ಉಡುಪಿ | ಕೈಂಡ್ ಹಾರ್ಟ್ ಟ್ರಸ್ಟ್ ಬಾಳ್ಕುದ್ರು – ಹಂಗಾರಕಟ್ಟೆ ವತಿಯಿಂದ ಪ್ರತಿಭಾ ಪುರಸ್ಕಾರ

Date:

ದೂರದೃಷ್ಠಿಯೊಂದಿಗೆ ಗುರಿ ಮತ್ತು ಉದ್ದೇಶವನ್ನು ಹೊಂದಿರುವ ಸಂಸ್ಥೆ ಧೀರ್ಘ ಕಾಲ ಕಾರ್ಯ ನಿರ್ವಹಿಸುತ್ತದೆ ಎಂದು ಸಾಸ್ತಾನ ಸಂತ ಅಂತೋನಿ ಚರ್ಚಿನ ಧರ್ಮಗುರು ವಂ|ಸುನೀಲ್ ಡಿಸಿಲ್ವಾ ಹೇಳಿದರು.

ಅವರು ಬುಧವಾರ ಸಂಜೆ ಕೈಂಡ್ ಹಾರ್ಟ್ ಟ್ರಸ್ಟ್ ಬಾಳ್ಕುದ್ರು ಹಂಗಾರಕಟ್ಟೆ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಆಶ್ರಯದಲ್ಲಿ ನಡೆದ ಪ್ರತಿಭಾವಂತ ವಿಧ್ಯಾರ್ಥಿಗಳಿಗಾಗಿ ರೋಟರಿ ಭವನ ಬ್ರಹ್ಮಾವರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾವು ನೀಡುವ ಸೇವೆ ಇನ್ನೊಬ್ಬರ ಹೃದಯವನ್ನು ಮುಟ್ಟುವಂತದ್ದಾಗಿರಬೇಕು. ನಿರಂತರ ಉತ್ತಮ ಕಾರ್ಯಗಳ ಮೂಲಕ ನಾವು ಸಮಾಜದಲ್ಲಿ ಶಾಶ್ವತವಾದ ಹೆಸರು ಮಾಡಬೇಕು. ಇನ್ನೊಬ್ಬರಿಗೆ ಮುಕ್ತ ಹೃದಯದಿಂದ ಮಾಡಿದ ಸೇವೆಗೆ ಭಗವಂತನ ಪ್ರತಿಫಲ ಸದಾ ಇದೆ. ಹಸಿದವನಿಗೆ ಕೊಟ್ಟ ರೊಟ್ಟಿಯ ಸಹಾಯ ದೇವರಿಗೆ ಸದಾ ಪ್ರೀಯವಾದುದು. ಆದ್ದರಿಂದ ನಮ್ಮ ಸೇವೆಯನ್ನು ಪ್ರೀತಿಯಿಂದ ಮಾಡೋಣ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ|ಮಥಾಯಸ್ ಡಾಯಸ್ ಮಾತನಾಡಿ ವಿದ್ಯಾರ್ಥಿಗಳ ಸಾಧನೆ ಕೇವಲ ಹೆತ್ತವರಿಗೆ, ಮಾತ್ರವಲ್ಲದೆ ಸಮಾಜಕ್ಕೂ ಗೌರವ ತಂದು ಕೊಡುತ್ತದೆ. ವಿದ್ಯಾರ್ಥಿಗಳ ಪರಿಶ್ರಮದಲ್ಲಿ ಹೆತ್ತವರ ಪಾತ್ರ ಮಹತ್ತರವಾದುದಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಸಾಧನೆಯನ್ನು ಮೊಟಕುಗೊಳಿಸದು ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ತೋರುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಾಲೂಕು ವ್ಯಾಪ್ತಿಯ 10 ಪ್ರೌಢ ಶಾಲೆಗಳ ಹತ್ತನೇ ತರಗತಿಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಗೌರವಿಸಲಾಯಿತು. ಕೈಂಡ್ ಹಾರ್ಟ್ ಟ್ರಸ್ಟ್ ಅಧ್ಯಕ್ಷರಾದ ಹೆನ್ರಿ ಲೂವಿಸ್ ಪ್ರಾಸ್ತಾವಿಕ ಸಂದೇಶದಲ್ಲಿ ಟ್ರಸ್ಟ್ ಮೂಲಕ ಸಮಾಜದಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಮುಂದಿನ ದಿನಗಳಗಲ್ಲಿ ವೃದ್ದರಿಗಾಗಿ ವೃದ್ಧಾಶ್ರಮವನ್ನು ನಿರ್ಮಿಸುವ ಚಿಂತನೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬ್ರಹ್ಮಾವರ ರೋ. ಸತೀಶ್ ಶೆಟ್ಟಿ ವಹಿಸಿದ್ದರು. ರೋ. ಪಿಹೆಚ್ ಎಫ್ ವಾಲ್ಟರ್ ಸಿರಿಲ್ ಪಿಂಟೊ, ರೋ. ಜಗದೀಶ್ ಕೆಮ್ಮಣ್ಣು, ರೋ. ಶ್ರೀಧರ್ ಶೆಟ್ಟಿ, ರೋ. ಹರೀಶ್ ಕುಂದರ್, ರೋ. ರೆಕ್ಸನ್ ಮೋನಿಸ್, ಚೇತನಾ ಪ್ರೌಢ ಶಾಲೆ ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಜಿ ಹಾಗೂ ಇತರರು ಉಪಸ್ಥಿತರಿದ್ದರು.
ಡೆನಿಸ್ ರೊಡ್ರಿಗಸ್ ವಿದ್ಯಾರ್ಥಿಗಳನ್ನು ಪರಿಚಯಿಸಿದರು, ಪ್ರಶಾಂತ್ ಶೆಟ್ಟಿ ಪ್ರಾರ್ಥನೆ ನೆರವೇರಿಸಿ, ರೂಬಿನಾ ರೊಡ್ರಿಗಸ್ ಸ್ವಾಗತಿಸಿ, ಸುಜಾತಾ ಅಂದ್ರಾದೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...