ಉಡುಪಿ | ಗಾಂಧೀಜಿಯವರ ಹಿಂದುತ್ವ ಬಹುತ್ವದ ಕಲ್ಪನೆ ಹೊಂದಿತ್ತು: ಡಾ. ನಿಕೇತನ

Date:

ಗಾಂಧೀಜಿ ಅವರ ಚಿಂತನೆಗಳು, ಅವರು ಪ್ರತಿಪಾದಿಸಿದ್ದ ಹಿಂದುತ್ವದಲ್ಲಿನ ಬಹುತ್ವ ಕಲ್ಪನೆಯನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ನಿತ್ಯವೂ ಅವರ ಚಿಂತನೆಯನ್ನು ಅವಲೋಕಿಸಿ, ಪ್ರಸ್ತುತತೆಯನ್ನು ಮನಗಂಡು ರೂಡಿಸಿಕೊಳ್ಳುವ ಅಗತ್ಯತೆ ಮತ್ತು ಅನಿವಾರ್ಯತೆ ಇದೆ ಎಂದು ಪ್ರಾಧ್ಯಾಪಕ ಡಾ. ನಿಕೇತನ್ ಹೇಳಿದರು.

ಉಡುಪಿಯಲ್ಲಿ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಗಾಂಧೀಜಿಯವರ ಹಿಂದು ಧರ್ಮದ ಕಲ್ಪನೆ ಎಲ್ಲ ಧರ್ಮದ ದೇವರನ್ನು ಎಲ್ಲ ಸಂಸ್ಕೃತಿಯನ್ನು ಒಳಗೊಳ್ಳುವ ಬಹುತ್ವದ ಕಲ್ಪನೆಯಾಗಿದೆ. ಗಾಂಧಿ ಸಿದ್ಧಾಂತದ ಒಳಗೆ ಅಂತರಂಗದ ಕ್ರಾಂತಿ ಇತ್ತು. ‘ನಾವು ಸಾಮಾಜಿಕವಾಗಿ ಮಾಡುವ ಕ್ರಾಂತಿ ಮೊದಲು ಅಂತರಂಗದಲ್ಲಿ ಹುಟ್ಟಬೇಕು. ಇಲ್ಲವಾದಲ್ಲಿ ಕ್ರಾಂತಿ ವಿಫಲವಾಗುತ್ತದೆ’ ಎಂದು ಗಾಂಧೀಜಿ ಹೇಳಿದ್ದರು. ಆದರೆ, ಗಾಂಧೀಜಿಯವರನ್ನು ಅಪ್ರಸ್ತುತರಾಗಿಸುವ ಷಡ್ಯಂತ್ರ ನಡೆಯುತ್ತಿದೆ” ಎಂದರು.

“ಗಾಂಧೀಜಿಯವರ ರಾಮ ರಾಜ್ಯದ ಹಿಂದಿರುವ ಕಲ್ಪನೆ ಶಾಂತಿ, ಪ್ರೀತಿ, ಅಹಿಂಸೆಯಾಗಿದೆ. ಅವರು ಪ್ರತಿಪಾದಿಸಿದ ಬಹುತ್ವ ಭಾರತದ ಕಲ್ಪನೆ, ಗ್ರಾಮ ಸ್ವರಾಜ್ಯ, ಅಸ್ಪೃಶ್ಯತೆ ನಿವಾರಣೆ, ಅಹಿಂಸೆ ಇದರಿಂದಲೇ ನಾವು ಇಂದಿನ ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದು. ಗಾಂಧೀಜಿಯವರ ಜೀವನದ ಬಗ್ಗೆ ಪ್ರಕಟವಾದ ಸಾಹಿತ್ಯ, ಜಗತ್ತಿನ ಬೇರೆ ಯಾವ ವ್ಯಕ್ತಿಯ ಬಗ್ಗೆಯೂ ಪ್ರಕಟವಾಗಿಲ್ಲ. ಗಾಂಧಿ ಹತ್ಯೆಯಾದ ದಿನ ನೆಹರೂರವರು ‘ಇಂದು ದೇಶದಲ್ಲಿ ಕತ್ತಲು ತುಂಬಿದೆ’ ಎಂದಿದ್ದರು. ಕತ್ತಲೆಯನ್ನ ಓಡಿಸುವುದಕ್ಕೆ ಗಾಂಧಿ ಚಿಂತನೆಗಳು ಮುನ್ನಲೆಗೆ ಬರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, “ಗಾಂಧಿ ಹತ್ಯೆಯ ಹಿಂದಿರುವ ಷಡ್ಯಂತ್ರ, ರಾಜಕೀಯವನ್ನು ಅನಾವರಣಗೊಳಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಸಂದೀಪ್, ಸಾರ್ವಜನಿಕ ಹಿಂದೂ ರುದ್ರ ಭೂಮಿ ನಿರ್ವಹಣಾ ಪ್ರತಿಷ್ಠಾನ (ರ)ಅಧ್ಯಕ್ಷ ಗಿರೀಶ್ ಕುಮಾರ್ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ತಿಲಕ್ ರಾಜ್ ಸಾಲಿಯಾನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಬಿದ್ ಆಲಿ ವಂದಿಸಿದರು. ಮಾಜಿ ಅಧ್ಯಕ್ಷ ರಿಯಾಜ್ ಪಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...