ಉಡುಪಿ | ಜನರ ಹಕ್ಕನ್ನು ಖಚಿತಪಡಿಸುವ ಉಚಿತ ಯೋಜನೆಗಳು ಬಿಟ್ಟಿಯಲ್ಲ: ಎಚ್ ವಿ ವಾಸು

Date:

ತಮಿಳುನಾಡಿನಲ್ಲಿ ಸರ್ಕಾರ ಅತಿ ಹೆಚ್ಚು ಮಹಿಳೆಯರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಅಲ್ಲಿಯ ಜನರು ಎಷ್ಟು ಮಂದಿ ಸೋಮಾರಿಗಳಾಗಿದ್ದಾರೆ? ಉಚಿತ ಯೋಜನೆಗಳನ್ನು ನೀಡುವುದರಿಂದ ಜನರು ಸೋಮಾರಿಗಳಾಗುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು. ಅದೇ ರೀತಿ ದೇಶ ದಿವಾಳಿ ಆಗುತ್ತದೆ ಎಂಬುದು ಕೂಡ ಸುಳ್ಳು. ಇಂತಹ‌ ಸುಳ್ಳುಗಳನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ, ಈದಿನ.ಕಾಮ್‌ ಮುಖ್ಯಸ್ಥ ಡಾ. ಎಚ್‌.ವಿ ವಾಸು ಹೇಳಿದ್ದಾರೆ.

ಉಡುಪಿಯಲ್ಲಿ ನಡೆದ ‘ಜನರ ಹಕ್ಕುನ್ನು ಖಚಿತಪಡಿಸುವ ಉಚಿತ ಯೋಜನೆಗಳು ಬಿಟ್ಟಿಯಲ್ಲ’ ಎಂಬ ವಿಷಯದ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಅದರ ಬೆನ್ನಲ್ಲೇ ವಿರೋಧ ಪಕ್ಷಗಳು ‘ಉಚಿತ ಯೋಜನೆಗಳಿಂದ ದೇಶ ದಿವಾಳಿ ಆಗುತ್ತದೆ’ ಎಂದು ಹೇಳುತ್ತಿವೆ. ಆದರೆ, ರಾಜ್ಯ ಸರ್ಕಾರದ ಉಚಿತ ಯೋಜನೆಗಳಿಂದ ನಿಜವಾಗಿಯೂ ದೇಶ ದಿವಾಳಿ ಆಗುತ್ತಾ ಎಂಬುದರ ಕುರಿತು ಅರ್ಥಶಾಸ್ತ್ರರು ಏನು ಹೇಳಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ನಂತರ ಅದರ ಬಗ್ಗೆ ಮಾತನಾಡಬೇಕು. ಕೇವಲ ವಾಟ್ಸಾಪ್‌ನಲ್ಲಿ ಬಂದ ಸುಳ್ಳು ಸುದ್ದಿಗಳನ್ನು ಓದಿ, ಅದನ್ನೇ ನಂಬಿಕೊಂಡು ಮಾತನಾಡಬಾರದು” ಎಂದರು.

ಸಹಬಾಳ್ವೆ ಉಡುಪಿಯ ಸಂಚಾಲಕ ಪ್ರಶಾಂತ್ ಜತ್ತನ್ನ ಮಾತನಾಡಿ, “ಸರ್ಕಾರದ ಎಲ್ಲ ಯೋಜನೆಗಳು ಬಡವರ ಪರವಾಗಿದ್ದು, ಅದನ್ನು ಅರ್ಹ ಬಡವರಿಗೆ ತಲುಪಬೇಕು. ಆಗ ಮಾತ್ರ ರಾಜ್ಯ ಸರ್ಕಾರದ ಯೋಜನೆಗಳು ಸರಿಯಾದ ರೀತಿಯಲ್ಲಿ ಪ್ರಯೋಜನಕಾರಿ ಆಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಈದಿನ.ಕಾಮ್‌ನ ಉಮರ್ ಯು ಹೆಚ್, ಪಂಚಾಯತ್ ರಾಜ್‌ನ ತರಭೇತಿದಾರ ಜಯಂತ್ ರಾವ್, ಸಹಬಾಳ್ವೆ ಉಡುಪಿಯ ವಿರೋನಿಕ ಕರ್ನೇಲಿಯೋ, ಯಾಸೀನ್ ಮಲ್ಪೆ, ನಾಗೇಶ್ ಉದ್ಯಾವರ್, ಫಾದರ್ ವಿಲಿಯಂ ಮಾರ್ಟಿಸ್, ಹುಸೇನ್ ಕೋಡಿಬೆಂಗ್ರೆ, ಅಜೀಝ್ ಉದ್ಯಾವರ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...