ಉಡುಪಿ | ಯಾವುದೇ ಚಟುವಟಿಕೆಯಿಲ್ಲದೆ ಮದ್ಯಪಾನಿಗಳ ತಾಣವಾದ ಗಾಂಧಿ ಭವನ

Date:

1985ರಲ್ಲಿ ಉಡುಪಿಯಲ್ಲಿ ನಿರ್ಮಿಸಿದ್ದ ಗಾಂಧಿ ಭವನಕ್ಕೆ ಈಗ 39 ವರ್ಷ ತುಂಬಿದರೂ ಕೂಡ ಗಾಂಧಿ ಭವನ ಮಾತ್ರ ಅನೈತಿಕ ಚಟುವಟಿಕೆ ಮತ್ತು ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ. 1985ರಲ್ಲಿ ಅಂದಿನ ನಗರಾಭಿವೃದ್ದಿ ಸಚಿವ ಲಕ್ಷ್ಮೀ ಸಾಗರ್ ಅವರು ಗಾಂಧಿ ಭವನದ ಉದ್ಘಾಟನೆಯನ್ನು ನೆರವೇರಿಸಿದ್ದರು. 14 ವರ್ಷಗಳ ಹಿಂದೆ ಗಾಂಧಿ ಭವನಕ್ಕೆ ₹2 ಲಕ್ಷ ವೆಚ್ಚದಲ್ಲಿ ಪೀಠೋಪಕರಣ ಅಳವಡಿಸಿ, ಕಿಟಕಿ ಬಾಗಿಲು ದುರಸ್ತಿ ಮಾಡಲಾಗಿತ್ತು. ₹4 ಲಕ್ಷ ವೆಚ್ಚದಲ್ಲಿ ಮಾರ್ಬಲ್‌ ನೆಲಹಾಸು ಇನ್ನಿತರ ದುರಸ್ತಿ ಕೆಲಸ ನಡೆದಿತ್ತು. ಆ ಬಳಿಕ 2016- 17ರಲ್ಲಿ ಆಧಾರ್ ನೋಂದಣಿ ಕಾರ್ಯ ನಡೆಯುತ್ತಿತ್ತು. ಸ್ವಲ್ಪ ದಿನಗಳ ಬಳಿಕ ತಾಂತ್ರಿಕ ಸಮಸ್ಯೆ ಕಾರಣದಿಂದ ಅಂದು ಮುಚ್ಚಿದ್ದ ಗಾಂಧಿಭವನ ಈಗಲೂ ಮುಚ್ಚಿಯೇ ಇದೆ.

ಶಿಥಿಲಾವಸ್ಥೆಗೆ ತಲುಪಿರುವ ಗಾಂಧಿ ಭವನದ ಸಿಮೆಂಟ್ ಶೀಟ್‌ಗಳು ಬಿರುಕು ಬಿಟ್ಟಿದ್ದು, ಕೆಲ ಭಾಗದಲ್ಲಿ ಕಟ್ಟಡದ ಮೇಲ್ಬಾವಣಿಯ ಶೀಟುಗಳು ನೆಲಕ್ಕುರುಳುವ ಸ್ಥಿತಿಯಲ್ಲಿವೆ. ಕಿಟಕಿ ಬಾಗಿಲುಗಳು ಮುರಿದುಕೊಂಡು ಬಿದ್ದಿವೆ. ಶೌಚಾಲಯ ಹದಗೆಟ್ಟಿದ್ದು, ಕಟ್ಟಡದ ಆವರಣ ಜಾನುವಾರುಗಳ ವಾಸಸ್ಥಾನವಾಗಿದೆ. ಕಟ್ಟಡದ ಸುತ್ತ ಗಿಡಗಂಟಿ, ಹುಲ್ಲಿನ ಪೊದೆ ಬೆಳೆದು ನಿಂತಿದೆ. ಅಪರಿಚಿತರು ಮದ್ಯದ ಬಾಟಲಿ, ತ್ಯಾಜ್ಯವನ್ನು ಎಸೆದಿದ್ದಾರೆ.

ಉಡುಪಿ ಗಾಂಧಿ ಭವನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ರಸ್ತೆ ಬದಿಯಿಂದ ಕಂಡರೆ ಗಾಂಧಿ ಭವನ ಎಲ್ಲಿದೆ ಎಂದು ಗುರುತಿಸುವುದು ಕಷ್ಟ. ಸಮರ್ಪಕ ನಿರ್ವಹಣೆ ಇಲ್ಲದೆ ಕಟ್ಟಡ ಸಂಪೂರ್ಣ ದುಃಸ್ಥಿತಿಗೆ ತಲುಪಿದೆ. ಕಟ್ಟಡವನ್ನು ಉಪಯೋಗ ಶೂನ್ಯ ಸ್ಥಿತಿಯಲ್ಲಿ ಬಿಡುವುದಕ್ಕಿಂತ ಆಧುನಿಕ ಶೈಲಿಯಲ್ಲಿ ಸುಸಜ್ಜಿತಗೊಳಿಸಿದರೆ ಸರ್ಕಾರ, ಸಂಘ ಸಂಸ್ಥೆಯ ಸಭೆ, ಸಮಾರಂಭ, ಸಾಂಸ್ಕೃತಿಕ, ತರಬೇತಿ ಕಾರ್ಯಕ್ರಮ ನಡೆಸಬಹುದು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮುತುವರ್ಜಿ ವಹಿಸಬೇಕೆಂಬ ಆಗ್ರಹ ಕೇಳಿಬರುತ್ತಿವೆ.

ಸಾರ್ವಜನಿಕರು ಹೇಳುವ ಪ್ರಕಾರ, “ಹಿಂದೆ ಒಮ್ಮೆ ಈ ಗಾಂಧಿ ಭವನವು ಆಧಾರ್ ಕೇಂದ್ರವಾಗಿದ್ದು ಹಾಗೂ ಅಡಿಷನಲ್ ನ್ಯಾಯಾಲಯ ಆಗಿತ್ತು. ಆರು ತಿಂಗಳ ಹಿಂದೆ ಇಲ್ಲಿ ಕಳ್ಳತನ ಆಗಿದ್ದು, ಮಾಧ್ಯಮಗಳಲ್ಲಿಯೂ ಬಿತ್ತರವಾಗಿದೆ. ಹಿಂದಿನ ಬಾಗಿಲು ಮುರಿದಿದ್ದರು ಯಾರೂ ಕೇಳುವರಿಲ್ಲ.‌ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಇದ್ದರೂ ಕೂಡ ಕುಡುಕರ ತಾಣವಾಗಿದೆ ಮಾರ್ಪಟ್ಟಿದೆ” ಎಂದು ದೂರಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸುರೇಂದ್ರ ಉಡುಪಿ ಈ ದಿನ.ಕಾಮ್‌ನೊಂದಿಗೆ ಮಾತಾನಾಡಿ, “ಬನ್ನಂಜೆಯ ಕೆಎಸ್‌ಆರ್‌ಟಿಸಿ ಹೊಸ ಬಸ್ ಸ್ಟ್ಯಾಂಡ್ ಬಳಿ ಎಸ್‌ಪಿ ಕಚೇರಿಯ ಮುಂಭಾಗದಲ್ಲಿರುವ ಗಾಂಧಿ ಭವನ ಯಾವುದೇ ನಿರ್ವಹಣೆ ಇಲ್ಲದೆ ಅನೈತಿಕತೆಯ ತಾಣವಾಗಿದೆ. ಊರೆಲ್ಲಾ ಬಿಗಿ ಬಂದೋಬಸ್ತ್ ಮಾಡುವ ಎಸ್‌ಪಿ ಕಚೇರಿಯ ಮುಂಭಾಗವೇ ಅನೈತಿಕ ಚಟುವಟಿಕೆಯ ತಾಣವಾಗಿ ಕಾರ್ಯನಿರ್ವಹಿಸುತ್ತಿದೆ. ರಾತ್ರಿ ಹೊತ್ತು ಈ ಗಾಂಧಿ ಭವನದಲ್ಲಿ ಮಧ್ಯಪಾನಿಗಳು ಬಂದು ಹೋಗಿ ಈ ತಾಣವೇ ಕೊಳಕು ತಾಣವಾಗಿ ಮಾರ್ಪಾಡಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಇದನ್ನು ಸಾರ್ವಜನಿಕರಿಗೆ ಬಾಡಿಗೆ ರೂಪದಲ್ಲಿ ನೀಡಿ ಅಂಗಡಿ ಮುಂಗಟ್ಟನ್ನು ಸ್ಥಾಪಿಸಿದರೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬಹುದು” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ತುಮಕೂರು | ರಮಾಕುಮಾರಿ ರಾಜಕಾರಣಕ್ಕೆ ಬರಬೇಕು: ಮಲ್ಲಿಕಾ ಬಸವರಾಜು

ಈ ದಿನ.ಕಾಮ್ ಜತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್, “ಗಾಂಧಿ ಭವನ ಸುಮಾರು ವರ್ಷಗಳಿಂದ ಯಾವುದೇ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿದೆ. ಕೆಲವು ತಿಂಗಳ ಹಿಂದೆ ಸ್ವಲ್ಪ ಸಮಯ ಆಧಾರ್ ಕೇಂದ್ರವಾಗಿ ಕಾರ್ಯ ನಿರ್ವಹಿಸಿತು. ಇದೀಗ‌ ಅದೇ ರೀತಿಯಲ್ಲಿ ಕುಡುಕ ತಾಣವಾಗಿ ಮಾರ್ಪಟ್ಟಿದೆ. ಗಾಂಧಿ ಭನವದ ಮುಂದೆಯೇ ನೂತನವಾಗಿ ಉಡುಪಿ ಬಸ್ ನಿಲ್ದಾಣ ಆರಂಭವಾಗಿದೆ. ‌ಪ್ರತಿದಿನ ಸಾವಿರಾರು ಜನರು ಪ್ರಯಾಣಿಕರಾಗಿ ಜಿಲ್ಲೆಗೆ ಆಗಮಿಸುತ್ತಾರೆ. ಅವರಿಗೆ ಉಪಯೋಗ ಆಗುವ ರೀತಿಯಲ್ಲಿ ವಿಶ್ರಾಂತಿ ತಾಣ ಅಥವಾ ಲಗೇಜ್ ರೂಂ ಆಗಿ ಪರಿವರ್ತಿಸಬಹುದು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಇಲ್ಲದಿದ್ದರೆ ಸರ್ಕಾರದ ಗೃಹ ಜ್ಯೋತಿ, ಗೃಹಲಕ್ಷಿಗಳಂತಹ ಯೋಜನೆಗಳ ಕುಂದು ಕೊರತೆಗಳನ್ನು ನೀಗಿಸಲು ಸಲಹಾ ಕೇಂದ್ರವಾಗಿ ಕೂಡ ಮಾಡಬಹುದು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು” ಎಂದು ಹೇಳಿದರು.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...