ಉಡುಪಿ | ಜಿಲ್ಲೆಯಲ್ಲಿ ಕ್ರೈಸ್ತ ಬಾಂಧವರಿಂದ ಶ್ರದ್ಧಾಭಕ್ತಿಯಿಂದ ಪವಿತ್ರ ಗುರುವಾರದ ಆಚರಣೆ

Date:

ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರದ ಆಚರಣೆಯಲ್ಲಿ ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ದೆ ಹಾಗೂ ಭಕ್ತಿಯಿಂದ ಆಚರಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್ ಚರ್ಚ್ನಲ್ಲಿ ಧರ್ಮಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಚರ್ಚಿನ ಪ್ರಧಾನ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯ ಧರ್ಮಗುರು ವಂ|ಪ್ರದೀಪ್ ಕಾರ್ಡೊಜಾ, ವಂ|ಡಾ|ಜೆನ್ಸಿಲ್ ಆಲ್ವಾ, ಧರ್ಮಪ್ರಾಂತ್ಯದ ಕುಲಪತಿ ವಂ|ಸ್ಟೀಫನ್ ಡಿಸೋಜಾ, ಕಟಪಾಡಿ ಹೋಲಿ ಕ್ರೊಸ್ ಸಂಸ್ಥೆಯ ನಿರ್ದೇಶಕ ವಂ|ರೋನ್ಸನ್ ಡಿಸೋಜಾ, ಪಿಲಾರ್ ಫಾದರ್ಸ್ ಸಂಸ್ಥೆಯ ನಿರ್ದೇಶಕ ವಂ|ಮನೋಜ್ ಫುರ್ಟಾಡೊ ಉಪಸ್ಥಿತರಿದ್ದರು
ಪವಿತ್ರ ಗುರುವಾರದಂದು ಯೇಸು ಹನ್ನೆರಡು ಮಂದಿ ಶಿಷ್ಯರೊಂದಿಗೆ ಸೇರಿ ಕೊನೆಯ ಭೋಜನ ಮಾಡಿದ್ದರು.

ಈ ವೇಳೆ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ಶಿಷ್ಯರಿಗೆ ದೀನತೆಯ ಹಾಗೂ ಸೇವೆಯ ಸಂದೇಶ ಸಾರಿದ್ದರು. ಅದರ ಧ್ಯೋತಕವಾಗಿ ಬಲಿಪೂಜೆಯ ವೇಳೆ ಧರ್ಮಾಧ್ಯಕ್ಷರಾದ ಜೆರಾಲ್ಡ್ ಐಸಾಕ್ ಲೋಬೊ 12 ಮಂದಿ ಪ್ರೇಷಿತರ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರೀತಿಯ ಸಂದೇಶವನ್ನು ನೀಡಿದರು.
ತಮ್ಮ ಸಂದೇಶದಲ್ಲಿ ಬಿಷಪ್ ಜೆರಾಲ್ಡ್ ಲೋಬೊ ಮಾತನಾಡಿ ಪವಿತ್ರ ಗುರುವಾರ, ಪ್ರಭುವಿನ ಭೋಜನ, ಸೇವೆ ಮತ್ತು ಪ್ರೀತಿಯ ಸಂಕೇತವಾಗಿ ನೆನಪಿಸಿಕೊಳ್ಳಲಾಗುತ್ತದೆ. ಈ ದಿನದ ಮಹತ್ವವನ್ನುಅರ್ಥ ಮಾಡಿಕೊಳ್ಳುವಾಗ ನಮ್ಮ ಮನಸ್ಸುಯೇಸು ನೀಡಿದ ನಿಜವಾದ ಸೇವೆಯ ಬೋಧನೆಗಳತ್ತ ಸೆಳೆಯಲ್ಪಡುತ್ತದೆ. ಪವಿತ್ರ ಗುರುವಾರ ಕೇವಲ ಆರಾಧನೆಯ ದಿನವಲ್ಲ. ಇದು ಮಾನವೀಯ ಮೌಲ್ಯಗಳನ್ನು, ಬಾಳಿನಲ್ಲಿ ಜೀವಿಸುವ ವಿಶೇಷ ಕ್ಷಣವಾಗಿದೆ.
ಯೇಸು ತನ್ನಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ಅನುಕರಣೇಯ ಸೇವೆಯನ್ನು ಮಾಡಿದಂತೆ ನಾವೂ ಕೂಡಾ ಪ್ರತಿದಿನ ಬದುಕಿನಲ್ಲಿ ವಿನಮ್ರತೆಯಿಂದ ಇತರರಿಗೆ ನೆರವಾಗುವ, ಮನೋಭಾವವನ್ನು ಬೆಳೆಸಬೇಕು. ಯೇಸು ನೀಡಿದ ಆಜ್ಞೆಯಂತೆ: “ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿ” ಎಂಬಂತೆ ನಾವೂ ನಮ್ಮನ್ನು ದ್ವೇಷಿಸುವವರನ್ನು, ಹಿಂಸಿಸುವವರನ್ನು, ವೈರಿಗಳನ್ನು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಮ್ಮ ಮೇಲೆ ಹೊರಿಸುವವರನ್ನು ಪ್ರೀತಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ ನಾವೂ ಪ್ರಭುವಿನ ಅಂತಿಮ ಭೋಜನವನ್ನು ಸ್ಮರಿಸುತ್ತೇವೆ. ಯೇಸುವೇ ನಿಜವಾದ ಜೀವದಾಯಕ ರೊಟ್ಟಿ. ನಮಗಾಗಿ ಮುರಿಯಲ್ಪಟ್ಟ ಶರೀರ ಹಾಗೂ ಸುರಿಯಲ್ಪಟ್ಟರಕ್ತ. ಯೇಸುಕ್ರಿಸ್ತನು ತನ್ನದೇ ದೇಹ ರಕ್ತ ಆತ್ಮ ದಿವ್ಯತೆಯನ್ನು ಸಂಪೂರ್ಣವಾಗಿ ಅರ್ಪಿಸಿ ನಾವು ಲೋಕದಲ್ಲಿ ಅವನ ಸಾನ್ನಿಧ್ಯದ ಜೀವಂತ ಸಂಕೇತಗಳಾಗುವಂತೆ ಆಹ್ವಾನಿಸುತ್ತಾನೆ ಎಂದರು.

ಪವಿತ್ರ ಗುರುವಾರದ ಅಂಗವಾಗಿ ಚರ್ಚ್ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ಜರುಗಿದವು. ಶುಕ್ರವಾರ ಯೇಸುವನ್ನು ಶಿಲುಬೆಗೇರಿಸಿದ ದಿನವಾವಾಗಿದ್ದು, ಕ್ರೈಸ್ತರು ಶುಭ ಶುಕ್ರವಾರ (ಗುಡ್ ಫ್ರೈಡೆ)ವಾಗಿ ಆಚರಿಸಲಿದ್ದಾರೆ. ಅಂದು ಧ್ಯಾನ, ಉಪವಾಸ ನಡೆಯಲಿದೆ. ಯೇಸುವಿನ ಶಿಲುಬೆಯ ಹಾದಿಯನ್ನು ನೆರವೇರಿಸಲಾಗುತ್ತದೆ.

ಜಿಲ್ಲೆಯ ವಿವಿಧ ಚರ್ಚುಗಳಲ್ಲಿ ಆಯಾ ಚರ್ಚುಗಳ ಧರ್ಮಗುರುಗಳ ನೇತೃತ್ವದಲ್ಲಿ ಪವಿತ್ರ ಗುರುವಾರದ ಬಲಿಪೂಜೆ ಹಾಗೂ 12 ಮಂದಿ ಪ್ರೇಷಿತರ ಪಾದಗಳನ್ನು ತೊಳೆಯುವ ವಿಧಿ ವಿಧಾನಗಳು ಜರುಗಿದವು.

ಉಡುಪಿ ಶೋಕಮಾತಾ ಚರ್ಚಿನಲ್ಲಿ ಧರ್ಮಗುರುಗಳಾದ ವಂ|ಚಾರ್ಲ್ಸ್ ಮಿನೇಜಸ್, ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ವಂ|ಡೆನಿಸ್ ಡೆಸಾ, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ|ಪಾವ್ಲ್ ರೇಗೊ, ಶಿರ್ವ ಆರೋಗ್ಯ ಮಾತಾ ಚರ್ಚಿನಲ್ಲಿ ವಂ|ಡಾ|ಲೆಸ್ಲಿ ಡಿಸೋಜಾ, ಕಾರ್ಕಳ ಸಂತ ಲಾರೇನ್ಸ್ ಬಸಿಲಿಕಾದಲ್ಲಿ ವಂ|ಆಲ್ಬನ್ ಡಿಸೋಜಾ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...