈಸರ್ಗಿಕ ಸ್ವಚ್ಛ ನೀರಿನ ಹೊಳೆ ಯಾಗಿಸಬೇಕು ಎಂದು ಅವರು ಒತ್ತಾಯಿಸಿದರು.

ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ನೀಡಲಾಯಿತು. ಮನವಿಯನ್ನು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಪೂರ್ಣಿಮಾ ಸ್ವೀಕರಿಸಿದರು. ರೈತರ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನಕ್ಕೆ ತರಲಾಗುವುದು. ಅಪಘಾತ, ಅವಘಡಗಳಲ್ಲಿ ಮೃತಪಟ್ಟ ಎಲ್ಲ ಪ್ರಕರಣಗಳನ್ನು ಸರಕಾರಕ್ಕೆ ಕಳುಹಿಸಲಾಗಿದ್ದು, ಶೀಘ್ರ ಪರಿಹಾರ ನೀಡಲಾಗುವುದು ಎಂದರು.

ಧರಣಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಭಟ್ ಕುದಿ, ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು, ಉಪಾಧ್ಯಕ್ಷ ಶ್ರೀನಿವಾಸ ಬಲ್ಲಾಳ್, ಪ್ರಮುಖರಾದ ದಿನೇಶ್ ಶೆಟ್ಟಿ ಹೆರ್ಗ, ಶಶಿಧರ ರಾವ್ ಪೆರಂಪಳ್ಳಿ, ಸುಬ್ರಹ್ಮಣ್ಯ ಶ್ರಿಯಾನ್ ಪೆರಂಪಳ್ಳಿ, ರವೀಂದ್ರ ಪೂಜಾರಿ ಶಿಂಬ್ರಾ, ಚಂದ್ರ ಶೇಖರ್, ಭಾರತಿ ಶೆಟ್ಟಿ ಅಂಜಾರು, ಶಾಂತಿ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...