ಉಡುಪಿ | ಹನಿ ಟ್ರ್ಯಾಪ್ ಮೂಲಕ ಹಲ್ಲೈಗೈದು ಲೂಟಿಗೆ ಯತ್ನ, ಆರೋಪಿಗಳ ಬಂಧನ

Date:

ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಲೂಟಿಗೈದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಕುರಿತು ಸಂದೀಪ್ ಕುಮಾರ್ ಎಂಬವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಂಧಿತರನ್ನು ಬೈಂದೂರು ನಾವುಂದ ಗ್ರಾಮದ ಸವದ್ (28), ಕುಂದಾಪುರ ಗುಲ್ವಾಡಿ ಗ್ರಾಮದ ಸೈಪುಲ್ಲಾ (38), ಕುಂದಾಪುರ ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ ( 36), ಕುಂದಾಪುರ ಕುಂಭಾಶಿ ಗ್ರಾಮದ ಅಬ್ದುಲ್ ಸತ್ತಾರ್ ( 23), ಶಿವಮೊಗ್ಗ ಜಿಲ್ಲೆಯ ಹೊಸನಗರದ ಅಬ್ದುಲ್ ಅಜೀಜ್ (26) ಹಾಗೂ ಕುಂದಾಪುರ ಕೋಡಿ ನಿವಾಸಿ ಆಸ್ಮಾ (43) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆ ವಿವರ: ಸಂದೀಪ್ ಕುಮಾರ್ ಎಂಬವರಿಗೆ ಮೂರು ತಿಂಗಳ ಹಿಂದೆ ಅಬ್ದುಲ್ ಸವಾದ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಬಾತ ಪರಿಚಯವಾಗಿದ್ದು, ಆತ ಆನ್ಮಾನ ಎಂಬಾಕೆಯ ಪರಿಚಯ ಮಾಡಿಕೊಟ್ಟು ಮೊಬೈಲ್ ಸಂಖ್ಯೆ ನೀಡಿ ಆಕೆಯೊಂದಿಗೆ ಲೈಂಗಿಕ ಸಂಪರ್ಕಬಹುದು ಎಂದು ತಿಳಿಸಿದ್ದನು. ಅದರಂತೆ ಸಂದೀಪ್, ಆರೋಪಿ ಆಸ್ಮಾಳಿಗೆ ಕರೆಮಾಡಿದ್ದರು. ಆಕೆ ಸೆ.2ರಂದು ಸಂಜೆ 6.30ಕ್ಕೆ ಕುಂದಾಪುರದ ಮಲ್ನಾಡ್ ಪೆಟ್ರೋಲ್ ಬಂಕ್ ಬಳಿಯ ಆರ್ ಆರ್ ಪ್ಲಾಝಾ ಬಳಿ ಬರಲು ತಿಳಿಸಿದ್ದಳು. ಅದರಂತೆ ಸಂದೀಪ್ ಆಟೋ ರಿಕ್ಷಾದಲ್ಲಿ ಅಲ್ಲಿಗೆ ಹೋಗಿದ್ದನು. ಬಳಿಕ ಆರೋಪಿ ಆಸ್ಮಾ ಅವಳ ಮನೆಗೆ ಕರೆದುಕೊಂಡು ಹೋಗಿದ್ದಳು. ಬಳಿಕ ಉಳಿದ ಆರೋಪಿಗಳನ್ನು ಕರೆ ಮಾಡಿ ಕರೆಯಿಸಿಕೊಂಡು 3 ಲಕ್ಷ ಹಣ ಕೊಟ್ಟು ಹೋಗಬೇಕು ಎಂದು ಚಾಕು ತೋರಿಸಿ ಹಣ ಕೊಡುವಂತೆ ಬೆದರಿಸಿದ್ದಾರೆ. ಬಳಿಕ ಸಂದೀಪ್ ಓಡಿ ಹೋಗಲು ಪ್ರಯತ್ನಿಸಿದಾಗ ಆರೋಪಿತಗಳಾದ ಸವದ್, ಸೈಪುಲ್ಲಾ, ಮೊಹಮ್ಮದ್ ನಾಸೀರ್ ಶರೀಫ್, ಅಬ್ದುಲ್ ಸತ್ತಾ‌ರ್ ಮತ್ತು ಅಬ್ದುಲ್ ಅಜೀಜ್ ಸೇರಿಕೊಂಡು ಸಂದೀಪ್ ಕೈಗಳನ್ನು ನೈಲಾನ್ ಹಗ್ಗದಿಂದ ಕಟ್ಟಿ ಕೈಯಿಂದ ಹಲ್ಲೆ ಮಾಡಿದ್ದಾರೆ. ರಾಡ್ ನಿಂದ ಎಡ ಭುಜ ಹಾಗೂ ಬೆನ್ನಿಗೆ ಹೊಡೆದು ಬಳಿಕ ಪ್ಯಾಂಟ್ ಜೇಬಿನಲ್ಲಿದ್ದ 6,200 ರೂಪಾಯಿನ್ನು ಬಲವಂತದಿಂದ ಕಸಿದುಕೊಂಡಿದ್ದಾರೆ. ಆರೋಪಿಗಳು ಇನ್ನೂ ಹಣ ನೀಡುವಂತೆ ಬೆದರಿಸಿದ್ದಾರೆ. ಆಗ ಸಂದೀಪ್ ಹಣ ಇಲ್ಲ ಎಂದು ಹೇಳಿದಕ್ಕೆ, ನಿನ್ನನ್ನು ಇಲ್ಲಿಯೇ ಕೊಲೆ ಮಾಡಿ ಹುಗಿದು ಹಾಕುತ್ತೇವೆಂದು ಬೆದರಿಸಿ ಮತ್ತೆ ಕೈಯಿಂದ ಹೊಡೆದಿದ್ದಾರೆ. ಇದಕ್ಕೆ ಹೆದರಿದ ಸಂದೀಪ್, ಸೈಪುಲ್ಲಾ ಖಾತೆಗೆ 30 ಸಾವಿರ ಹಣ ಹಾಕಿದ್ದಾರೆ. ಆ ಬಳಿಕ ಬಲತ್ಕಾರವಾಗಿ ಎಟಿಎಂ ಕಾರ್ಡ್ ನ್ನು ಕಿತ್ತುಕೊಂಡು ಪಿನ್ ನಂಬ್ರ ಪಡೆದು ಕೊಂಡು 40 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ ಎಂದು ಸಂದೀಪ್ ದೂರಿನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...