ಉಡುಪಿ | ಕಾಲೇಜು ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ; ಪುರಾವೆಗಳಿಲ್ಲವೆಂದು ಎಸ್‌ಪಿ ಸ್ಪಷ್ಟನೆ

Date:

ಕೆಲ ದಿನಗಳ ಹಿಂದೆ ಖಾಸಗಿ ಕಾಲೇಜೊಂದರ ವಾಶ್ ರೂಮಿನಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್‌ಪಿ ಅಕ್ಷಯ್ ಮಚೀಂದ್ರ ಸ್ಪಷ್ಟನೆ ನೀಡಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, “ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು” ಎಂದು ತಿಳಿಸಿದ್ದಾರೆ.

“ಹಿಡನ್ ಕ್ಯಾಮೆರಾ ಅಥವಾ ಅಂತಹ ಯಾವುದೇ ಸಾಧನ ಬಳಸಿರುವ ಯಾವುದೇ ಕುರುಹು ಕಂಡುಬಂದಿಲ್ಲ. ಇಂತಹ ಫೋಟೊ, ವೀಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್‌ ಮೇಲ್‌ಗೆ ಬಳಸಿಕೊಳ್ಳುತ್ತಿದ್ದಾರೆಂಬ ವದಂತಿಗಳನ್ನೂ ಹಬ್ಬಿಸಲಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು, ನಮಗೂ ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ತಿಳಿಯದೆ ಸುಮ್ಮನೆ ಮಾಹಿತಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಪ್ರಸಾರ ಮಾಡಲಾಗಿಲ್ಲ. ವಿಡಿಯೋ ದೊರಕಿದರೆ ಯಾರಾದರೂ ಅದನ್ನು ನಮ್ಮ ಗಮನಕ್ಕೆ ತರಬಹುದು. ರಶ್ಮಿ ಸಾವಂತ್ ಹೆಸರಿನಲ್ಲಿ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಟ್ವಿಟ್ಟರ್ ಖಾತೆಯವರು ಸತ್ಯಾಸತ್ಯತೆಯನ್ನು ಪರಿಶೀಲಿಸಲು ಬಯಸಿದ್ದರು ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ” ಎಂದು ಹೇಳಿದ್ದಾರೆ.

“ಯಾವುದೇ ಎಫ್ಐಆರ್ ಅಥವಾ ಯಾವುದೇ ದೂರು ದಾಖಲಾಗಿಲ್ಲ. ನಾವು ಸುಮೊಟೊ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ. ಅದರಲ್ಲಿಯೂ ಏನೂ ಸಿಕ್ಕಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಆರು ಮಂದಿ ಹೈಕೋರ್ಟ್‌ ನ್ಯಾಯಾಧೀಶರಿಗೆ ಜೀವ ಬೆದರಿಕೆ; ₹50 ಲಕ್ಷಕ್ಕೆ ಡಿಮಾಂಡ್

“ಘಟನೆಗೆ ಸಂಬಂಧಪಟ್ಟಂತೆ ಕಾಲೇಜು ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ. ಇದನ್ನು ಮೋಜಿಗಾಗಿ ಮಾಡಲಾಗಿದ್ದು ನಂತರ ವೀಡಿಯೊಗಳನ್ನು ಅಳಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಕಾಲೇಜು ಆಡಳಿತದೊಂದಿಗೆ ಹೇಳಿದ್ದಾರೆ” ಎಂದರು.

ಘಟನೆಗೆ ಸಂಬಂಧಿಸಿದಂತೆ ಯಾವುದೇ ಪರಿಶೀಲಿಸದ ವಿಷಯಗಳನ್ನು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳದಂತೆ ಎಸ್‌ಪಿ ಸಾರ್ವಜನಿಕರಿಗೆ ವಿನಂತಿಸಿದ್ದು, ಸಾರ್ವಜನಿಕರು ಈ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರುವಂತೆ ಮನವಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...