ಉಡುಪಿ | ಕೊನೆಗೂ ಬರಲಿಲ್ಲ ಸರಕಾರಿ ಬಸ್ ! ನಿರಾಸೆಯಿಂದ ಮರಳಿದ ಪ್ರಯಾಣಿಕರು, ಖಾಸಗಿ ಬಸ್ ನವರ ಲಾಬಿ ?

Date:

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಅಂಗಾರಕಟ್ಟೆಗೆ ಬಹು ನಿರೀಕ್ಷಿತ ಸಾರ್ವಜನಿಕರಿಗೆ ಕೊಟ್ಟಿರುವ ಭರವಸೆಯಂತೆ ಉಡುಪಿ ಹಾಗೂ ಅಂಗಾರಕಟ್ಟೆಯ ನಡುವೆ ಸರಕಾರಿ ಬಸ್ ಸಂಚಾರ ಫೆಬ್ರವರಿ 3 ಸೋಮವಾರದಂದು ವಿಸ್ತರಣೆಯಾಗಿ ಈ ಮಾರ್ಗದಲ್ಲಿ ಸರಕಾರಿ ಬಸ್ಸು ಸಂಚಾರ ಮಾಡುತ್ತಿದೆ ಎಂದು ಸಾರ್ವಜನಿಕರು ಆ ಭಾಗದಲ್ಲಿ ಬಸ್ಸನ್ನು ಸ್ವಾಗತಿಸಲು ಬ್ಯಾನರ್ ಬಂಟೀಸ್ ಅಳವಡಿಸಿ, ಬಸ್ಸಿಗೆ ಕಟ್ಟಲು ಬಾಳೆ, ಶೃಂಗಾರ ಮಾಡಲು ಹೂವು ತೆಗೆದುಕೊಂಡು ಬಸ್ಸನ್ನ ಸ್ವಾಗತಿಸಲು ಸಜ್ಜಾಗಿದ್ದರು ಕಾರಣಾಂತರದಿಂದ ಸರಕಾರಿ ಬಸ್ಸು ಬಾರದೆ ಈ ಮಾರ್ಗದಲ್ಲಿ ಸಂಚರಿಸದೆ ಸಾರ್ವಜನಿಕರಿಗೆ ನಿರಾಸೆ ಉಂಟು ಮಾಡಿದ ಘಟನೆ ಇಂದು ಮುಂಜಾನೆ ನಡೆದಿದೆ.

1004321228

ಗುಂಡು ಪಾದೆಯಲ್ಲಿಯೂ ಸಾರ್ವಜನಿಕರು ಸರಕಾರಿ ಬಸ್ಸು ಈ ಮಾರ್ಗದಲ್ಲಿ ಸಂಚರಿಸುತ್ತದೆ ಎಂದು ತಿಳಿದು ಸರಕಾರಿ ಬಸ್ಸನ್ನು ಸ್ವಾಗತಿಸಲು ಕಾತರದಿಂದ ಕಾಯುತ್ತಿದ್ದರು ಅಲ್ಲಿಯ ಪ್ರಯಾಣಿಕರಿಗೂ ನಿರಾಸೆ ಉಂಟು ಮಾಡಿದೆ ಮೊದಲೇ ನಿಗದಿಯಾಗಿದ್ದ ಸರಕಾರಿ ಬಸ್ಸು ಅಂಗಾರಕಟ್ಟೆ ಹೆಲ್ತ್ ಸೆಂಟರ್ ತನಕ (ಪ್ರಾರ್ಥಮಿಕ ಆರೋಗ್ಯ ಕೇಂದ್ರ ) ಅಲ್ಲಿಯ ತನಕ ಸರಕಾರಿ ಬಸ್ ಓಡಾಟ ನಡೆಸುತ್ತದೆ ಎಂದು ದೂರವಾಣಿಯ ಮೂಲಕ ಮಾಹಿತಿ ಒದಗಿತ್ತು. ಮಂಗಳೂರು ಸಂಚಾರಿ ಆಯುಕ್ತರು ಹಾಗೂ ಉಡುಪಿಯ ಬಸ್ ಡಿಪೋ ಮ್ಯಾನೇಜರ್ ಮಾಹಿತಿಯಂತೆ ಬಸ್ ಬರುವುದು ಖಚಿತವಾಗಿದ್ದರಿಂದ ಸ್ಥಳೀಯರು ಸಾರ್ವಜನಿಕರೇ ಸ್ವಾಗತಿಸಲು ಸಿದ್ದರಾಗಿದ್ದರು.

1004325837

ಈ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಗಣೇಶ್ ಸರಳಬೆಟ್ಟು ತಾಂತ್ರಿಕ ದೋಷದಿಂದ ಬಸ್ಸು ಹೊರಡಲಿಲ್ಲ ಎಂದು ಡಿಪೋ ಮ್ಯಾನೇಜರ್ ತಿಳಿಸಿದ್ದಾರೆ, ಇದರ ಹಿಂದೆ ಖಾಸಗೀ ಬಸ್ ನವರ ಲಾಭಿ ಇದೆಯೋ ಎಂದು ಸಹ ತಿಳಿಯುತ್ತಿಲ್ಲ ಇತ್ತ ಖಾಸಗೀ ಬಸ್ಸು ಸಂಚಾರಿಸದೆ. ಈ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿನಿತ್ಯ ಸಂಚರಿಸುವ ಉದ್ಯೋಗಸ್ಥರು ಸರಕಾರಿ ಬಸ್ಸು ಬರುತ್ತದೆ ಎಂದು ಹುಮ್ಮಸ್ಸಿನಿಂದ ಸ್ವಾಗತಿಸಲು ಸನ್ನದ್ದರಾಗಿದ್ದರು. ಸರಕಾರಿ ಬಸ್ಸು ಬಾರದೆ ಪ್ರಯಾಣಿಕರಿಗೆ ನಿರಾಸೆ ಉಂಟು ಮಾಡಿದೆ. ಈಗಾಗಲೇ ಉಡುಪಿ ಭಾಗದಿಂದಲೂ ಸರಕಾರಿ ಬಸ್ಸು ಹೊರಟು, ಓಂತಿ ಬೆಟ್ಟಿನ ಮೂಲಕ ಪೆರ್ಲಂಕಿಲ ಮಹಾಗಣಪತಿ ದೇವಸ್ಥಾನದ ತನಕ ಸರ್ಕಾರಿ ಬಸ್ಸು ಸಂಚರಿಸಬೇಕೆಂದು ಉಡುಪಿಯ ಡಿಪೋ ಮ್ಯಾನೇಜರ್ ಗೆ ನಿಟ್ಟೂರಿನ ಬಸ್ ಡಿಪೋಗೆ ಹೋಗಿ ಈ ಹಿಂದೆ ಸ್ಥಳೀಯ ನಿವಾಸಿಗಳ ಸೇರಿಕೊಂಡು ಸರಕಾರಿ ಬಸ್ಸು ಬೇಕೆಂದು ಮನವಿ ಸಲ್ಲಿಸಿದ್ದೆವು. ಮೂಡುಬೆಳ್ಳೆ ಮೂಲಕವಾದರೂ ಸರಕಾರಿ ಬಸ್ಸು ಸಂಚರಿಸುತ್ತೇವೆ ಎಂದು ಮಾಹಿತಿ ನೀಡಿದ್ದರು ಆದರೆ ಈ ಭಾಗದ ಜನರಿಗೆ ಅತ್ಯಂತ ಹೆಚ್ಚಿನ ನಿರಾಸೆಯಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟಿನಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಶಕ್ತಿ ಯೋಜನೆಯನ್ನು ಪಡೆಯುವಲ್ಲಿ ಕರಾವಳಿಯ ಅದರಲ್ಲೂ ಗ್ರಾಮೀಣ ಭಾಗದ ಮಹಿಳೆಯರು ಪಡೆಯುವಲ್ಲಿ ವಿಫಲರಾಗಿದ್ದಾರೆ ಸರ್ಕಾರ ಈ ಬಗ್ಗೆ ಹೆಚ್ಚಿನ ಗಮನವಹಿಸಿ ಗ್ರಾಮೀಣ ಭಾಗದ ಜನರಿಗೂ ಅನುಕೂಲ ಮಾಡಬೇಕಾಗಿದೆ..

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...